11.06.10 - ಕಾಣದೆ ಹೋದ ಕುರಿ

ಸಂತ ಲೂಕನ ಶುಭ ಸಂದೇಶ - 15:3-7

"ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ"

ಈ ಸಂದರ್ಭದಲ್ಲಿ ಯೇಸು ಈ ಸಾಮತಿಯನ್ನು ಹೇಳಿದರು:"ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳಿವೆಯೆನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆ ಹೋದಾಗ ಅವನೇನು ಮಾಡುತ್ತಾನೆ? ಇರುವ ತೊಂಭತ್ತೊಂಭತ್ತು ಕುರಿಗಳನ್ನು ಹುಲ್ಲುಗಾವಲ್ಲಿನಲ್ಲೇ ಬಿಟ್ಟು ಕಾಣದೆ ಹೋದ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೇ? ಅದು ಸಿಕ್ಕಿದಾಗ ಸಿಕ್ಕಿತೆಂಬ ಸಂತೋಷದಿಂದ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮನಗೆ ಬರುತ್ತಾನೆ. ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆಯುತ್ತಾನೆ. ’ಕೆಳೆದು ಹೋಗಿದ್ದ ಕುರಿ ಸಿಕ್ಕಿತು; ನನ್ನೊಡನೆ ಸೇರಿ ಸಂತೋಷಪಡಿ’ ಎನ್ನುತ್ತಾನೆ ಅಲ್ಲವೇ? ಅದೇ ರೀತಿಯಲ್ಲಿ ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಭತ್ತೊಂಭತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...