16.03.10 - ಸಬ್ಬತ್ತ್ ಹಾಗೂ ಸತ್ಕಾರ್ಯ

ಸಂತ ಯೊವಾನ್ನನು ಬರೆದ ಶುಭಸಂದೇಶದಿಂದ ವಾಚನ - 5: 1-3, 5-16

“ಎದ್ದು ನಿಲ್ಲು, ನಿನ್ನ ಹಾಸಿಗೆಯನ್ನು  ಸುತ್ತಿಕೊಂಡು ನಡೆ

ಇದಾದ ಮೇಲೆ ಯೆಹೂದ್ಯರ ಹಬ್ಬ ಬಂದಿತು. ಯೇಸುಸ್ವಾಮಿ ಜೆರುಸಲೇಮಿಗೆ ತೆರಳಿದರು. ಅಲ್ಲಿ, ‘ಕುರಿಬಾಗಿಲು’ ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಹಿಬ್ರಿಯ ಭಾಷೆಯಲ್ಲಿ ‘ಬೆತ್ಸಥ’ ಎಂದು ಕರೆಯುತ್ತಾರೆ. ಕುರುಡರು, ಕುಂಟರು, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಆ ಮಂಟಪಗಳಲ್ಲಿ ಬಿದ್ದುಕೊಳ್ಳುತ್ತಾ ಇದ್ದರು. ಮೂವತ್ತೆಂಟು ವರ್ಷ ಕಾಯಿಲೆಗಳಿಂದ ನರಳುತ್ತಿದ್ದ ಒಬ್ಬ ರೋಗಿ ಅಲ್ಲಿ ಮಲಗಿದ್ದನು. ಯೇಸು ಅವನನ್ನು ನೋಡಿ, ದೀರ್ಘ ಕಾಲದಿಂದ ಅವನು ಹಾಗೆ ಬಿದ್ದುಕೊಂಡಿರುವುದನ್ನು ತಿಳಿದು, ”ನಿನಗೆ ಗುಣಹೊಂದಲು ಮನಸ್ಸಿದೆಯೇ?” ಕೇಳಿದರು. “ಸ್ವಾಮಿ, ನೀರು ಉಕ್ಕಿದ್ದಾಗ ನನ್ನನ್ನು ಕೊಳಕ್ಕಿಳಿಸಲು ಸಹಾಯಕರು ಇರುವುದಿಲ್ಲ; ನಾನು ಹೋಗುವಷ್ಟರಲ್ಲೇ ಯಾರಾದರೂ ಇಳಿದುಬಿಡುತ್ತಾರೆ” ಎಂದು ಉತ್ತರಿಸಿದ ಆ ರೋಗಿ. ಯೇಸು ಅವನಿಗೆ, “ಎದ್ದು ನಿಲ್ಲು, ನಿನ್ನ ಹಾಸಿಗೆಯನ್ನು  ಸುತ್ತಿಕೊಂಡು ನಡೆ” ಎಂದರು. ಆ ಕ್ಷಣವೇ ಅವನು ಗುಣಹೊಂದಿ ತನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆಯತೊಡಗಿದನು.

ಅದು ಸಬ್ಬತ್ತಿನ ದಿನವಾಗಿತ್ತು. ಆದುದರಿಂದ ಯೆಹೂದ್ಯ ಅಧಿಕಾರಿಗಳು ಗುಣ ಹೊಂದಿದ ಆ ಮನುಷ್ಯನಿಗೆ “ಇಂದು ಸಬ್ಬತ್ತಿನ ದಿನ. ನೀನು ಹಾಸಿಗೆಯನ್ನು ಎತ್ತಿಕೊಂಡು ನಡೆಯುವುದು ನಿಷಿದ್ಧ,” ಎಂದು ಹೇಳಿದರು. ಅದಕ್ಕೆ ಅವನು: “ನನ್ನನ್ನು ಗುಣಪಡಿಸಿದವರೇ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’, ಎಂದು ಹೇಳಿದರು,” ಎಂದು ಉತ್ತರಕೊಟ್ಟನು. ಅಧಿಕಾರಿಗಳು, “ಅದನ್ನು ಎತ್ತಿಕೊಂಡು ನಡೆ ಎಂದ ಅವನು ಯಾರು?” ಎಂದು ಪ್ರಶ್ನಿಸಿದರು. ತನ್ನನ್ನು ಗುಣಪಡಿಸಿದವರು ಯಾರೆಂದು ಅವನಿಗೆ ತಿಳಿದಿರಲಿಲ್ಲ; ಅಲ್ಲದೆ ಜನಸಂದಣೆಂii ನಿಮಿತ್ತ  ಯೇಸು ಆಗಲೇ ಮರೆಯಾಗಿಬಿಟ್ಟಿದರು. ಅನಂತರ ದೇವಾಲಯದಲ್ಲಿ ಯೇಸು ಮನುಷ್ಯನನ್ನು ಕಂಡು,” ನೋಡು ನೀನು ಗುಣಹೊಂದಿರುವೆ; ಇನ್ನು ಮೇಲೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು.” ಎಂದರು. ಆ ಮನುಷ್ಯ ಯೆಹೂದ್ಯರ ಬಳಿಗೆ ಹೋಗಿ, “ನನ್ನನ್ನು ಗುಣಪಡಿಸಿದವರು ಯೇಸುವೇ,” ಎಂದು ತಿಳಿಸಿದನು. ಯೇಸು ಇದನ್ನು  ಸಬ್ಬತ್ತ್ ದಿನದಲ್ಲಿ ಮಾಡಿದ್ದರಿಂದ ಯೆಹೂದ್ಯರು ಅವರಿಗೆ ಕಿರುಕುಳ ಕೊಡಲು ತೊಡಗಿದರು.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...