17.05.2010 - ಲೋಕದಲ್ಲಿ ನಿಮಗೆ ಕಷ್ಟ ಸಂಕಟಗಳು ತಪ್ಪಿದ್ದಲ್ಲ

ಸಂತ ಯೊವಾನ್ನನು ಬರೆದ ಶುಭಸಂದೇಶ - 16:29-33


"ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮ ನಿಮ್ಮ ಮನೆಗೆ ಚದುರಿಹೋಗುವ ಕಾಲವು ಬರುತ್ತದೆ."

ಶಿಷ್ಯರು ಯೇಸುವಿಗೆ, " ಈಗ ನೀವು ಸಾಮತಿಗಳನ್ನು ಬಳಸದೆ ಸ್ಫಷ್ಟವಾಗಿಯೇ ಮಾತನಾಡುತ್ತಿದ್ದೀರಿ. ನೀವು ಎಲ್ಲವನ್ನೂ ಬಲ್ಲವರು.
ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದ ನಾವು ವಿಶ್ವಾಸಿಸುತ್ತೇವೆ," ಎಂದರು. ಆಗ ಯೇಸುಸ್ವಾಮಿ, "ಈಗ ನೀವು ವಿಶ್ವಾಸಿಸುತ್ತೀರೋ? ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮ ನಿಮ್ಮ ಮನೆಗೆ ಚದುರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ. ನಿಮಗೆ  ನನ್ನಲ್ಲಿ ಶಾಂತಿ ಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ . ನಾನು ಲೋಕವನ್ನು ಜಯಿಸಿದ್ದೇನೆ," ಎಂದು ಹೇಳಿದರು

No comments:

Post a Comment

12.04.2026 - ನನ್ನ ಪ್ರಭುವೇ, ನನ್ನ ದೇವರೇ

  ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:42-47 ಭಕ್ತಾದಿಗಳು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮ...