17.05.2010 - ಲೋಕದಲ್ಲಿ ನಿಮಗೆ ಕಷ್ಟ ಸಂಕಟಗಳು ತಪ್ಪಿದ್ದಲ್ಲ

ಸಂತ ಯೊವಾನ್ನನು ಬರೆದ ಶುಭಸಂದೇಶ - 16:29-33


"ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮ ನಿಮ್ಮ ಮನೆಗೆ ಚದುರಿಹೋಗುವ ಕಾಲವು ಬರುತ್ತದೆ."

ಶಿಷ್ಯರು ಯೇಸುವಿಗೆ, " ಈಗ ನೀವು ಸಾಮತಿಗಳನ್ನು ಬಳಸದೆ ಸ್ಫಷ್ಟವಾಗಿಯೇ ಮಾತನಾಡುತ್ತಿದ್ದೀರಿ. ನೀವು ಎಲ್ಲವನ್ನೂ ಬಲ್ಲವರು.
ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದ ನಾವು ವಿಶ್ವಾಸಿಸುತ್ತೇವೆ," ಎಂದರು. ಆಗ ಯೇಸುಸ್ವಾಮಿ, "ಈಗ ನೀವು ವಿಶ್ವಾಸಿಸುತ್ತೀರೋ? ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮ ನಿಮ್ಮ ಮನೆಗೆ ಚದುರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ. ನಿಮಗೆ  ನನ್ನಲ್ಲಿ ಶಾಂತಿ ಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ . ನಾನು ಲೋಕವನ್ನು ಜಯಿಸಿದ್ದೇನೆ," ಎಂದು ಹೇಳಿದರು

No comments:

Post a Comment

28.05.2026 - ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು.

  ಮೊದಲನೆಯ ವಾಚನ: 1 ಪೇತ್ರ 2:2-5,9-12 ಸಹೋದರರೇ, ಹೊಸಜನ್ಮ ಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ. ಜೀವೋದ್...