01.10.10 - ತೀರ್ಪಿನ ದಿನ

ಲೂಕನ ಶುಭ ಸಂದೇಶ - 10-13-16

"ನನ್ನನ್ನು ಅಲಕ್ಷ್ಯ ಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೆ ಅಲಕ್ಷ್ಯ ಮಾಡುತ್ತಾನೆ”

ಯೇಸು ಹೀಗೆಂದರು: “ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣಿತಟ್ಟನ್ನು  ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗುತ್ತಿದ್ದರು. ಆದುದರಿಂದ ತೀರ್ಪಿನ ದಿನ  ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಸಹನೀಯವಾಗಿರುವುದು. ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಇಂದು ನೆನಸುತ್ತೀಯೋ? ಇಲ್ಲ,  ಪಾತಾಳಕ್ಕೆ ಇಳಿಯುವೆ”

ಅನಂತರ ತಮ್ಮ ಶಿಷ್ಯರನ್ನು ಉದ್ದೆಶಿಸಿ, “ನಿಮ್ಮನ್ನು ಆಲಿಸಿವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನು ಅಲಕ್ಷ್ಯ ಮಾಡುವವನು ನನ್ನನ್ನೇ ಅಲಕ್ಷ್ಯ ಮಾಡುತ್ತಾನೆ. ನನ್ನನ್ನು ಅಲಕ್ಷ್ಯ ಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೆ ಅಲಕ್ಷ್ಯ ಮಾಡುತ್ತಾನೆ” ಎಂದರು. 

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...