22-11-2010 - ಧನವಂತರು - ಬಡ ವಿಧವೆ

ಸಂತ ಲೂಕನ ಶುಭ ಸಂದೇಶ -  21: 1-4


ಈಕೆಯಾದರೋ, ತನ್ನ ಕಡುಬಡತನದಲ್ಲೂ ತನಗಿದ್ದ ಜೀವನಾಧಾರವನ್ನೆಲ್ಲಾ ಕೊಟ್ಟುಬಿಟ್ಟಳು


ದೇವಾಲಯದ ಕಾಣಿಕೆಯ ಪೆಟ್ಟಿಗೆಯಲ್ಲಿ ಧನವಂತರು ತಮ್ಮ ಕಾಣಿಕೆಯನ್ನು ಹಾಕುತ್ತಿದ್ದುದನ್ನು ಯೇಸುಸ್ವಾಮಿ ಗಮನಿಸಿದರು. ಅಷ್ಟರಲ್ಲಿ ಒಬ್ಬ ಬಡವಿಧವೆ ಅಲ್ಲಿಗೆ ಬಂದು, ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು. ಅದನ್ನು ಕಂಡ ಯೇಸು, “ಈ ಬಡ ವಿಧವೆ ಅವರೆಲ್ಲರಿಗಿಂತಲೂ ಹೆಚ್ಚಾಗಿ ಅರ್ಪಿಸಿದಳೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಅವರೆಲ್ಲರು ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು; ಈಕೆಯಾದರೋ, ತನ್ನ ಕಡುಬಡತನದಲ್ಲೂ ತನಗಿದ್ದ ಜೀವನಾಧಾರವನ್ನೆಲ್ಲಾ ಕೊಟ್ಟುಬಿಟ್ಟಳು,’ ಎಂದರು.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...