13-10-2010 - ನೆಲಸಮವಾದ ಸಮಾಧಿಗಳು

ಸಂತ ಲೂಕನ ಶುಭ ಸಂದೇಶ - 11: 42-46

"ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ. ಸಮಾಧಿಗಳೆಂದು ತಿಳಿಯದೆಯೆ ಜನರು ಅವುಗಳ ಮೇಲೆ ನಡೆದಾಡುತ್ತಾರೆ,” 

“ಫರಿಸಾಯರೇ, ನಿಮಗೆ ಧಿಕ್ಕಾರ ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ ಒಂದು ಪಾಲು ಸಲ್ಲಿಸುತ್ತೀರಿ, ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು. “ಫರಿಸಾಯರೇ, ನಿಮಗೆ ಧಿಕ್ಕಾರ ! ಪ್ರಾರ್ಥನಾ ಮಂದಿರಗಳಲ್ಲಿ ಪ್ರಧಾನ ಆಸನಗಳನ್ನೂ ಪೇಟೆ ಬೀದಿಗಳಲ್ಲಿ ವಂದನೋಪಚಾರಗಳನ್ನೂ ಅಪೇಕ್ಷಿಸುತ್ತೀರಿ. ಅಯ್ಯೋ, ನಿಮಗೆ ಧಿಕ್ಕಾರ ! ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ. ಸಮಾಧಿಗಳೆಂದು ತಿಳಿಯದೆಯೆ ಜನರು ಅವುಗಳ ಮೇಲೆ ನಡೆದಾಡುತ್ತಾರೆ,” ಎಂದರು.

ಇದನ್ನು ಕೇಳಿದ ಒಬ್ಬ ಧರ್ಮಶಾಸ್ತ್ರಜ್ಞನು, “ಬೋಧಕರೇ, ನೀವು ಹೀಗೆ ಮಾತನಾಡುವುದರಿಂದ ನಮ್ಮನ್ನೂ ಖಂಡಿಸಿದಂತಾಯಿತು,” ಎಂದನು. ಅದಕ್ಕೆ ಯೇಸು, “ಶಾಸ್ತ್ರಜ್ಞರೇ, ನಿಮಗೂ ಧಿಕ್ಕಾರ ! ಹೊರಲಾಗದ ಹೊರೆಗಳನ್ನು ನೀವು ಜನರ ಮೇಲೆ ಹೇರುತ್ತೀರಿ; ನೀವಾದರೋ ನಿಮ್ಮ ಕಿರುಬೆರಳಿನಿಂದ ಕೂಡ ಅವುಗಳನ್ನು ಮುಟ್ಟುವುದಿಲ್ಲ.

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...