29.09.10 - ನತಾನಿಯೇಲನ ವಿಶ್ವಾಸ

ಲೂಕನ ಶುಭ ಸಂದೇಶ - 1:47-51

"ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ"

ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, "ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ," ಎಂದು ನುಡಿದರು. ನತಾನಿಯೇಲನು,"ನನ್ನ ಪರಿಚಯ ನಿಮಗೆ ಹೇಗಾಯಿತು?" ಎಂದು ಕೇಳಲು ಯೇಸು, "ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜುರ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ," ಎಂದು ಉತ್ತರಕೊಟ್ಟರು. ಅದಕ್ಕೆ ನತಾನಿಯೇಲನು, "ಗುರುದೇವಾ, ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ," ಎಂದನು. ಆಗ ಯೇಸು, "ಅಂಜೂರದ ಮರದಡಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಅಷ್ಟೊಂದು ವಿಶ್ವಾಸವೇ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೇ," ಎಂದು ನುಡಿದರು. ತಮ್ಮ ಮಾತನ್ನು ಮುಂದುವರಿಸುತ್ತಾ, "ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ," ಎಂದು ಹೇಳಿದರು.

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...