05-10-2010 - ಸೇವಾಸಕ್ತರು ಹಾಗೂ ಧ್ಯಾನಾಸಕ್ತರು

ಸಂತ ಲೂಕನ ಶುಭ ಸಂದೇಶ - 10: 38-42

ಸೇವಾಸಕ್ತ ಮಾರ್ತಳು – ಧ್ಯಾನಾಸಕ್ತ ಮರಿಯಳು

ಯೇಸು ಸ್ವಾಮಿ ತಮ್ಮ ಶಿಷ್ಯಯರೊಡನೆ ಪ್ರಯಾಣ ಮುಂದುವರಿಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತಮ್ಮ ಮನೆಗೆ ಆಮಂತ್ರಿಸಿದಳು. ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು. ಮಾರ್ತಳಾದರೋ, ಅತಿಥಿಸತ್ಕಾರದ ಗಡಿಬಿಡಿಯಲ್ಲಿ ಇದ್ದಳು. ಅವಳು ಬಂದು, “ಪ್ರಭೂ, ನನ್ನ ಸೋದರಿ ಈ ಕೆಲಸವನ್ನೆಲ್ಲಾ ನನ್ನೊಬ್ಬಳಿಗೇ ಬಿಟ್ಟಿದ್ದಾಳೆ. ನೀವಿದನ್ನು ಗಮನಿಸಬಾರದೇ? ನನಗೆ ಸಹಾಯ ಮಾಡುವಂತೆ ಅವಳಿಗೆ ಹೇಳಿ,” ಎಂದಳು. ಯೇಸು ಆಕೆಗೆ ಪ್ರತ್ಯತ್ತರವಾಗಿ, “ಮಾರ್ತಾ, ಮಾರ್ತಾ, ನೀನು ಅನಾವಶ್ಯ ಚಿಂತೆ ಪೇಚಾಟಗಳಿಗೆ  ಒಳಗಾಗಿರುವೆ. ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...