01.03.2010 - ಕ್ಷಮಿಸಿರಿ,ದೇವರು ನಿಮ್ಮನ್ನೂ ಕ್ಷಮಿಸುವರು

ಸಂತ ಲೂಕ ಬರೆದ ಶುಭಸಂದೇಶದಿಂದ ವಾಚನ - 6: 36-38


ಇತರರ ಬಗ್ಗೆ ತೀರ್ಪು ಕೊಡಬೇಡಿ,ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ;

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ.ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ,ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ;ಪರರನ್ನು ದಂಡನೆಗೆ ಗುರಿ ಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿ ಮಾಡುವುದಿಲ್ಲ.ಪರರನ್ನು ಕ್ಷಮಿಸಿರಿ,ದೇವರು ನಿಮ್ಮನ್ನೂ ಕ್ಷಮಿಸುವರು;ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು;ಅಳತೆಯಲ್ಲಿ ತುಂಬಿ,ಕುಲುಕಿ,ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು,” ಎಂದರು.

No comments:

Post a Comment

29.08.2026 - ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು

  ಸಂತ ಸ್ನಾನಿಕ ಯೊವಾನ್ನನ ಶಿರಚ್ಛೇದನ ಮೊದಲನೇ ವಾಚನ: ಯೆರೆಮಿಯ: 1: 17-19 ಆದುದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲ...