29.09.10 - ನತಾನಿಯೇಲನ ವಿಶ್ವಾಸ

ಲೂಕನ ಶುಭ ಸಂದೇಶ - 1:47-51

"ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ"

ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, "ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ," ಎಂದು ನುಡಿದರು. ನತಾನಿಯೇಲನು,"ನನ್ನ ಪರಿಚಯ ನಿಮಗೆ ಹೇಗಾಯಿತು?" ಎಂದು ಕೇಳಲು ಯೇಸು, "ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜುರ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ," ಎಂದು ಉತ್ತರಕೊಟ್ಟರು. ಅದಕ್ಕೆ ನತಾನಿಯೇಲನು, "ಗುರುದೇವಾ, ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ," ಎಂದನು. ಆಗ ಯೇಸು, "ಅಂಜೂರದ ಮರದಡಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಅಷ್ಟೊಂದು ವಿಶ್ವಾಸವೇ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೇ," ಎಂದು ನುಡಿದರು. ತಮ್ಮ ಮಾತನ್ನು ಮುಂದುವರಿಸುತ್ತಾ, "ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ," ಎಂದು ಹೇಳಿದರು.

No comments:

Post a Comment

13.04.2026 - ಗಾಳಿ ತನಗೆ ತೋಚಿದ ಕಡೆ ಬಿಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು

  ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 4:23-31 ಪೇತ್ರ ಮತ್ತು ಯೊವಾನ್ನ ಬಂಧನದಿಂದ ಬಿಡುಗಡೆಹೊಂದಿದ ಮೇಲೆ ವಿಶ್ವಾಸಿಗಳಿಗೆ ಭೇಟಿಯಿತ್ತರು. ಮುಖ್ಯ ಯಾಜಕರು ಹಾಗೂ ಪ್...