19-10-2010 - ಸಿದ್ಧತೆ

ಸಂತ ಲೂಕನ ಶುಭ ಸಂದೇಶ12: 35-38

ನಿಮ್ಮ ನಡು ಕಟ್ಟಿರಲಿನಿಮ್ಮ ದೀಪ ಉರಿಯುತ್ತಿರಲಿ"

ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ. ತಟ್ಟಿದ ತಕ್ಷಣ ಯಜಮಾನನಿಗೆ ಬಾಗಿಲು ತೆರೆಯಲು ಸಿದ್ದರಿರುವ ಸೇವಕನಂತೆ ಇರಿ. ತಮ್ಮ ಯಜಮಾನನು ಮದುವೆ ಔತಣ ಮುಗಿಸಿಕೊಂಡು ಯಾವಾಗ ಹಿಂದಿರಿಗುತ್ತಾನೋ ಎಂದು ಅವರು ಎದುರು ನೋಡುತ್ತಾ ಇರುತ್ತಾರೆ. ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡು ಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿ ನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. “ಯಜಮಾನನು ಬರುವಾಗ ನಡು ರಾತ್ರಿ ಆಗಿರಲಿ, ಮುಂಜಾವಾಗಿರಲಿ, ಎಚ್ಚರದಿಂದ ಇರುವ ಸೇವಕರನ್ನು ಆತನು ಕಂಡರೆ ಅವರು ಭಾಗ್ಯವಂತರು".

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...