25-10-2010 - ಸಬ್ಬತ್

ಸಂತ ಲೂಕನ ಶುಭ ಸಂದೇಶ - 13: 10-17

ತಕ್ಷಣವೇ ಆಕೆ ನೆಟ್ಟಗಾದಳು ಮತ್ತು ದೇವರಿಗೆ ಸ್ತುತಿಸ್ತೋತ್ರ ಸಲ್ಲಿಸಿದಳು.

ಒಂದು ಸಬ್ಬತ್ ದಿನ ಯೇಸುಸ್ವಾಮಿ ಪ್ರಾರ್ಥನಾಮಂದಿರದಲ್ಲಿ ಬೋಧಿಸುತ್ತಿದ್ದರು. ಹದಿನೆಂಟು ವರ್ಷಗಳಿಂದ ದೆವ್ವಪೀಡಿತಳಾಗಿ ನರಳುತ್ತಿದ್ದ ಒಬ್ಬ ಮಹಿಳೆ ಅಲ್ಲಿದ್ದಳು. ಆಕೆ ಒಬ್ಬ ಗೂನಿ; ನೆಟ್ಟಗೆ ನಿಲ್ಲಲು ಸ್ವಲ್ಪವೂ ಆಗುತ್ತಿರಲಿಲ್ಲ. ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು, “ನೋಡಮ್ಮ, ನೀನು ವ್ಯಾಧಿಯಿಂದ ಬಿಡುಗಡೆಯಾದೆ,” ಎಂದು ಹೇಳಿ, ಆಕೆಯ ಮೇಲೆ ತಮ್ಮ ಹಸ್ತಗಳನ್ನಿಟ್ಟರು. ತಕ್ಷಣವೇ ಆಕೆ ನೆಟ್ಟಗಾದಳು ಮತ್ತು ದೇವರಿಗೆ ಸ್ತುತಿಸ್ತೋತ್ರ ಸಲ್ಲಿಸಿದಳು.

ಯೇಸು ಸಬ್ಬತ್ ದಿನದಲ್ಲಿ ಗುಣಮಾಡಿದ್ದನ್ನು ಕಂಡು, ಪ್ರಾರ್ಥನಾಮಂದಿರದ ಅಧಿಕಾರಿ ಕುಪಿತನಾದನು. ಕೂಡಿದ್ದ ಜನರನ್ನು ಉದ್ದೇಶಿಸಿ,  ಕೆಲಸ ಮಾಡಲು ಆರು ದಿನಗಳಿವೆ, ದಿನಗಳಲ್ಲಿ ಬಂದು ಗುಣಮಾಡಿಸಿಕೊಳ್ಳಿರಿ; ಸಬ್ಬತ್ ದಿನದಲ್ಲಿ ಮಾತ್ರ ಕೂಡದು, “ಎಂದನು. ಪ್ರಭು, ಅವನಿಗೆ ಪ್ರತ್ಯುತ್ತರವಾಗಿ, “ಕಪಟಿಗಳೇ, ಸಬ್ಬತ್ ದಿನ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಕತ್ತೆಯನ್ನಾಗಲಿ, ಎತ್ತನ್ನಾಗಲಿ ಕೊಟ್ಟಿಗೆಯಿಂದ ಬಿಚ್ಚಿ ನೀರಿಗೆ ಹಿಡಿದುಕೊಂಡು ಹೋಗುವುದಿಲ್ಲವೆ? ಅಬ್ರಹಾಮನ ವಂಶಜಳಾದ ಈಕೆಯನ್ನು ಸೈತಾನನು ಹದಿನೆಂಟು ವರ್ಷಗಳಿಂದ ಕಟ್ಟಿ ಹಾಕಿದ್ದನು; ಕಟ್ಟಿನಿಂದ ಈಕೆಯನ್ನು ಸಬ್ಬತ್ ದಿನ ಬಿಡಿಸಬಾರದಿತ್ತೆ?” ಎಂದರು ಉತ್ತರವನ್ನು ಕೇಳಿ ಯೇಸುವಿನ ವಿರೋಧಿಗಳೆಲ್ಲರೂ ನಾಚಿದರು. ಜನರ ಕೂಟವಾದರೋ ಅವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಕಂಡು ಸಂತೋಷಪಟ್ಟಿತು.

No comments:

Post a Comment

11.01.26 - "ಅವರು ನಮಗೆ ಪವಿತ್ರಾತ್ಮ ಅವರಿಂದಲೂ ಅಗ್ನಿಯಿಂದಲೂ ದಿಕ್ಷಾಸ್ನಾನ ಕೊಡುವರು"

ಮೊದಲನೇ ವಾಚನ: ಯೆಶಾಯ 40:1-5, 9-11 (ಯೆಶಾಯ: 41:1-4, 6-7) ನಿಮ್ಮ ದೇವರು ಇಂತೆನ್ನುತ್ತಾರೆ: "ಸಂತೈಸಿ, ನನ್ನ ಜನರನ್ನು ಸಂತೈಸಿರಿ. ಜೆರುಸಲೇಮಿನೊಡನೆ ಪ್ರೀತಿಯ...