ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ - 8: 1-10
ಜನರೆಲ್ಲರೂ ಉಂಡು ತೃಪ್ತರಾದರು.
ಜನರು ಪುನ: ದೊಡ್ಡ ಸಂಖ್ಯೆಯಲ್ಲಿ ಬಂದು ನೆರದಿದ್ದರು. ಊಟ ಮಾಡಲು ಅವರಲ್ಲಿ ಆಹಾರವಿರಲಿಲ್ಲ.ಆಗ ಯೇಸುಸ್ವಾಮಿ ಶಿಷ್ಯರನ್ನು ಕರೆದು” ಈ ಜನರು ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದ್ದಾರೆ; ಊಟಕ್ಕೆ ಇವರಲ್ಲಿ ಏನೂ ಇಲ್ಲ. ಇವರನ್ನು ಕಂಡಾಗ ನನ್ನ ಹೃದಯ ಕರಗುತ್ತದೆ. ಬರೀ ಹೊಟ್ಟೆಯಲಿ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು.ಕೆಲವರಂತೂ ಬಹುದೂರದಿಂದ ಬಂದಿದ್ದಾರೆ,” ಎಂದರು. ಅದಕ್ಕೆ ಶಿಷ್ಯರು “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ? ಎಂದು ಮರುನುಡಿದರು. ಯೇಸು “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಲು ಅವರು,” ಏಳು ಇವೆ,” ಎಂದರು. ಯೇಸು ಜನರ ಗುಂಪಿಗೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಆಜ್ಞಾಪಿಸಿದರು. ಅನಂತರ ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಸಲ್ಲಿಸಿ,ಅವುಗಳನ್ನು ಮುರಿದು, ಜನರ ಗುಂಪಿಗೆ ಬಡಿಸಲು ಶಿಷ್ಯರಿಗೆ ಕೊಟ್ಟರು. ಅವರು ಬಡಿಸಿದರು.ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು. ಯೇಸು ಅವುಗಳಿಗೆ ದೇವಸ್ತುತಿಮಾಡಿ ಅವುಗಳನ್ನು ಹಂಚಬೇಕೆಂದು ಆಜ್ಞಾಪಿಸಿದರು. ಜನರೆಲ್ಲರೂ ಉಂಡು ತೃಪ್ತರಾದರು. ಉಳಿದ ರೊಟ್ಟಿಯ ತುಂಡುಗಳನ್ನು ಒಟ್ಟುಗೂಡಿಸಿದಾಗ. ಅವು ಏಳು ಕುಕ್ಕೆಗಳ ತುಂಬ ಆದವು. ಊಟ ಮಾಡಿದವರ ಸಂಖ್ಯೆಯ ನಾಲ್ಕು ಸಾವಿರ. ಊಟವಾದ ಬಳಿಕ ಯೇಸು ಜನರನ್ನು ಕಳುಹಿಸಿಕೊಟ್ಟು ವಿಳಂಬ ಮಾಡದೆ ದೋಣಿಯನ್ನು ಹತ್ತಿ, ಶಿಷ್ಯರೊಡನೆ ದಲ್ಮನೂಥ ಎಂಬ ಪ್ರದೇಶಕ್ಕೆ ಹೋದರು.
ಪವಿತ್ರ ವಾಚನಗಳನ್ನು ಬ್ಲಾಗಿನ ಮೂಲಕ ತಲುಪಿಸುವ ಚಿಗುರು, ಸುಶ್ರಾವ್ಯ ಹಾಗೂ ಸಂಚಲನ ಬಳಗದ ಪ್ರಯತ್ನವಿದು. ಓದಿ ಧ್ಯಾನಿಸುವ ಭಾಗ್ಯ ನಮ್ಮದಾಗಲಿ
Subscribe to:
Post Comments (Atom)
09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ
ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: ಯೆಶಾಯ 58:1-9 ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 18:9-18 ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು, ನಾನು ನಿನ್ನೊಡನೆ ಇದ್...
No comments:
Post a Comment