5-11-2010 - ಲೌಕಿಕತೆ

ಸಂತ ಲೂಕನ ಶುಭ ಸಂದೇಶ - 16: 1-8

"ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು."

ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ ಇಂತೆಂದರು: “ಒಬ್ಬ ಧನಿಕನಿದ್ದ. ಅವನ ವ್ಯವಹಾರಗಳನ್ನು ನೋಡಿಕೊಳ್ಳಲು ಒಬ್ಬ ಮೇಸ್ತ್ರಿಯಿದ್ದ. ಇವನು ಧನಿಕನ ಆಸ್ತಿಯನ್ನು ಹಾಳುಮಾಡುತ್ತಿದ್ದಾನೆಂದು ದೂರು ಬಂದಿತು. ಧನಿಕನು ಅವನನ್ನು ಕರೆದು, ’ಏನಿದು, ನಿನ್ನ ವಿಷಯವಾಗಿ ನಾನು ಹೀಗೆಲ್ಲ ಕೇಳುತ್ತಾ ಇದ್ದೇನೆ? ನಿನ್ನ ಕೆಲಸದ ಲೆಕ್ಕಾಚಾರವನ್ನು ಒಪ್ಪಿಸಿಬಿಡು. ಇನ್ನು ನೀನು ಮೇಸ್ತ್ರಿ ಆಗಿರಲು ಆಗದು,’ ಎಂದ. ಆಗ ಆ ಮೇಸ್ತ್ರಿ, ’ಈಗ ಏನು ಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದು ಬಿಡುತ್ತಾನಲ್ಲಾ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ,’ ಎಂದು ಚಿಂತಾಕ್ರಾಂತನಾದ.

ಮರುಕ್ಷಣ, ’ಸರಿ, ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ, ಜನರು ನನ್ನನ್ನು ತಮ್ಮ ಮನೆಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ಈಗ ಗೊತ್ತಾಯಿತು,’ ಎಂದುಕೊಡ. ಯಜಮಾನನ ಸಾಲಗಾರರನ್ನು ಒಬ್ಬೊಬ್ಬರನ್ನಾಗಿ ಬರಮಾಡಿಕೊಂಡು, ’ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲ ಎಷ್ಟು?’ ಎಂದು ಮೊದಲನೆಯವನನ್ನು ಕೇಳಿದ. ಅವನು, ’ನೂರು ಬುದ್ದಲಿ ಎಣ್ಣೆ,’ ಎಂದ. ಅದಕ್ಕೆ ಮೇಸ್ತ್ರಿ ’ಇಗೋ, ನಿನ್ನ ಪತ್ರ, ಕುಳಿತುಕೊಂಡು “ಐವತ್ತು” ಎಂದು ಬೇಗನೆ ಬರೆ,’ ಎಂದ. ಬಳಿಕ ಇನ್ನೊಬ್ಬನನ್ನು ಕರೆದು, ’ನೀನೆಷ್ಟು ಸಾಲ ತೀರಿಸಬೇಕು?’ ಎಂದು ಕೇಳಿದ. ಅವನು ’ನೂರು ಖಂಡುಗ ಗೋದಿ’ ಎಂದಾಗ, ’ಇಗೋ ನಿನ್ನ ಪತ್ರ, “ಎಂಬತ್ತು,” ಎಂದು ಬರೆ’, ಎಂದ. “ಈ ಅಪ್ರಾಮಾಣಿಕ  ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.  

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...