ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ - 8: 1-10
ಜನರೆಲ್ಲರೂ ಉಂಡು ತೃಪ್ತರಾದರು.
ಜನರು ಪುನ: ದೊಡ್ಡ ಸಂಖ್ಯೆಯಲ್ಲಿ ಬಂದು ನೆರದಿದ್ದರು. ಊಟ ಮಾಡಲು ಅವರಲ್ಲಿ ಆಹಾರವಿರಲಿಲ್ಲ.ಆಗ ಯೇಸುಸ್ವಾಮಿ ಶಿಷ್ಯರನ್ನು ಕರೆದು” ಈ ಜನರು ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದ್ದಾರೆ; ಊಟಕ್ಕೆ ಇವರಲ್ಲಿ ಏನೂ ಇಲ್ಲ. ಇವರನ್ನು ಕಂಡಾಗ ನನ್ನ ಹೃದಯ ಕರಗುತ್ತದೆ. ಬರೀ ಹೊಟ್ಟೆಯಲಿ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು.ಕೆಲವರಂತೂ ಬಹುದೂರದಿಂದ ಬಂದಿದ್ದಾರೆ,” ಎಂದರು. ಅದಕ್ಕೆ ಶಿಷ್ಯರು “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ? ಎಂದು ಮರುನುಡಿದರು. ಯೇಸು “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಲು ಅವರು,” ಏಳು ಇವೆ,” ಎಂದರು. ಯೇಸು ಜನರ ಗುಂಪಿಗೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಆಜ್ಞಾಪಿಸಿದರು. ಅನಂತರ ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಸಲ್ಲಿಸಿ,ಅವುಗಳನ್ನು ಮುರಿದು, ಜನರ ಗುಂಪಿಗೆ ಬಡಿಸಲು ಶಿಷ್ಯರಿಗೆ ಕೊಟ್ಟರು. ಅವರು ಬಡಿಸಿದರು.ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು. ಯೇಸು ಅವುಗಳಿಗೆ ದೇವಸ್ತುತಿಮಾಡಿ ಅವುಗಳನ್ನು ಹಂಚಬೇಕೆಂದು ಆಜ್ಞಾಪಿಸಿದರು. ಜನರೆಲ್ಲರೂ ಉಂಡು ತೃಪ್ತರಾದರು. ಉಳಿದ ರೊಟ್ಟಿಯ ತುಂಡುಗಳನ್ನು ಒಟ್ಟುಗೂಡಿಸಿದಾಗ. ಅವು ಏಳು ಕುಕ್ಕೆಗಳ ತುಂಬ ಆದವು. ಊಟ ಮಾಡಿದವರ ಸಂಖ್ಯೆಯ ನಾಲ್ಕು ಸಾವಿರ. ಊಟವಾದ ಬಳಿಕ ಯೇಸು ಜನರನ್ನು ಕಳುಹಿಸಿಕೊಟ್ಟು ವಿಳಂಬ ಮಾಡದೆ ದೋಣಿಯನ್ನು ಹತ್ತಿ, ಶಿಷ್ಯರೊಡನೆ ದಲ್ಮನೂಥ ಎಂಬ ಪ್ರದೇಶಕ್ಕೆ ಹೋದರು.
Subscribe to:
Post Comments (Atom)
15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ
ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: ಯೆಶಾಯ 52:13-53:12 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...
No comments:
Post a Comment