07.06.10 - ಭಾಗ್ಯಗಳು

ಸಂತ ಮತ್ತಾಯನ ಶುಭ ಸಂದೇಶ - 5:1-12

ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು. 

ಜನರ ದೊಡ್ಡ ಗುಂಪನ್ನು ಕಂಡು ಯೇಸುಸ್ವಾಮಿ ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು.ಆಗ ಯೇಸು ಇಂತೆಂದು ಪ್ರಬೋಧಿಸಿದರು "ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗ ಸಾಮ್ರಜ್ಯ ಅವರದು. ದು:ಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು. ವಿನಯಶೀಲರು ಭಾಗ್ಯವಂತರು; ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು. ನ್ಯಾಯ ನೀತಿಗಾಗಿ ಹಸಿದು ಹಾತೊರೆಯುವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು. ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು. ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು. ನ್ಯಾಯ ನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗ ಸಾಮ್ರಾಜ್ಯ ಅವರದು.

ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು,ಹಿಂಸಿಸುವರು,ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು. ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ದೊರಕುವ ಪ್ರತಿಫಲ ಹಿರಿದು. ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರ ಹಿಂಸೆಗೆ ಒಳಪಡಿಸಿದರು. 

No comments:

Post a Comment

12.04.2026 - ನನ್ನ ಪ್ರಭುವೇ, ನನ್ನ ದೇವರೇ

  ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:42-47 ಭಕ್ತಾದಿಗಳು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮ...