18.02.10 -"ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ"

ಸಂತ ಲೂಕನು ಬರೆದ ಶುಭ ಸಂದೇಶದಿಂದ ವಾಚನ - 9:22-25

ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅಥವಾ ತೆತ್ತರೆ ಅವನಿಗೆ ಅದರಿಂದ ಬರುವ ಲಾಭವಾದರೂ ಏನು?

ಯೇಸು ಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು:"ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ.ಸಭಾ ಪ್ರಮುಖರಿಂದಲೂ ಮುಖ್ಯ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೆಯ ದಿನ ಆತನು ಪುನರುತ್ಥಾನ ಹೊಂದುವನು," ಎಂದು ಅವರಿಗೆ ತಿಳಿಸಿದರು.

ಯೇಸುಸ್ವಾಮಿ ಎಲ್ಲರನ್ನೂ ನೋಡಿ ಹೇಳಿದ್ದೇನೆಂದರೆ:"ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ,ಅವನು ತನ್ನನ್ನು ತಾನೇ ಪರಿತ್ಯಜಿಸಿ,ತನ್ನ ಶಿಲುಬೆಯನ್ನು ಅನುದಿನವೂ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಿಸಲಿ.ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು.ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು.ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅಥವಾ ತೆತ್ತರೆ ಅವನಿಗೆ ಅದರಿಂದ ಬರುವ ಲಾಭವಾದರೂ ಏನು?

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...