11.03.10 - ಶೇಖರಿಸದವನು ಚದುರಿಸುತ್ತಾನೆ

ಸಂತ ಲೂಕನು ಬರೆದ ಶುಭ ಸಂದೇಶದಿಂದ ವಾಚನ - 11:14-23

"ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ"

ಒಮ್ಮೆ ಯೇಸುಸ್ವಾಮಿ ಒಂದು ಮೂಕ ದೆವ್ವವನ್ನು ಬಿಡಿಸುತ್ತಿದ್ದರು.ಆ ದೆವ್ವ ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು.
ಜನರು ಆಶ್ಚರ್ಯಚಕಿತರಾದರು. ಆದರೆ ಅವರಲ್ಲಿ ಕೆಲವರು," ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ" ಎಂದರು. ಬೇರೆ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಸ್ವರ್ಗದಿಂದ ಒಂದು ಅದ್ಭುತಕಾರ್ಯವನ್ನು ಮಾಡಿ ತೋರಿಸುವಂತೆ ಕೇಳಿದರು.ಅವರ ಅಲೋಚನೆಗಳನ್ನು ಅರಿತುಕೊಂಡ ಯೇಸು," ಅಂತ:ಕಲಹದಿಂದ ಒಡೆದು ಹೋಗಿರುವ ಪ್ರತಿಯೊಂದು ರಾಜ್ಯನಾಶವಾಗುವುದು; ಕುಟುಂಬ ಕುಟುಂಬಗಳು ಕಚ್ಚಾಡಿ ಹಾಳಾಗುವುವು.ಅಂತೆಯೇ ಸೈತಾನನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯ ಹೇಗೆ ತಾನೆ ಉಳಿದೀತು. ನಾನು ಬೆಲ್ಜಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾವ ಶಕ್ತಿಯಿಂದ ಬಿಡಿಸುತ್ತಾರೆ. ಆದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು. ನಾನು ದೇವರ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ಸಾಮ್ರಾಜ್ಯ ಈಗಲೇ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ.ಬಲಿಷ್ಠನೊಬ್ಬನು ಸರ್ವಾಯುಧಗಳಿಂದ ಸಜ್ಜಿತನಾಗಿ ತನ್ನ ಮನೆಗೆ ಕಾವಲಿರುವಾಗ ಅವನ ಆಸ್ತಿಯೆಲ್ಲಾ ಸುರಕ್ಷಿತವಾಗಿರುತ್ತದೆ.ಆದರೆ ಇವನಿಗಿಂತಲೂ ಬಲಿಷ್ಠನು ಎದುರಿಸಿ ಬಂದು ಇವನನ್ನು ಗೆದ್ದಾಗ, ಇವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು,ಸುಲಿಗೆಯನ್ನು ಹಂಚಿಕೊಡುತ್ತಾನೆ. ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ.ನನ್ನೊಡನೆ ಶೇಖರಿಸದವನು ಚದುರಿಸುತ್ತಾನೆ." ಎಂದರು.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...