22.05.10 - ಶಿಷ್ಯನ ಸಾಕ್ಷಿ

ಸಂತ ಯೊವಾನ್ನನ ಶುಭ ಸಂದೇಶ - 21:20-25

"ಯೇಸು ಮಾಡಿದ ಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನೆಲ್ಲಾ ಒಂದೊಂದಾಗಿ ಬರೆಯಲು ಹೋದರೆ, ಬರೆಯಬೇಕಾದ ಗ್ರಂಥಗಳನ್ನು ಬಹುಶ: ಲೋಕವೇ ಹಿಡಿಸಲಾರದೆಂದು ನೆನೆಸುತ್ತೇನೆ."

ಪೇತ್ರನು ಹಿಂದಿರುಗಿ ನೋಡಿದಾಗ, ಯೇಸುವಿನ ಆಪ್ತನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು( ಭೋಜನ ಸಮಯದಲ್ಲಿ ಪಕ್ಕದಲ್ಲೇ ಒರಗಿ," ಪ್ರಭುವೇ, ನಿಮ್ಮನ್ನು ಹಿಡಿದುಕೊಡುವಂಥ ಸ್ವಾಮಿ ದ್ರೋಹಿ ಯಾರು?" ಎಂದು ಕೇಳಿದವನು ಅವನು) ಇವನ್ನನು ಕಂಡು ಪೇತ್ರನು," ಪ್ರಭೂ ಇವನ ವಿಷಯವೇನು?" ಎಂದು ಯೇಸುವನ್ನು ಕೇಳಿದನು. ಅದಕ್ಕೆ ಯೇಸು," ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂದು ನನ್ನ ಬಯಕೆ: ಆದರೆ ಅದರಿಂದ ನಿನಗೇನಾಗಬೇಕು? ನೀನಂತೂ ನನ್ನನ್ನು ಹಿಂಬಾಲಿಸಿ ಬಾ," ಎಂದರು. ಇದರಿಂದಾಗಿ ಶಿಷ್ಯನಿಗೆ ಸಾವಿಲ್ಲವೆಂಬ ವದಂತಿ ಸೋದರರಲ್ಲಿ ಹಬ್ಬಿತು.ಯೇಸು,’ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದ ನನ್ನ ಬಯಕೆಯಾದರೆ ಅದರಿಂದ ನಿನಗೇನಾಗಬೇಕು? ಎಂದು ಹೇಳಿದರೆ ಹೊರತು ಅವನಿಗೆ ಸಾವಿಲ್ಲವೆಂದು ಹೇಳಲಿಲ್ಲ.ಇವುಗಳಿಗೆ ಆ ಶಿಷ್ಯನೇ ಸಾಕ್ಷಿ. ಇದನೆಲ್ಲಾ ಬರೆದಿಟ್ಟವನೂ ಅವನೇ. ಅವನ ಸಾಕ್ಷಿಸತ್ಯವಾದುದೆಂದು ನಾವು ಬಲ್ಲೆವು.

ಯೇಸು ಮಾಡಿದ ಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನೆಲ್ಲಾ ಒಂದೊಂದಾಗಿ ಬರೆಯಲು ಹೋದರೆ, ಬರೆಯಬೇಕಾದ ಗ್ರಂಥಗಳನ್ನು ಬಹುಶ: ಲೋಕವೇ ಹಿಡಿಸಲಾರದೆಂದು ನೆನೆಸುತ್ತೇನೆ.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...