ಸಂತ ಲೂಕನ ಶುಭ ಸಂದೇಶ - 11: 29 – 32
"ಈ ಪೀಳಿಗೆ ಕೆಟ್ಟ ಪಿಳಿಗೆ.ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ"
ಜನರ ಗುಂಪು ಹೆಚ್ಚುತ್ತಿದ್ದಾಗ, ಯೇಸು ಸ್ವಾಮಿ ಹೀಗೆಂದು ಮುಂದುವರಿಸಿದರು:“ಈ ಪೀಳಿಗೆ ಕೆಟ್ಟ ಪಿಳಿಗೆ.ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು. ಹೇಗೆಂದರೆ, ನಿನೆವೆ ನಗರದ ಜನರಿಗೆ ಪ್ರವಾದಿ ಯೋನನು ಸಂಕೇತವಾದಂತೆ ನರಪುತ್ರನು ಈ ಸಂತತಿಗೆ ಸಂಕೇತವಾಗಿರುವನು.
“ದೈವ ತೀರ್ಪಿನ ದಿನ ದಕ್ಷಿಣದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು, ಇವರನ್ನು ಅಪರಾಧಿಗಳೆಂದು ತೋರಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು. ಆದರೆ, ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ. ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿ ಎಂದು ತೋರಿಸಿವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ ಇಲ್ಲಿದ್ದಾನೆ."
No comments:
Post a Comment