15.02.10 - "ಒಂದು ಅದ್ಭುತವನ್ನು ಮಾಡಿ ತೋರಿಸು"

ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ - 8:11-13

"ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ?"

ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, ಅವರೊಡನೆ ತರ್ಕಮಾಡಿ, ಅವರನ್ನು ಪರೀಕ್ಷಿಸುವ ಉದ್ದೇಶದಿಂದ:" ನೀನು ದೇವರಿಂದ ಬಂದವನೆಂಬುದನ್ನು ಸೂಚಿಸಲು ಒಂದು ಅದ್ಭುತವನ್ನು ಮಾಡಿ ತೋರಿಸು," ಎಂದು ಕೇಳಿದರು. ಇದನ್ನು ಕೇಳಿ ಯೇಸು, ಮನಸ್ಸಿನಲ್ಲಿ ನೊಂದುಕೊಂಡು, ನಿಟ್ಟುಸಿರಿಟ್ಟು,"ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ? ಇದಕ್ಕೆ ಅಂಥ ಯಾವ ಸಂಕೇತವನ್ನು ಕೊಡಲಾಗದು, ಇದು ಖಂಡಿತ," ಎಂದರು. ಅನಂತರ ಯೇಸು ಅವರನು ಬಿಟ್ಟು, ದೋಣಿಯನ್ನು ಹತ್ತಿ ಸರೋವರದ ಆಚೆದಡಕ್ಕೆ ಹೊರಟು ಹೋದರು.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...