26-11-2010 - ನರಪುತ್ರನ ಪುನರಾಗಮನ

ಸಂತ ಲೂಕನ ಶುಭ ಸಂದೇಶ -  21: 29-33

ಭೂಮ್ಯಾಕಾಶಗಳು ಗತಿಸಿಹೋಗುತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.

ಬಳಿಕ ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: “ಅಂಜೂರದ ಹಾಗೂ ಇತರ ಮರಗಳನ್ನು ಗಮನಿಸಿರಿ. ಅವುಗಳ ಎಲೆಗಳು ಚಿಗುರುತ್ತಲೇ ವಸಂತಕಾಲ ಆರಂಭಿಸಿತೆಂದು ನೀವೇ ಅರಿತುಕೊಳ್ಳಿತೀರಿ. ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ದೇವರ ಸಾಮ್ರಾಜ್ಯವು ಸಮೀಪಿಸಿತೆಂದು ತಿಳಿದುಕೊಳ್ಳಿರಿ. ಇವೆಲ್ಲ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿಹೋಗದೆಂದು ಒತ್ತಿಹೇಳುತ್ತೇನೆ. ಭೂಮ್ಯಾಕಾಶಗಳು ಗತಿಸಿಹೋಗುತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ."

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...