26-11-2010 - ನರಪುತ್ರನ ಪುನರಾಗಮನ

ಸಂತ ಲೂಕನ ಶುಭ ಸಂದೇಶ -  21: 29-33

ಭೂಮ್ಯಾಕಾಶಗಳು ಗತಿಸಿಹೋಗುತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.

ಬಳಿಕ ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: “ಅಂಜೂರದ ಹಾಗೂ ಇತರ ಮರಗಳನ್ನು ಗಮನಿಸಿರಿ. ಅವುಗಳ ಎಲೆಗಳು ಚಿಗುರುತ್ತಲೇ ವಸಂತಕಾಲ ಆರಂಭಿಸಿತೆಂದು ನೀವೇ ಅರಿತುಕೊಳ್ಳಿತೀರಿ. ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ದೇವರ ಸಾಮ್ರಾಜ್ಯವು ಸಮೀಪಿಸಿತೆಂದು ತಿಳಿದುಕೊಳ್ಳಿರಿ. ಇವೆಲ್ಲ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿಹೋಗದೆಂದು ಒತ್ತಿಹೇಳುತ್ತೇನೆ. ಭೂಮ್ಯಾಕಾಶಗಳು ಗತಿಸಿಹೋಗುತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ."

No comments:

Post a Comment

12.04.2026 - ನನ್ನ ಪ್ರಭುವೇ, ನನ್ನ ದೇವರೇ

  ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:42-47 ಭಕ್ತಾದಿಗಳು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮ...