25.05.10 - ಅಮರ ಜೀವ

ಸಂತ ಮಾರ್ಕನ ಶುಭ ಸಂದೇಶ - 10: 17-27

"ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು;ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು" 

ಆಗ ಪೇತ್ರನು ಮುಂದೆ ಬಂದು,"ನೋಡಿ, ನಾವು ಎಲ್ಲವನ್ನೂ ಬಿಟ್ಟುಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲ." ಎಂದನು. ಆಗ ಯೇಸು," ನಾನು ನಿಶ್ಚಯವಾಗಿ ಹೇಳುತ್ತೇನೆ; ಯಾರಾದರೂ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ಮನೆಯನ್ನಾಗಲಿ,ಅಣ್ಣ ತಮ್ಮಂದಿರನ್ನಾಗಲಿ, ಅಕ್ಕ ತಂಗಿಯರನ್ನಾ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲ ಗದ್ದೆಗಳನ್ನಾಗಲಿ ತ್ಯಜಿಸುತ್ತಾನೋ, ಅವನು ಈ ಕಾಲದಲ್ಲೇ ಮನೆ,ಅಣ್ಣ ತಮ್ಮ. ಅಕ್ಕತಂಗಿ, ತಾಯಿ, ಮಕ್ಕಳು, ಹೊಲ ಗದ್ದೆ ಇವೆಲ್ಲವನ್ನೂ ನೂರ್ಮಡಿಯಷ್ಟು ಪಡೆಯುವನು. ಇವುಗಳೊಂದಿಗೆ ಹಿಂಸೆಯನ್ನೂ ಅನುಭವಿಸಬೇಕಾಗುವುದು;ಅದಲ್ಲದೆ ಮುಂದಿನ ಲೋಕದಲ್ಲಿ ಅಮರ ಜೀವವನ್ನು ಪಡೆಯುವನು. ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು;ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು," ಎಂದರು.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...