"ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು"
ಕಳ್ಳನು ಬರುವ ಗಳಿಗೆಯು ಮನೆಯ ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ. ಇದ್ದನ್ನು ಚೆನಾಗಿ ತಿಳಿದಿಕೊಂಡು ನೀವು ಸಹ ಸಿದ್ದರಾಗಿರಿ. ಏಕೆಂದರೆ, ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು,” ಎಂದರು. ಆಗ ಪೇತ್ರನು, “ಪ್ರಭು, ನೀವು ಹೇಳಿದ ಈ ಸಾಮತಿ ನಮಗೆ ಮಾತ್ರ ಅನ್ವಯಿಸುತ್ತದೋ ಅಥವಾ ಎಲ್ಲರಿಗೋ?” ಎಂದು ಕೇಳಿದನು. ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೊಲಿಯಾಳುಗಳಿಗೆ ದವಸ ಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ. ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು. ಅಂಥವನನ್ನು ಯಜಮಾನನು ತನ್ನ ಎಲ್ಲ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುವನೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
“ಆದರೆ ಆ ಸೇವಕನು ತನ್ನಲ್ಲೇ, ’ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ’, ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ಚಿತ್ರಹಿಂಸೆಗೂ ವಿಶ್ವಾಸಹೀನರ ದುರ್ಗತಿಗೂ ಗುರಿಮಾಡುವನು."
“ಸೇವಕನು ಯಜಮಾನನು ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ. ಅರಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರುಯಾಗುತ್ತಾನೆ. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು."
No comments:
Post a Comment