17.05.2010 - ಲೋಕದಲ್ಲಿ ನಿಮಗೆ ಕಷ್ಟ ಸಂಕಟಗಳು ತಪ್ಪಿದ್ದಲ್ಲ

ಸಂತ ಯೊವಾನ್ನನು ಬರೆದ ಶುಭಸಂದೇಶ - 16:29-33


"ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮ ನಿಮ್ಮ ಮನೆಗೆ ಚದುರಿಹೋಗುವ ಕಾಲವು ಬರುತ್ತದೆ."

ಶಿಷ್ಯರು ಯೇಸುವಿಗೆ, " ಈಗ ನೀವು ಸಾಮತಿಗಳನ್ನು ಬಳಸದೆ ಸ್ಫಷ್ಟವಾಗಿಯೇ ಮಾತನಾಡುತ್ತಿದ್ದೀರಿ. ನೀವು ಎಲ್ಲವನ್ನೂ ಬಲ್ಲವರು.
ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದ ನಾವು ವಿಶ್ವಾಸಿಸುತ್ತೇವೆ," ಎಂದರು. ಆಗ ಯೇಸುಸ್ವಾಮಿ, "ಈಗ ನೀವು ವಿಶ್ವಾಸಿಸುತ್ತೀರೋ? ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮ ನಿಮ್ಮ ಮನೆಗೆ ಚದುರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ. ನಿಮಗೆ  ನನ್ನಲ್ಲಿ ಶಾಂತಿ ಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ . ನಾನು ಲೋಕವನ್ನು ಜಯಿಸಿದ್ದೇನೆ," ಎಂದು ಹೇಳಿದರು

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...