ಸಂತ ಮತ್ತಾಯನು ಬರೆದ ಶುಭಸಂದೇಶದಿಂದ ವಾಚನ - 6: 7-15
"ಪ್ರಾರ್ಥನೆ ಮಾಡುವಾಗ ಪರಕೀಯರಂತೆ ನಿರರ್ಥಕ ಪದಗಳನ್ನು ಪಿಸಗುಟ್ಟಬೇಡಿ"
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು :ಪ್ರಾರ್ಥನೆ ಮಾಡುವಾಗ ಪರಕೀಯರಂತೆ ನಿರರ್ಥಕ ಪದಗಳನ್ನು ಪಿಸಗುಟ್ಟಬೇಡಿ. ತಮ್ಮ ಪ್ರಾರ್ಥನೆ ದೀರ್ಘವಾದಷ್ಟೂ ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.ನೀವು ಅವರಂತೆ ಆಗಬೇಡಿ.ನಿಮ್ಮ ಅಗತ್ಯಗಳೇನೆಂಬುದು ನೀವು ಕೇಳುವುದಕ್ಕೆ ಮೊದಲೇ ನಿಮ್ಮ ತಂದೆಗೆ ಗೊತ್ತಿದೆ.ಆದುದರಿಂದ ಹೀಗೆಂದು ಪ್ರಾರ್ಥನೆ ಮಾಡಿ:
‘ಸ್ವರ್ಗದಲ್ಲಿರುವ ಓ ನಮ್ಮ ತಂದೆಯೇ,
ನಿಮ್ಮ ಪವಿತ್ರ ನಾಮ ಪೂಜಿತವಾಗಲಿ;
ನಿಮ್ಮ ಸಾಮ್ರಾಜ್ಯ ಬರಲಿ;
ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ
ಜಗತ್ತಿನಲ್ಲಿಯೂ ನೆರವೇರಲಿ.
ನಮ್ಮ ಅನುದಿನದ ಆಹಾರವನ್ನು ನಮಗಿಂದು ಕೊಡಿ.
ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ
ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ.
ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ;ಕೇಡಿನಿಂದ ನಮ್ಮನ್ನು ಕ್ಷಮಿಸಿರಿ.’
ಜನರ ತಪ್ಪುಗಳನ್ನು ನೀವು ಕ್ಷಮಿಸಿದರೆ ಸ್ವರ್ಗದಲ್ಲಿರುವ
ನಿಮ್ಮ ತಂದೆ ನಿಮ್ಮನ್ನು ಕ್ಷಮಿಸುವರು
ಜನರನ್ನು ನೀವು ಕ್ಷಮಿಸದಿದ್ದರೆ, ನಿಮ್ಮ ತಂದೆಯೂ
ನಿಮ್ಮ ತಪ್ಪುಗಳನ್ನು ಕ್ಷಮಿಸರು.”
No comments:
Post a Comment