"ಕಿವಿಗಳಿದ್ದೂ ಕೇಳಲಾರಿರಾ? ಕಣ್ಣುಗಳಿದ್ದೂ ನೋಡಲಾರಿರಾ?"
ಶಿಷ್ಯರು ಬುತ್ತಿಯನ್ನು ಕಟ್ಟಿಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಒಂದೇ ಒಂದು ರೊಟ್ಟಿಯಿತ್ತು. ಯೇಸುಸ್ವಾಮಿ ಅವರಿಗೆ. " ಎಚ್ಚರಿಕೆ, ಫರಿಸಾಯರ ಹಾಗೂ ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ," ಎಂದು ಹೇಳಿದರು. ಇದನ್ನು ಕೇಳಿದ ಶಿಷ್ಯರು,’ ನಮ್ಮಲ್ಲಿ ರೊಟ್ಟಿಯಿಲ್ಲದ್ದರಿಂದ ಹೀಗೆ ಹೇಳುತ್ತಿರಬಹುದೇ" ಎಂದು ಚರ್ಚಿಸತೊಡಗಿದರು. ಆ ಚರ್ಚೆಯನ್ನು ಯೇಸು ಗಮನಿಸಿ, ರೊಟ್ಟಿ ಇಲ್ಲವೆಂದು ಚರ್ಚೆ ಏಕೆ? ನಿಮಗೆ ಇನ್ನೂ ಅರಿವಾಗಲಿ, ಗ್ರಹಿಕೆಯಾಗಲಿ ಇಲ್ಲವೇ? ನೀವಿನ್ನೂ ಮಂದಮತಿಗಳಾಗಿರುವಿರೋ? ಕಿವಿಗಳಿದ್ದೂ ಕೇಳಲಾರಿರಾ? ಕಣ್ಣುಗಳಿದ್ದೂ ನೋಡಲಾರಿರಾ? ನಾನು ಐದು ರೊಟ್ಟಿಗಳಿಂದ ಐದು ಸಾವಿರ ಜನರನ್ನು ತೃಪ್ತಿ ಪಡಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬ ಒಟ್ಟುಗೂಡಿಸಿದಿರಿ? ನಿಮಗೆ ಜ್ಞಾಪಕವಿಲ್ಲವೇ?" ಎಂದು ಕೇಳಿದರು. "ಹನ್ನೆರಡು ಬುಟ್ಟಿಗಳು" ಎಂದು ಅವರು ಉತ್ತರವಿತ್ತರು.
"ಅಲ್ಲದೆ ನಾನು ಏಳು ರೊಟ್ಟಿಗಳಿಂದ ನಾಲ್ಕು ಸಾವಿರ ಜನರನ್ನು ತೃಪ್ತಿಪಡಿಸಿದಾಗ ಎಷ್ಟು ಕುಕ್ಕೆ ತುಂಬ ರೊಟ್ಟಿಯ ತುಂಡುಗಳನ್ನು ಒಟ್ಟುಗೂಡಿಸಿದಿರಿ?" ಎಂದು ಪುನ: ಅವರನ್ನು ಕೇಳಲು," ಏಳು ಕುಕ್ಕೆಗಳು,’ ಎಂದರು. ಆಗ ಯೇಸು," ಇಷ್ಟಾದರೂ ನಿಮಗಿನ್ನೂ ತಿಳುವಳಿಕೆ ಇಲ್ಲವೆ?" ಎಂದರು.
No comments:
Post a Comment