25.02.2010 - ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ

ಸಂತ ಮತ್ತಾಯನು ಬರೆದ ಶುಭ ಸಂದೇಶದಿಂದ ವಾಚನ - 7:7-12

"ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ"

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು :ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.ಏಕೆಂದರೆ ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ಕೊಡಲಾಗುವುದು,ಹುಡುಕುವವನಿಗೆ ಸಿಗುವುದು,ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು. ನಿಮ್ಮಲ್ಲಿ ಯಾವನು ತಾನೇ ತನ್ನ ಮಗ ರೊಟ್ಟಿಯನ್ನು ಕೇಳಿದರೆ ಕಲ್ಲನ್ನು ಕೊಟ್ಟಾನು?ಮೀನನ್ನು ಕೇಳಿದರೆ ಹಾವನ್ನು ಕೊಟ್ಟಾನು?ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ,ಅದಕ್ಕಿಂತಲೂ ಎಷ್ಟೋ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಒಳ್ಳೆಯ ಕೊಡುಗೆಗಳನ್ನು ಕೊಡಬಲ್ಲರು!ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ. ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ."

No comments:

Post a Comment

29.08.2026 - ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು

  ಸಂತ ಸ್ನಾನಿಕ ಯೊವಾನ್ನನ ಶಿರಚ್ಛೇದನ ಮೊದಲನೇ ವಾಚನ: ಯೆರೆಮಿಯ: 1: 17-19 ಆದುದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲ...