27.05.10 - ದೃಷ್ಟಿ ದಾನ


ಸಂತ ಮಾರ್ಕನು ಬರೆದ ಶುಭಸಂದೇಶ - 10:46-52

”ಹೋಗು, ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಮಾಡಿದೆ”

ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟನವನ್ನ್ನು ತಲುಪಿದರು. ಅಲ್ಲಿಂದ ಹೊರಡುವಾಗ ಜನರ ದೊಡ್ಡ ಗುಂಪು ಅವರನ್ನು ಹಿಂಬಾಲಿಸಿತು. ಕುರುಡು ಭಿಕ್ಷುಗಾರನಾದ, ತಿಮಾಯನ ಮಗ ಬಾರ್ತಿಮಾಯನು ದಾರಿಯ ಮಗ್ಗುಲಲ್ಲಿ ಕುಳಿತಿದ್ದನು. ಆ ಮಾರ್ಗವಾಗಿ ಹೋಗುತ್ತಿರುವಾತನು ನಜರೇತಿನ ಯೇಸು ಎಂದು ಕೇಳಿದೊಡನೆಯೇ, ಅವನು “ ಯೇಸುವೇ, ದಾವಿದ ಕುಲಪುತ್ರರೇ, ನನಗೆ ದಯೆತೋರಿ” ಎಂದು ಗಟ್ಟಿಯಾಗಿ ಕೂಗಿಕೊಂಡನು.ಅನೇಕರು “ ಎಂದು ಅವನನ್ನು ಗದರಿಸಿದರು. ಅವನಾದರೋ, “ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಇನ್ನಷ್ಟು ಗಟ್ಟಿಯಾಗಿ ಕೂಗಿಕೊಂಡನು. ಇದನ್ನು ಕೇಳಿ ಯೇಸು ಅಲ್ಲೇ ನಿಂತು,” ಅವನನ್ನು ಕರೆದುಕೊಂಡು ಬನ್ನಿ,” ಎಂದು ಅಪ್ಪಣೆ ಮಾಡಿದರು. ಅವರು ಹೋಗಿ,” ಏಳು, ಭಯ ಪಡಬೇಡ, ಯೇಸು ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಹೇಳಿದರು. ಅವನು ತನ್ನ ಮೇಲು ಹೊದಿಕೆಯನ್ನು ಅಲ್ಲೇ ಬಿಟ್ಟು, ತಟ್ಟನೆ ಎದ್ದು, ಯೇಸುವಿನ ಬಳಿಗೆ ಬಂದನು. ಯೇಸು,” ನನ್ನಿಂದ ನಿನಗೆ ಏನಾಗಬೇಕು?” ಎಂದು ಕೇಳಿದರು. ಅದಕ್ಕೆ ಅವನು,”ಗುರುದೇವಾ! ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು. ಯೇಸು ಅವನಿಗೆ, ”ಹೋಗು, ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಮಾಡಿದೆ,” ಎಂದರು. ಆಕ್ಷಣವೇ ಅವನಿಗೆ ದೃಷ್ಟಿ ಬಂದಿತು.ಅವನೂ ಯೇಸುವನ್ನು ಹಿಂಬಾಲಿಸಿ ಹಿಂದೆ ಹೋದನು.

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...