14.02.10 - ಅಷ್ಟ ಭಾಗ್ಯಗಳು

ಸಂತ ಲೂಕನು ಬರೆದ ಶುಭಸಂದೇಶದಿಂದ ವಾಚನ  - 6: 17,20-26

"ದೀನ ದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು."

ಅನಂತರ ಯೇಸುಸ್ವಾಮಿ ಅವರೊಂದಿಗೆ ಬೆಟ್ಟದಿಂದ ಇಳಿದು, ಸಮತಟ್ಟಾದ ಸ್ಥಳಕ್ಕೆ ಬಂದರು. ಶಿಷ್ಯರ ದೊಡ್ಡ ಗುಂಪು ಅಲ್ಲಿ ನೆರದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಸಮುದ್ರ ತೀರದ ಟೈರ್ ಹಾಗೂ ಸಿದೋನ್ ಪಟ್ಟಣಗಳಿಂದಲೂ ಜನಸಮೂಹ ಅಲ್ಲಿಗೆ ಬಂದಿತ್ತು. ಯೇಸುಸ್ವಾಮಿ ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು: “ದೀನ ದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು. ಈಗ ಹಸಿದಿರುವವರೇ, ನೀವು ಭಾಗ್ಯವಂತರು! ನಿಮಗೆ ಸಂತೃಪ್ತಿಯಾಗುವುದು. ಈಗ ಅತ್ತು ಗೋಳಾಡುವವರೇ, ನೀವು ಭಾಗ್ಯವಂತರು! ನೀವು ನಕ್ಕುನಲಿದಾಡುವಿರಿ.! ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ,ಬಹಿಷ್ಕರಿಸಿ,ಧಿಕ್ಕರಿಸಿ ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸಿದಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು.

ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲ ಮಹತ್ತರವಾದುದು.: ಆದರೆ ಧನಿಕರೇ, ನಿಮಗೆ ಧಿಕ್ಕಾರ! ನೀವು ಸುಖಜೀವನವನ್ನು ಅನುಭವಿಸಿಯಾಗಿದೆ. ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ.ಈಗ ನಕ್ಕುನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದು:ಖಿಸಿ ಗೋಳಾಡುವಿರಿ. ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ! ಕಪಟ ಪ್ರವಾದಿಗಳೂ ಈ ಜನರ ಪೂರ್ವಜರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು.

No comments:

Post a Comment

28.05.2026 - ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು.

  ಮೊದಲನೆಯ ವಾಚನ: 1 ಪೇತ್ರ 2:2-5,9-12 ಸಹೋದರರೇ, ಹೊಸಜನ್ಮ ಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ. ಜೀವೋದ್...