01.03.2010 - ಕ್ಷಮಿಸಿರಿ,ದೇವರು ನಿಮ್ಮನ್ನೂ ಕ್ಷಮಿಸುವರು

ಸಂತ ಲೂಕ ಬರೆದ ಶುಭಸಂದೇಶದಿಂದ ವಾಚನ - 6: 36-38


ಇತರರ ಬಗ್ಗೆ ತೀರ್ಪು ಕೊಡಬೇಡಿ,ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ;

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ.ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ,ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ;ಪರರನ್ನು ದಂಡನೆಗೆ ಗುರಿ ಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿ ಮಾಡುವುದಿಲ್ಲ.ಪರರನ್ನು ಕ್ಷಮಿಸಿರಿ,ದೇವರು ನಿಮ್ಮನ್ನೂ ಕ್ಷಮಿಸುವರು;ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು;ಅಳತೆಯಲ್ಲಿ ತುಂಬಿ,ಕುಲುಕಿ,ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು,” ಎಂದರು.

No comments:

Post a Comment

28.05.2026 - ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು.

  ಮೊದಲನೆಯ ವಾಚನ: 1 ಪೇತ್ರ 2:2-5,9-12 ಸಹೋದರರೇ, ಹೊಸಜನ್ಮ ಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ. ಜೀವೋದ್...