21.10.2010 - ವಿಂಗಡಣೆ

21-10-2010

ಸಂತ ಲೂಕನ ಶುಭ ಸಂದೇಶ – 12: 49-53

“ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು."

“ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು. ಅದು ಈಗಾಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ. ಆದರೆ ನಾನು ಪಡೆಯಬೇಕಾದ ಶ್ರಮಾಸ್ನಾನ ಒಂದುಂಟು: ಅದು ಈಡೇರುವ ತನಕ ನನಗೆ ನೆಮ್ಮದಿಯಿಲ್ಲ. ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆ ಎಂದು ಭಾವಿಸುತ್ತೀರೋ? ಇಲ್ಲ. ಭಿನ್ನಭೇದಗಳನ್ನು ಉಂಟುಮಾಡಲು ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ. ಹೇಗೆಂದರೆ, ಒಂದೇ ಮನಯಲ್ಲಿರುವ ಐವರಲ್ಲಿ, ಇಂದಿನಿಂದ ಇಬ್ಬರಿಗೆ ವಿರುದ್ದ ಮೂವರು, ಮೂವರಿಗೆ ವಿರುದ್ದ ಇಬ್ಬರು ವಿಭಾಗವಾಗುವರು. ಮಗನಿಗೆ ವಿರುದ್ದವಾಗಿ ತಂದೆ, ಮಗಳಿಗೆ ವಿರುದ್ದ ತಾಯಿ, ಸೊಸೆಗೆ ವಿರುದ್ದವಾಗಿ ಅತ್ತೆ, ಪರಸ್ಪರ ವಿರೋಧವಾಗಿ ವಿಂಗಡಿಸಿ ಹೋಗುವರು,” ಎಂದರು.

No comments:

Post a Comment

28.05.2026 - ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು.

  ಮೊದಲನೆಯ ವಾಚನ: 1 ಪೇತ್ರ 2:2-5,9-12 ಸಹೋದರರೇ, ಹೊಸಜನ್ಮ ಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ. ಜೀವೋದ್...