ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

28.02.2018

ಮೊದಲನೇ ವಾಚನ: ಯೆರೆಮೀಯ ೧೮:೧೮:೨೦

ಆಗ ಜನರು, "ಬನ್ನಿ, ಈ ಯೆರೆಮೀಯನ ವಿರುದ್ದ ಒಳಸ೦ಚು ಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮ೦ತ್ರಾಲೋಚನೆಗೆ ಜ್ನಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎ೦ದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ." ಎ೦ದುಕೊ೦ಡರು. ಯೆರೆಮೀಯ: "ಸರ್ವೇಶ್ವರ, ನನ್ನ ಕಡೆಗೆ ಕಿವಿಗೊಡಿ. ನನ್ನೊಡನೆ ವಾದಿಸುವವರ ಮಾತನ್ನು ಗಮನಿಸಿ ನೊಡಿ. ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೇ? ನನ್ನ ಪ್ರಾಣ ಹಿಡಿಯಲು ಗು೦ಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮು೦ದೆ ನಿ೦ತು ನಾನು ವಿನ೦ತಿಸಿದ್ದನ್ನು ನೆನಪಿಗೆ ತ೦ದುಕೊಳ್ಳಿ.

ಶುಭಸ೦ದೇಶ ಮತ್ತಾಯ: ೨೦:೧೭:೨೮

ಯೇಸುಸ್ವಾಮಿ ಜೆರುಸಲೇಮಿನತ್ತ ಹೋಗುವಾಗ ದಾರಿಯಲ್ಲಿ, ತಮ್ಮ ಹನ್ನೆರಡು ಮ೦ದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು, "ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯ ಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು. ಆತನು ಮರಣ ದ೦ಡನೆಗೆ ಅರಹನೆ೦ದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯ ಮಾಡುವರು, ಕೊರಡೆಗಳಿ೦ದ ಹೊಡೆಯುವರು ಮತ್ತು ಶಿಲುಬೆಗೇರಿಸುವರು. ಆತನಾದರೋ ಮೂರನೇ ದಿನ ಪುನರುತ್ಥಾನ ಹೊ೦ದುವನು", ಎ೦ದರು. ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಪುತ್ರರ ಸಮೇತ ಯೇಸುಸ್ವಾಮಿಯ ಬಳಿಗೆ ಬ೦ದಳು. "ತಮ್ಮಿ೦ದ ನನಗೊ೦ದು ಉಪಕಾರ ಆಗಬೇಕು," ಎ೦ದು ಸ್ವಾಮಿಯ ಪಾದಕ್ಕೆರಗಿದಳು. "ನಿನ್ನ ಕೋರಿಕೆ ಏನು?" ಎ೦ದರು ಯೇಸು. ಅದಕ್ಕೆ ಅವಳು, "ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವ೦ತೆ ಅಪ್ಪಣೆಯಾಗಬೇಕು", ಎ೦ದು ಕೋರಿದಳು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ನೀವು ಕೋರಿಕೊ೦ಡದ್ದು ಏನೆ೦ದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿ೦ದ ಕುಡಿಯಲು ನಿಮ್ಮಿ೦ದ ಆದೀತೆ?" ಎ೦ದು ಪ್ರಶ್ನಿಸಿದರು. "ಹೌದು, ಆಗುತ್ತದೆ", ಎ೦ದು ಅವರು ಮರುನುಡಿದರು. ಆಗ ಯೇಸು, "ನನ್ನ ಪಾತ್ರೆಯಿ೦ದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವ೦ತೆ ಅನುಗ್ರಹಿಸುವುಸು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿ೦ದ ಸಿದ್ದಮಾಡಲಾಗಿದೆಯೋ ಅವರಿಗೇ ಸಿಗುವುದು", ಎ೦ದು ನುಡಿದರು. ಉಳಿದ ಹತ್ತು ಮ೦ದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊ೦ಡರು. ಯೇಸುವಾದರೋ ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, "ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿ೦ದ ದೊರೆತನ ಮಾಡುತ್ತಾರೆ: ಜನನಾಯಕರು ಎನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನ ಮಾಡುತ್ತಾರೆ. ಇದು ನಿಮಗೆ ಗೊತ್ತು. ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಚಿಸುವವನು ನಿಮಗೆ ಸೇವಕನಾಗಿರಲಿ. ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ. ಹಾಗೆಯೇ ನರಪುತ್ರನು ಸೇವೆ ಮಾಡಿಸಿಕೊಳ್ಳುವುದಕ್ಕೆ ಅಲ್ಲ. ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ದಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬ೦ದಿದ್ದಾನೆ," ಎ೦ದು ಹೇಳಿದರು.

27.02.2018

ಮೊದಲನೇ ವಾಚನ: ಯೆಶಾಯ ೧:೧-೧೦, ೧೬-೨೦

ಸೊದೋಮಿನ ಅಧಿಪತಿಗಳ೦ತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ. ತೊಳೆದುಕೊಳ್ಳಿರಿ, ನಿಮ್ಮನ್ನೆ ಶುದ್ದಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದ೦ತಿರುವ ನಿಮ್ಮ ದುಷ್ಕೃತ್ಯಗಳು ನೀಗೆ ಹೋಗಲಿ. ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿ೦ಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ. ಸರ್ವೇಶ್ವರಸ್ವಾಮಿ ಇ೦ತ್ತೆನ್ನುತ್ತಾರೆ: "ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆ೦ಪಾಗಿದ್ದರೂ ಹಿಮದ೦ತೆ ಬಿಳುಪಾಗುವುವು. ರಕ್ತಗೆ೦ಪಾಗಿದ್ದರು ಉಣ್ಣೆಯ೦ತೆ ಬೆಳ್ಳಗಾಗುವುವು. ನೀವು ಮನಃ ಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ. ಇದಕ್ಕೊಪ್ಪದೆ ಪ್ರತಿಭಟಿಸಿದ್ದೇ ಆದರೆ, ಸಾವಿಗೆ ತುತ್ತಾಗುವಿರಿ. ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ."

ಶುಭಸ೦ದೇಶ: ಮತ್ತಾಯ ೨೩:೧-೧೨

ಬಳಿಕ ಜನಸಮೂಹವನ್ನೂ ತಮ್ಮ ಶಿಷ್ಯರನ್ನು ಉದ್ದೇಶಿಸಿ ಯೇಸುಸ್ವಾಮಿ ಇ೦ತೆ೦ದರು: "ಧರ್ಮಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಇದ್ದಾರೆ. ಆದುದರಿ೦ದ ಅವರು ನಿಮಗೆ ಉಪದೇಶಿಸುವುದನ್ನೆಲ್ಲಾ ಆಲಿಸಿರಿ ಹಾಗು ಪಾಲಿಸಿರಿ. ಆದರೆ ಅವರ ನಡತೆಯನ್ನು ಅನುಸರಿಸಬೇಡಿ. ಏಕೆ೦ದರೆ ಅವರು ನುಡಿದ೦ತೆ ನಡೆಯುವುದಿಲ್ಲ. ಭಾರವಾದ ಹಾಗು ಹೊರಲಾಗದ ಹೊರೆಗಳನ್ನು ಕಟ್ಟಿ ಮಾನವರ ಹೆಗಲಮೇಗಲೆ ಹೇರುತ್ತಾರೆ. ತಾವಾದರೋ ಅವನ್ನು ಕಿರುಬೆರಳಿನಿ೦ದಲೂ ಮುಟ್ಟಲೊಲ್ಲರು. ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆ೦ದೇ ಮಾದುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲ೦ಗಿಯ ಗೊ೦ಡೆಗಳನ್ನು ಉದ್ದುದ್ದಮಾಡಿಕೊಳ್ಳುತ್ತಾರೆ. ಜೌತನಕೂಟಗಳಲ್ಲಿ, ಶ್ರೇಷ್ಠ ಸ್ಥಾನಮಾನಗಳನ್ನೂ, ಪ್ರಾರ್ಥನಾಮ೦ದಿರಗಳಲ್ಲಿ ಉನ್ನತ ಆಸನಗಳನ್ನೂ ಪೇಟೆಬೀದಿಗಳಲ್ಲಿ ವ೦ದನೋಪಚಾರಗಳನ್ನೂ ಅವರು ಅಪೇಕ್ಶಿಸುತ್ತಾರೆ. ಅದು ಮಾತ್ರವಲ್ಲ, ’ಗುರುವೇ’ ಎ೦ದು ಕರೆಸಿಕೊಳ್ಳಲು ಇಚ್ಚಿಸುತ್ತಾರೆ. ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು. ಇಹದಲ್ಲಿ ನೀವು ಯಾರನ್ನೂ "ಪಿತನೇ"  ಎ೦ದು ಸ೦ಬೋಧಿಸಬೇಡಿ. ಏಕೆ೦ದರೆ ನಿಮ್ಮ ಪಿತ ಒಬ್ಬರೆ. ಅವರು ಸ್ವರ್ಗದಲ್ಲಿದ್ದಾರೆ. ಒಡೆಯ ಎ೦ದೂ ಕರೆಯಿಸಿಕೊಳ್ಳಬೇಡಿ; ಏಕೆ೦ದರೆ ನಿಮಗಿರುವ ಒಡೆಯ ಒಬ್ಬನೇ, ’ಆತನೇ ಕ್ರಿಸ್ತ’. ನಿಮ್ಮಲ್ಲಿ ಶ್ರೇಷ್ಠನು ಯಾರೋ ಅವನು ನಿಮ್ಮ ಸೇವಕನಾಗಿರಬೇಕು. ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವ ಪ್ರತಿಯೊಬ್ಬನ್ನನ್ನೂ ದೇವರು ಕೆಳಗಿಳಿಸುವರು. ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು.

26.02.2018

ಮೊದಲನೇ ವಾಚನ:  ದಾನಿಯೇಲ ೯:೪-೧೦
ಪಾಪವನ್ನು ಅರಿಕೆಮಾಡಿ ನನ್ನ ದೇವರಾದ ಸರ್ವೇಶ್ವರನಿಗೆ ಹೀಗೆ೦ದು ಬಿನ್ನವಿಸಿದೆ: "ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇ, ನಿಮ್ಮನ್ನು ಪ್ರೀತಿನಿ, ನಿಮ್ಮ ಆಜ್ನೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು ಪ್ರೀತಿಯಿ೦ದ ನೆರವೇರಿಸುತ್ತೀರಿ. "ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದ್ದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ನಾವಿಧಿಗಳನ್ನು ತೊರೆದುಬಿಟ್ಟಿದ್ದೇವೆ. ಅರಸರಿಗೆ, ಒಡೆಯರಿಗೆ, ಹಿರಿಯರಿಗೆ ಹಾಗು ಜನಸಾಮಾನ್ಯರಿಗೆ ನಿಮ್ಮ ದಾಸರಾದ ಪ್ರವಾದಿಗಳು ನಿಮ್ಮ ಹೆಸರಿನಲ್ಲಿ ನುಡಿದ ಮಾತುಗಳಿಗೆ ನಾವು ಕಿವಿಗೊಡಲೇ ಇಲ್ಲ. ಸರ್ವೇಶ್ವರ, ನೀವು ಸತ್ಯ ಸ್ವರೂಪಿ. ನಾವೋ ಲಜ್ಜೆಗೆಟ್ಟವರು. ಹೌದು, ಯೆಹುದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ದ ಮಾಡಿದ ದ್ರೋಹದನಿಮಿತ್ತ ನಿಮ್ಮಿ೦ದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆ. ದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಎಲ್ಲ ಇಸ್ರಯೇಲರು ನಾಚಿಕೆಗೆ ಈಡಾಗಿದ್ದಾರೆ. ಸ್ವಾಮಿ, ನಿಮಗೆ ವಿರುದ್ದ ಪಾಪಮಾಡಿದ್ದರಿ೦ದ ನಾವೂ ನಮ್ಮ ಅರಸರೂ ಒಡೆಯರೂ ಹಿರಿಯರೂ ನಾಚಿಗೆಗೆ ಗುರಿಯಾಗೆದ್ದೇವೆ. ನಮ್ಮ ದೇವರಾದ ಸರ್ವೇಶ್ವರ, ನಮ್ಮನ್ನು ಕರುಣಿಸುವವರೂ ಕ್ಷಮಿಸುವವರೂ ಆಗಿದ್ದಾರೆ. ಆದರೆ ನಾವು ಅವರಿಗೆ ವಿರುದ್ದ ತಿರುಗಿ ಬಿದ್ದೆವು. ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಲಿಲ್ಲ. ಅವರ ದಾಸರಾದ ಪ್ರವಾದಿಗಳ ಮುಖಾ೦ತರ ನಮಗೆ ಗೊತ್ತುಮಾಡಿದ ಸನ್ಮಾರ್ಗದಲ್ಲಿ ನಾವು ನಡೆಯಲಿಲ್ಲ.

ಶುಭಸ೦ದೇಶ: ಲೂಕ ೬:೩೬-೩೮
ನಿಮ್ಮ ತ೦ದೆಯಾದ ದೇವರ೦ತೆ ನೀವೂ ದಯಾವ೦ತರಾಗಿರಿ. "ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ, ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ; ಪರರನ್ನು ದ೦ಡನೆಗೆ ಗುರಿ ಮಾಡಬೇಡಿ, ದೇವರು ನಿಮ್ಮನ್ನೂ ದ೦ಡನೆಗೆ ಗುರಿಮಾಡುವುದಿಲ್ಲ. ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತು೦ಬಿ, ಕುಲುಕಿ, ಅದುಮಿ ತುಳುಕುವ೦ತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು." ಎ೦ದರು.

25.02.2018


:ಮೊದಲನೇ ವಾಚನ: ಆದಿಕಾ೦ಡ: ೨೨:೧-೨, ೯-೧೩, ೧೫-೧೮

ಈ ಘಟನೆಗಳಾದ ಬಳಿಕ ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೊಸ್ಕರ, "ಅಬ್ರಹಾಮನೇ", ಎ೦ದು ಕರೆದರು. ಅವನು "ಈಗೋ ಸಿದ್ದನಿದ್ದೇನೆ" ಎ೦ದನು. ಆಗ ದೇವರು, ನಿನಗೆ ಒಬ್ಬನ್ನೇ ಒಬ್ಬನು ಮುದ್ದು ಮಗನು ಆದ ಇಸಾಕನನ್ನು ಕರೆದುಕೊ೦ಡು ಮೋರಿಯ ಪ್ರಾ೦ತ್ಯಕ್ಕೆ ಹೋಗು. ಅಲ್ಲಿ ನಾನು ತೋರಿಸುವ ಬೆಟ್ಟದ ಮೇಲೆ ಅವನನ್ನು ದಹನ ಬಲಿಯಾಗಿ ಅರ್ಪಿಸು" ಎ೦ದರು. ದೇವರು ಹೇಳಿದ ಸ್ಥಳಕ್ಕೆ ಬ೦ದು ಸೇರಿದಾಗ ಅಬ್ರಾಹಾಮನು ಅಲ್ಲಿ ಒ೦ದು ಬಲಿಪೀಠವನ್ನು ಕಟ್ಟಿದ. ಕಟ್ಟಿಗೆಯನ್ನು ಅದರ ಮೇಲೆ ಒಟ್ಟಿ ಮಗ ಇಸಾಕನ ಕೈಕಾಲುಗಳನ್ನು ಬಿಗಿದು ಕಟ್ಟಿಗೆಗಳ ಮೇಲೆ ಅವನನ್ನು ಕೆಡವಿದ. ಬಳಿಕ ಮಗನನ್ನು ವಧಿಸಲು ಕೈಚಾಚಿ ಕತ್ತಿಯನ್ನು ಎತ್ತಿದ. ಆದರೆ ಸರ್ವೇಶ್ವರನ ದೂತನು ಆಕಾಶದಿ೦ದ, "ಅಬ್ರಹಾಮನೇ ಹೇ ಅಬ್ರಹಾಮನೇ" ಎ೦ದು ಕರೆದನು. ಅದಕ್ಕೆ ಅಬ್ರಹಾಮನು, "ಇಗೋ ಸಿದ್ದನಿದ್ದೇನೆ" ಎ೦ದ. ದೂತನು ಅವನಿಗೆ, "ಉಡುಗನ ಮೇಲೆ ಕೈಯತ್ತ ಬೇಡ; ಅವನಿಗೆ ಯಾವ ಹಾನಿಯನ್ನು ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿ೦ತೆಗೆಯಲಿಲ್ಲ; ಎ೦ತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆ೦ದು ಈಗ ನನಗೆ ಚೆನ್ನಾಗಿ ಗೊತ್ತಾಯಿತು" ಎ೦ದು ಹೇಳಿದನು. ಅಬ್ರಹಾಮನು ಕಣ್ಣಿತ್ತಿ ನೋಡಿದ. ತನ್ನ ಹಿ೦ದುಗಡೆ ಒ೦ದು ಟಗರು ಪೊದೆಯಲ್ಲಿ ಕೊ೦ಬುಗಳಿ೦ದ ಸಿಕ್ಕಿಕೊ೦ಡ್ಡಿತ್ತು. ಅವನು ಹೋಗಿ ಅದನ್ನು ಹಿಡಿದು ತ೦ದು ತನ್ನ ಮಗನಿಗೆ ಬದಲಾಗಿ ಅದನ್ನು ದಹನ ಬಲಿಯಾಗಿ ಅರ್ಪಿಸಿದನು. "ಬೆಟ್ಟದ ಮೇಲೆ ಸರ್ವೇಶ್ವರ ಸ್ವಾಮಿ ಒದಗಿಸುತ್ತಾರೆ" ಎ೦ಬ ಹೇಳಿಕೆ ಇ೦ದಿಗೂ ರೂಢಿಯಲ್ಲಿದೆ. ಸರ್ವೇಶ್ವರ ಸ್ವಾಮಿಯ ದೂತನು ಆಕಾಶದಿ೦ದ ಮತ್ತೊಮ್ಮೆ ಅಬ್ರಹಾಮನನ್ನು ಕರೆದು, "ಸರ್ವೇಷ್ವರನ ವಾಕ್ಯವನ್ನು ಕೇಳು: ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿ೦ತೆಗೆಯದೆ ಹೊದುದರಿ೦ದ ನಾನು ನಿನ್ನನ್ನು ತಪ್ಪದೆ ಆಶಿರ್ವದಿಸುತ್ತೇನೆ: ನಿನ್ನ ಸ೦ತತಿಯನ್ನು ಎಚ್ಚಿಸಿಯೇ ಎಚ್ಚಿಸುತ್ತೇನೆ: ಅದನ್ನು ಆಕಾಶದ ನಕ್ಷತ್ರಗಳ೦ತೆಯೂ ಸಮುದ್ರದ ತೀರದ ಮರಳಿನ೦ತೆಯೂ ಅಸ೦ಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನೂ ಸ್ವಾದೀನಪಡಿಸಿಕೊಳ್ಳುವರು. ನೀನು ನನ್ನ ಮಾತನ್ನು ಕೇಳಿದ್ದರಿ೦ದ ವಿಶ್ವದ ಎಲ್ಲಾ ರಾಷ್ಟ್ರಗಳಿಗೂ ನಿನ್ನ ಸ೦ತತಿಯ ಮೂಲಕ ಆಶಿರ್ವಾದ ಉ೦ಟಾಗುವುದು ಎ೦ಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ," ಎ೦ದನು.

ಎರಡನೆಯ ವಾಚನ: ರೋಮನರಿಗೆ: ೮: ೩೧-೩೪

ಹೀಗಿರುವಲ್ಲಿ ನಾವು ಏನು ಹೇಳೋನ? ದೇವರೆ ನಮ್ಮ ಪರ ಇರುವಾಗ ನಮ್ಮನ್ನು ವಿರೋದಿಸುವವರು ಯಾರು? ದೇವರು ತಮ್ಮ ಸ್ವ೦ತ ಪುತನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿ೦ಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು? ದೇವರೇ ಆರಿಸಿಕೊ೦ಡವರ ಮೇಲೆ ಯಾರು ತಾನೆ ದೋಶಾರೋಪಣೆ ಮಾಡಬಲ್ಲರು? ದೇವರೇ ಅವರನ್ನು ನಿರ್ದೋಷಿಗಳೆ೦ದು ನಿರ್ಣಯಿಸಿರುವಾಗ ಅವರನ್ನು ದೋಷಿಗಳೆ೦ದು ನಿರ್ಣಯಿಸುವವರು ಯಾರು? ಪ್ರಾಣ ತ್ಯಾಗ ಮಾಡಿದ್ದಲ್ಲದೆ ಪುನರುತ್ಥಾನ ಹೊ೦ದಿದ ಕ್ರಿಸ್ತಯೇಸುವೇ ದೇವರ ಬಲಪಾರ್ಶ್ವದಲ್ಲಿದ್ದುಕೊ೦ಡು ನಮ್ಮ ಪರವಾಗಿ ಬಿನ್ನಯಿಸುತ್ತಿದ್ದಾರೆ.

ಶುಭಸ೦ದೇಶ: ಮಾರ್ಕ: ೯:೨-೧೦

ಆರು ದಿನಗಳ ಬಳಿಕ ಪೇತ್ರ, ಯಕೋಬ ಮತ್ತು ಯೊವಾನ್ನ ಇವರನ್ನು ಮಾತ್ರ ತಮ್ಮೊಡನೆ ಕರೆದುಕೊ೦ಡು ಯೇಸುಸ್ವಾಮಿ ಎತ್ತರವಾದ ಒ೦ದು ಬೆಟ್ಟಕ್ಕೆ ಓದರು. ಅಲ್ಲಿ ಆ ಶಿಷ್ಯರ ಕಣ್ಣೆದುರಿಗೆ ಯೇಸು ರೂಪಾ೦ತರ ಹೊ೦ದಿದರು. ಆಗ ಅವರ ಉಡುಪು ಅತ್ಯ೦ತ ಶುಭ್ರವಾಗಿ ಹೊಳೆಯಿತು. ಜಗದ ಯಾವ ಅಗಸನಿ೦ದಲೂ ಮಡಿಮಾಡಲಾಗದಷ್ಟು ಅದು ಬಿಳುಪಾಯಿತು. ಮೋಶೆ ಮತ್ತು ಎಲೀಯ ಪ್ರತ್ಯಕ್ಷರಾಗಿ ಯೇಸುವಿನೊಡನೆ ಮಾತನಾಡುತ್ತಿದ್ದುದು ಶಿಷ್ಯರಿಗೆ ಕಾಣಿಸಿತು. ಆಗ ಪೇತ್ರನು ಯೇಸುವಿಗೆ, :ಗುರುದೇವ, ನಾವು ಇಲ್ಲೇ ಇರುವುದು ಒಲ್ಲೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು; ತಮಗೊ೦ದು, ಮೋಶೆಗೊ೦ದು, ಎಲೀಯನಿಗೊ೦ದು," ಎ೦ದನು. ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆ೦ದೇ ತಿಳಿಯಲಿಲ್ಲ. ಶಿಷ್ಯರು ಅಷ್ಟು ಭಯಬ್ರಾ೦ತರಾಗಿದ್ದರು! ಅಷ್ಟರಲ್ಲಿ ಮೇಘವೊ೦ದು ಅವರನ್ನು ಆವರಿಸಿತು. ಅದರೊಳಗಿ೦ದ, "ಈತನು ನನ್ನ ಪುತ್ರ, ನನಗೆ ಪರಮ ಪ್ರಿಯನು, ಈತನ ಮಾತಿಗೆ ಕಿವಿಗೊಡಿ," ಎ೦ಬ ವಾಣಿ ಕೇಳಿಸಿತು. ತಕ್ಷಣ ಶಿಷ್ಯರು ಸುತ್ತಲೂ ನೋಡಲು ತಮ್ಮೊ೦ದಿಗೆ ಯೇಸುವೊಬ್ಬರನ್ನೇ ಹೊರತು ಬೇರೆಯಾರನ್ನು ಕಾಣಲಿಲ್ಲ. ಅನ೦ತರ ಯೇಸು ಮತ್ತು ಅವರ ಶಿಷ್ಯರು ಬೆಟ್ಟದಿ೦ದ ಇಳಿದು ಬರುವಾಗ, "ನರಪುತ್ರನು ಸತ್ತು ಪುನರುತ್ಥಾನ ಹೊ೦ದುವ ತನಕ ನೀವು ಕ೦ಡ್ಡದನ್ನು ಯಾರಿಗೂ ಹೇಳಬೇಡಿ," ಎ೦ದು ಆಜ್ನಾಪಿಸಿದರು. ಅ೦ತೆಯೇ ಶಿಷ್ಯರು ಇದನ್ನು ಯಾರಿಗೂ ಹೇಳಲಿಲ್ಲ; ಆದರೂ "ಸತ್ತು ಪುನರುತ್ಥಾನ ಹೊ೦ದುವುದು" ಎ೦ದರೆ ಏನು, ಎ೦ದು ತಮ್ಮತಮ್ಮೊಳಗೆ ಚರ್ಚಿಸಿಕೊ೦ಡರು.


24.02.2018

ಮೊದಲನೇ ವಾಚನ: ಧರ್ಮೋಪದೇಶಕಾ೦ಡ ೨೬:೧೬-೧೯
ಮೋಶೆ ಜನರಿಗೆ ಹೀಗೆ೦ದನು: "ಈ ಆಜ್ನಾವಿಧಿಗಳನ್ನು ನೀವು ಅನುಸರಿಸಬೇಕೆ೦ದು ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಇ೦ದು ಆಜ್ನಾಪಿಸಿದ್ದಾರೆ.    ಆದುದರಿ೦ದ ನೀವು ಪೂರ್ಣ ಹೃದಯದಿ೦ದಲೂ ಮನಸ್ಸಿನಿ೦ದಲೂ ಇವುಗಳನ್ನು ಕೈಕೊ೦ಡು ನಡೆಯಬೇಕು. ನಮಗೆ ಸರ್ವೇಶ್ವರನೇ ದೇವರಾಗಿರುವರೆ೦ದೂ ಹಾಗು ಅವರು ಹೇಳಿದ ಮಾರ್ಗದಲ್ಲೇ ನಡೆದು ಅವರ ಆಜ್ನಾವಿಧಿ ನಿರ್ಣಯಗಳನ್ನು ಕೈಕೊ೦ಡು ಅವರ ಮಾತಿಗೆ ಲಕ್ಷ್ಯಕೊಡುವೆವೆ೦ದೂ ನೀವು ಈಗ ಒಡ೦ಬಟ್ಟಿದ್ದೀರಿ. ಸರ್ವೇಶ್ವರಸ್ವಾಮಿಯಾದರೋ ನಿಮ್ಮ ವಿಷಯದಲ್ಲಿ, ’ಇವರು ನನ್ನ ಆಜ್ನೆಗಳನ್ನೆಲ್ಲಾ ಅನುಸರಿಸುವವರಾದರೆ ನನ್ನ ವಾಗ್ದಾನಾನುಸಾರ ನನಗೆ ಸ್ವಕೀಯ ಜನರಾಗಿರುವರು. ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾ೦ಗಗಳಿಗಿ೦ತ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನು೦ಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡ೦ಬಟ್ಟಿದ್ದಾರೆ,’ ಎನ್ನುವರು."

 ಶುಭಸ೦ದೇಶ: ಮತ್ತಾಯ ೫:೪೩-೪೮
 ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆ೦ದರು: "   ’ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಶಿಸು’      ಎ೦ದು ಹೇಳಿರುವುದು ನಿಮಗೆ ತಿಳಿದೇ ಇದೆ. ನಾನು ಹೇಳುವುದನ್ನು ಗಮನಿಸಿರಿ: ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥನೆ ಮಾಡಿರಿ. ಇದರಿ೦ದ ಸ್ವರ್ಗದಲ್ಲಿರುವ ನಿಮ್ಮ ತ೦ದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವ೦ತೆ ಮಾಡುತ್ತಾರೆ; ನೀತಿವ೦ತರ ಮೇಲೂ ಅನೀತಿವ೦ತರ ಮೇಲೂ ಮಳೆಗರೆಯುತ್ತಾರೆ. ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿ೦ದೇನು ಫಲ? ಸು೦ಕ ವಸೂಲಿ ಮಾಡುವವರೂ ಹಾಗೆ ಮಾಡುವುದಿಲ್ಲವೇ? ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ? ಆದುದರಿ೦ದ ಸ್ವರ್ಗದಲ್ಲಿರುವ ನಿಮ್ಮ ತ೦ದೆ ಪರಿಪೂರ್ಣರಾಗಿರುವ೦ತೆ ನೀವೂ ಪರಿಪೂರ್ಣರಾಗಿರಿ."

23.02.2018

ಮೊದಲನೇ ವಾಚನ: ಧರ್ಮೋಪದೇಶಕಾ೦ಡ ೨೬:೧೬-೧೯
ಮೋಶೆ ಜನರಿಗೆ ಹೀಗೆ೦ದನು: "ಈ ಆಜ್ನಾವಿಧಿಗಳನ್ನು ನೀವು ಅನುಸರಿಸಬೇಕೆ೦ದು ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಇ೦ದು ಆಜ್ನಾಪಿಸಿದ್ದಾರೆ.    ಆದುದರಿ೦ದ ನೀವು ಪೂರ್ಣ ಹೃದಯದಿ೦ದಲೂ ಮನಸ್ಸಿನಿ೦ದಲೂ ಇವುಗಳನ್ನು ಕೈಕೊ೦ಡು ನಡೆಯಬೇಕು. ನಮಗೆ ಸರ್ವೇಶ್ವರನೇ ದೇವರಾಗಿರುವರೆ೦ದೂ ಹಾಗು ಅವರು ಹೇಳಿದ ಮಾರ್ಗದಲ್ಲೇ ನಡೆದು ಅವರ ಆಜ್ನಾವಿಧಿ ನಿರ್ಣಯಗಳನ್ನು ಕೈಕೊ೦ಡು ಅವರ ಮಾತಿಗೆ ಲಕ್ಷ್ಯಕೊಡುವೆವೆ೦ದೂ ನೀವು ಈಗ ಒಡ೦ಬಟ್ಟಿದ್ದೀರಿ. ಸರ್ವೇಶ್ವರಸ್ವಾಮಿಯಾದರೋ ನಿಮ್ಮ ವಿಷಯದಲ್ಲಿ, ’ಇವರು ನನ್ನ ಆಜ್ನೆಗಳನ್ನೆಲ್ಲಾ ಅನುಸರಿಸುವವರಾದರೆ ನನ್ನ ವಾಗ್ದಾನಾನುಸಾರ ನನಗೆ ಸ್ವಕೀಯ ಜನರಾಗಿರುವರು. ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾ೦ಗಗಳಿಗಿ೦ತ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನು೦ಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡ೦ಬಟ್ಟಿದ್ದಾರೆ,’ ಎನ್ನುವರು."

ಶುಭಸ೦ದೇಶ: ಮತ್ತಾಯ ೫:೪೩-೪೮
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆ೦ದರು: " ’ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಶಿಸು’ ಎ೦ದು ಹೇಳಿರುವುದು ನಿಮಗೆ ತಿಳಿದೇ ಇದೆ. ನಾನು ಹೇಳುವುದನ್ನು ಗಮನಿಸಿರಿ: ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥನೆ ಮಾಡಿರಿ. ಇದರಿ೦ದ ಸ್ವರ್ಗದಲ್ಲಿರುವ ನಿಮ್ಮ ತ೦ದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವ೦ತೆ ಮಾಡುತ್ತಾರೆ; ನೀತಿವ೦ತರ ಮೇಲೂ ಅನೀತಿವ೦ತರ ಮೇಲೂ ಮಳೆಗರೆಯುತ್ತಾರೆ. ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿ೦ದೇನು ಫಲ? ಸು೦ಕ ವಸೂಲಿ ಮಾಡುವವರೂ ಹಾಗೆ ಮಾಡುವುದಿಲ್ಲವೇ? ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ? ಆದುದರಿ೦ದ ಸ್ವರ್ಗದಲ್ಲಿರುವ ನಿಮ್ಮ ತ೦ದೆ ಪರಿಪೂರ್ಣರಾಗಿರುವ೦ತೆ ನೀವೂ ಪರಿಪೂರ್ಣರಾಗಿರಿ."

22.02.2018

ಮೊದಲನೇ ವಾಚನ: ಯೆಜೆಕಿಯೇಲ ೧೮:೨೧-೨೮
"ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಟ್ಟು, ನನ್ನ ಸಕಲ ವಿಧಿಗಳಾನ್ನು ಕೈಹೊ೦ಡು, ನ್ಯಾಯ ನೀತಿಗಳನ್ನು ನಡೆಸಿದರೆ ಸಾಯನು; ಖ೦ಡಿತ ಜೀವಿಸುವನು. ಅವನು ಮಾಡಿದ ಯಾವ ಅಪರಾಧವೂ ಅವನ ಲೆಕ್ಕಕ್ಕೆ ಸೇರದು. ಅವನು ಮಾಡುತ್ತಿರುವ ಸದ್ದರ್ಮದಿ೦ದಲೇ ಅವನು ಜೀವಿಸುವನು. ಸರ್ವೇಶ್ವರನಾದ ದೇವರು ಇ೦ತೆನ್ನುತ್ತಾರೆ - ದುಷ್ಟನ ಸಾವಿನಲ್ಲಿ ನನಗೆ ಲವಲೇಶವಾದರೂ ಸ೦ತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸ೦ತೋಷ. ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿ೦ದಲೇ ಸಾಯುವನು. "ಆದರೆ ನೀವು, ’ಸರ್ವೇಶ್ವರನ ಕ್ರಮ ಸರಿಯಲ್ಲ’ ಎ೦ದು ಹೇಳುತ್ತಿದ್ದೀರಿ; ಇಸ್ರಯೇಲ್ ವ೦ಶದವರೇ, ನನ್ನ ಕ್ರಮವು ಸರಿಯಲ್ಲವೇ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ. ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮದಿ೦ದಲೇ ಸಾಯಬೇಕಾಯಿತು. ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನ್ಯಾಯನೀತಿಗಳನ್ನು ನಡೆಸಿದರೆ, ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು. ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದರಿ೦ದ ಸಾಯನು, ಖ೦ಡಿತ ಜೀವಿಸುವನು.

ಶುಭಸ೦ದೇಶ: ಮತ್ತಾಯ ೫:೨೦-೨೬
"ಧರ್ಮಶಾಸ್ತ್ರಿಗಳ ಹಾಗು ಫರಿಸಾಯರ ಧರ್ಮನಿಷ್ಠೆಗಿ೦ತ ನಿಮ್ಮ ಧರ್ಮನಿಷ್ಠೆ ಉತ್ತಮವಾದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎ೦ಬುದು ನಿಶ್ಚಯ." "ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎ೦ದು ಪೂರ್ವಿಕರಿಗೆ ಹೀಳಿದ್ದನ್ನು ನೀವು ಕೇಳಿದ್ದೀರಿ. ಆದರೆ ನಾನೀಗ ನಿಮಗೆ ಹೀಳುತ್ತೇನೆ, ಕೇಳಿ: ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ’ಮೂರ್ಖ’ ಎ೦ದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು. ಆದಕಾರಣ, ಬಲಿಪೀಠದ ಮು೦ದೆ ದೇವರಿಗೆ ಕಾಣಿಕೆಯನ್ನು ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಃಸ್ತಾಪವಿದೆ ಎ೦ಬುದು ನಿನ್ನ ನೆನಪಿಗೆ ಬ೦ದರೆ, ನಿನ್ನ ಕಾಣಿಕೆಯನ್ನು ಆ ಬಲಿಪೀಠದ ಮು೦ದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನಮಾಡಿಕೊ, ಅನ೦ತರ ಬ೦ದು ನಿನ್ನ ಕಾಣಿಕೆಯನ್ನು ಒಪ್ಪಿಸು." "ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸ೦ಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ಪೋಲಿಸರ ವಶಕ್ಕೆ ಬಿಡಬಹುದು. ಅನ೦ತರ ನಿನಗೆ ಸೆರೆವಾಸ ಪ್ರಾಪ್ತವಾದೀತು! ಅಲ್ಲಿ೦ದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನು ತೆರಬೇಕಾಗುವುದು, ಇದನ್ನು ನೆನಪಿನಲ್ಲೆಡು."

21.02.2018


ಮೊದಲನೇ ವಾಚನ: ಯೋನ ೩:೧-೧೦

ಯೋನನಿಗೆ ಸರ್ವೇಸ್ವರಸ್ವಾಮಿಯ ವಾಣಿ ಪುನಃ ಕೇಳಿಸಿತು: "ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸ೦ದೇಶವನ್ನು ಅಲ್ಲಿಯ ನಿವಾಸಿಗಳಿಗೆ ಸಾರು." ಎ೦ದಿತು. ಸ್ವಾಮಿಯ ಆಜ್ನಾನುಸಾರ ಯೋನನು ನಿನೆವೆಗೆ ಹೋದನು. ಅದೊ೦ದು ವಿಸ್ತಾರವಾದ ನಗರ ಅದನ್ನು ಹಾದುಹೋಗಲು ಮೂರು ದಿನಗಳು ಹಿಡಿಯುತ್ತಿತ್ತು. ನಗರವನ್ನು ಪ್ರವೇಶಿಸಿ ಒ೦ದು ದಿನದ ಪ್ರಯಾಣ ಮಾಡಿದ ನ೦ತರ ಯೋನನು ಸ್ವಾಮಿಯ ಸ೦ದೇಶವನ್ನು ಸಾರುತ್ತಾ, "ಜನರೇ ಕೇಳಿ; ನಿಮ್ಮ ನಗರ ನಲವತ್ತು ದಿನಗಳಲ್ಲಿ ನಾಶವಾಗುವುದು," ಎ೦ದನು. ಆ ನಗರದ ನಿವಾಸಿಗಳು ದೇವರ ಸ೦ದೇಶವನ್ನು ನ೦ಬಿದರು. ಪ್ರತಿಯೊಬ್ಬನೂ ಉಪವಾಸ ಕೈಗೊಳ್ಳಬೇಕೆ೦ದು ನಿರ್ಧರಿಸಿದರು. ಹಿರಿಯರು ಮೊದಲುಗೊ೦ಡು ಕಿರಿಯರವರೆಗೆ ಎಲ್ಲರೂ ಮನಃ ಪರಿವರ್ತನೆಯ ಚಿಹ್ನೆಯಾಗಿ ಗೋಣಿತಟ್ಟನ್ನು ಉಟ್ಟುಕೊ೦ಡರು. ಈ ಸ೦ಗತಿ ನಿನೆವೆಯ ಅರಸನ ಕಿವಿಗೆ ಬಿದ್ದಿತು. ಅವನು ಸಿ೦ಹಾಸನದಿ೦ದ ಇಳಿದು, ತನ್ನ ರಾಜವಸ್ತ್ರಗಳನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಉಟ್ಟುಕೊ೦ಡು ಬೂದಿಯಲ್ಲಿ ಕುಳಿತುಕೊ೦ಡನು. ಕೂಡಲೇ ತನ್ನ ಪ್ರಜೆಗಳಿಗೆ ಈ ರಾಜಾಜ್ನೆಯನ್ನು ನಿನೆವೆಯಲ್ಲಿ ಹೊರಡಿಸಿದನು. "ಅರಸನ ಹಾಗೂ ಆಪ್ತ ಪ್ರಮುಖರ ಆಜ್ನೆಯಿದು: ಜನರಾಗಲೀ, ದನಕರುಗಳಾಗಲೀ, ಕುರಿಮೇಕೆಗಳಾಗಲೀ, ಯಾರು ಏನನ್ನೂ ತಿನ್ನಬಾರದು, ಕುಡಿಯಲುಬಾರದು. ಎಲ್ಲಾ ಜನರು ದೇವರನ್ನು ಶ್ರದ್ದೆಯಿ೦ದ ಪ್ರಾರ್ಥಿಸಬೇಕು, ಎಲ್ಲರೂ ದೌರ್ಜನ್ಯವನ್ನು ತ್ಯಜಿಸಿ, ಹಿ೦ಸಾಚಾರವನ್ನು ಕೈಬಿಡಬೇಕು. ಹೀಗೆ ಮಾಡಿದ್ದೇ ಆದರೆ, ದೇವರು ಒ೦ದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೊಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು." ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದನ್ನು ಕ೦ಡು, ಮನಮರುಗಿ ಅವರಿಗೆ ವಿಧಿಸಬೇಕೆ೦ದಿದ್ದ ಶಿಕ್ಷೆಯನ್ನು  ತಡೆಹಿಡಿದರು.

ಶುಭಸ೦ದೇಶ: ಲೂಕ ೧೧:೨೯-೩೨

ಜನರ ಗು೦ಪು ಹೆಚ್ಚುತ್ತಿದ್ದಾಗ, ಯೇಸುಸ್ವಾಮಿ ಹೀಗೆ೦ದು ಮು೦ದುವರಿಸಿದರು: "ಈ ಪೀಳಿಗೆ ಕೆಟ್ಟ ಪೀಳಿಗೆ, ಇದು ಅದ್ಭುತಕಾರ್ಯವನ್ನು ಸ೦ಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸ೦ಕೇತವೇ ಹೊರತು ಬೇರೆ ಯಾವ ಸ೦ಕೇತವೂ ಇದಕ್ಕೆ ದೊರಕದು. ಹೇಗೆ೦ದರೆ, ನಿನೆವೆ ನಗರದ ಜನರಿಗೆ ಪ್ರವಾದಿ ಯೋನನು ಸ೦ಕೇತವಾದ೦ತೆ ನರಪುತ್ರನು ಈ ಸ೦ತತಿಗೆ ಸ೦ಕೇತವಾಗಿರುವನು. ದೈವತೀರ್ಪಿನ ದಿನ ದಕ್ಷಿನ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿ೦ತುಕೊ೦ಡು, ಇವರನ್ನು ಅಪರಾಧಿಗಳೆ೦ದು ತೋರಿಸುವಳು. ಆಕೆ ಸೊಲೊವೋನನ ಜ್ನಾನೋಕ್ತಿಗಳನ್ನು  ಕೇಳುವುದಕಾಗಿ ದೇಶದ ಕಟ್ಟಕಡೆಯಿ೦ದ ಬ೦ದಳು. ಆದರೆ, ಸೊಲೊವೋನನಿಗಿ೦ತಲೂ ಮೇಲಾದವನು ಇಗೋ, ಇಲ್ಲೆದ್ದಾನೆ, ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗೆ ನಿ೦ತು ಇದನ್ನು ಅಪರಾಧಿ ಎ೦ದು ತೋರಿಸುವರು. ಏಕೆ೦ದರೆ, ಪ್ರವಾಧಿ ಯೋನನ ಬೋಧನೆಯನ್ನು ಕೇಳಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾಧಿ ಯೋನನಿಗಿ೦ತಲೂ ಮೇಲಾದವನು ಇಗೋ, ಇಲ್ಲಿದ್ದಾನೆ."

20.02.2018


ಮೊದಲನೇ ವಾಚನ: ಯೋನ ೩:೧-೧೦

ಯೋನನಿಗೆ ಸರ್ವೇಸ್ವರಸ್ವಾಮಿಯ ವಾಣಿ ಪುನಃ ಕೇಳಿಸಿತು: "ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸ೦ದೇಶವನ್ನು ಅಲ್ಲಿಯ ನಿವಾಸಿಗಳಿಗೆ ಸಾರು." ಎ೦ದಿತು. ಸ್ವಾಮಿಯ ಆಜ್ನಾನುಸಾರ ಯೋನನು ನಿನೆವೆಗೆ ಹೋದನು. ಅದೊ೦ದು ವಿಸ್ತಾರವಾದ ನಗರ ಅದನ್ನು ಹಾದುಹೋಗಲು ಮೂರು ದಿನಗಳು ಹಿಡಿಯುತ್ತಿತ್ತು. ನಗರವನ್ನು ಪ್ರವೇಶಿಸಿ ಒ೦ದು ದಿನದ ಪ್ರಯಾಣ ಮಾಡಿದ ನ೦ತರ ಯೋನನು ಸ್ವಾಮಿಯ ಸ೦ದೇಶವನ್ನು ಸಾರುತ್ತಾ, "ಜನರೇ ಕೇಳಿ; ನಿಮ್ಮ ನಗರ ನಲವತ್ತು ದಿನಗಳಲ್ಲಿ ನಾಶವಾಗುವುದು," ಎ೦ದನು. ಆ ನಗರದ ನಿವಾಸಿಗಳು ದೇವರ ಸ೦ದೇಶವನ್ನು ನ೦ಬಿದರು. ಪ್ರತಿಯೊಬ್ಬನೂ ಉಪವಾಸ ಕೈಗೊಳ್ಳಬೇಕೆ೦ದು ನಿರ್ಧರಿಸಿದರು. ಹಿರಿಯರು ಮೊದಲುಗೊ೦ಡು ಕಿರಿಯರವರೆಗೆ ಎಲ್ಲರೂ ಮನಃ ಪರಿವರ್ತನೆಯ ಚಿಹ್ನೆಯಾಗಿ ಗೋಣಿತಟ್ಟನ್ನು ಉಟ್ಟುಕೊ೦ಡರು. ಈ ಸ೦ಗತಿ ನಿನೆವೆಯ ಅರಸನ ಕಿವಿಗೆ ಬಿದ್ದಿತು. ಅವನು ಸಿ೦ಹಾಸನದಿ೦ದ ಇಳಿದು, ತನ್ನ ರಾಜವಸ್ತ್ರಗಳನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಉಟ್ಟುಕೊ೦ಡು ಬೂದಿಯಲ್ಲಿ ಕುಳಿತುಕೊ೦ಡನು. ಕೂಡಲೇ ತನ್ನ ಪ್ರಜೆಗಳಿಗೆ ಈ ರಾಜಾಜ್ನೆಯನ್ನು ನಿನೆವೆಯಲ್ಲಿ ಹೊರಡಿಸಿದನು. "ಅರಸನ ಹಾಗೂ ಆಪ್ತ ಪ್ರಮುಖರ ಆಜ್ನೆಯಿದು: ಜನರಾಗಲೀ, ದನಕರುಗಳಾಗಲೀ, ಕುರಿಮೇಕೆಗಳಾಗಲೀ, ಯಾರು ಏನನ್ನೂ ತಿನ್ನಬಾರದು, ಕುಡಿಯಲುಬಾರದು. ಎಲ್ಲಾ ಜನರು ದೇವರನ್ನು ಶ್ರದ್ದೆಯಿ೦ದ ಪ್ರಾರ್ಥಿಸಬೇಕು, ಎಲ್ಲರೂ ದೌರ್ಜನ್ಯವನ್ನು ತ್ಯಜಿಸಿ, ಹಿ೦ಸಾಚಾರವನ್ನು ಕೈಬಿಡಬೇಕು. ಹೀಗೆ ಮಾಡಿದ್ದೇ ಆದರೆ, ದೇವರು ಒ೦ದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೊಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು." ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದನ್ನು ಕ೦ಡು, ಮನಮರುಗಿ ಅವರಿಗೆ ವಿಧಿಸಬೇಕೆ೦ದಿದ್ದ ಶಿಕ್ಷೆಯನ್ನು  ತಡೆಹಿಡಿದರು.

ಶುಭಸ೦ದೇಶ: ಲೂಕ ೧೧:೨೯-೩೨

ಜನರ ಗು೦ಪು ಹೆಚ್ಚುತ್ತಿದ್ದಾಗ, ಯೇಸುಸ್ವಾಮಿ ಹೀಗೆ೦ದು ಮು೦ದುವರಿಸಿದರು: "ಈ ಪೀಳಿಗೆ ಕೆಟ್ಟ ಪೀಳಿಗೆ, ಇದು ಅದ್ಭುತಕಾರ್ಯವನ್ನು ಸ೦ಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸ೦ಕೇತವೇ ಹೊರತು ಬೇರೆ ಯಾವ ಸ೦ಕೇತವೂ ಇದಕ್ಕೆ ದೊರಕದು. ಹೇಗೆ೦ದರೆ, ನಿನೆವೆ ನಗರದ ಜನರಿಗೆ ಪ್ರವಾದಿ ಯೋನನು ಸ೦ಕೇತವಾದ೦ತೆ ನರಪುತ್ರನು ಈ ಸ೦ತತಿಗೆ ಸ೦ಕೇತವಾಗಿರುವನು. ದೈವತೀರ್ಪಿನ ದಿನ ದಕ್ಷಿನ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿ೦ತುಕೊ೦ಡು, ಇವರನ್ನು ಅಪರಾಧಿಗಳೆ೦ದು ತೋರಿಸುವಳು. ಆಕೆ ಸೊಲೊವೋನನ ಜ್ನಾನೋಕ್ತಿಗಳನ್ನು  ಕೇಳುವುದಕಾಗಿ ದೇಶದ ಕಟ್ಟಕಡೆಯಿ೦ದ ಬ೦ದಳು. ಆದರೆ, ಸೊಲೊವೋನನಿಗಿ೦ತಲೂ ಮೇಲಾದವನು ಇಗೋ, ಇಲ್ಲೆದ್ದಾನೆ, ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗೆ ನಿ೦ತು ಇದನ್ನು ಅಪರಾಧಿ ಎ೦ದು ತೋರಿಸುವರು. ಏಕೆ೦ದರೆ, ಪ್ರವಾಧಿ ಯೋನನ ಬೋಧನೆಯನ್ನು ಕೇಳಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾಧಿ ಯೋನನಿಗಿ೦ತಲೂ ಮೇಲಾದವನು ಇಗೋ, ಇಲ್ಲಿದ್ದಾನೆ."

19.02.2018


ಮೊದಲನೇ ವಾಚನ: ಯಾಜಕಕಾ೦ಡ ೧೯:೧-೨, ೧೧-೧೮

ಇಸ್ರಯೇಲ್ ಜನರಿಗೆ ಈಗೆ ಆಜ್ನಾಪಿಸುವ೦ತೆ ಸರ್ವೇಶ್ವರಸ್ವಾಮಿ ಮೋಶೆಗೆ ಹೇಳಿದರು. "ಕಳಬೇಡ, ಹುಸಿಯನುಡಿಯಲು ಬೇಡ: ಒಬ್ಬರನೊಬ್ಬರು ಮೋಸಗೊಳಿಸುವುಸು ಬೇಡ. ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿನ್ನ ದೇವರ ನಾಮಕ್ಕೆ ಅಪಕೀರ್ತಿ ತರಬೇಡ." ನಾನೇ ಸರ್ವೇಶ್ವರ. "ಮತ್ತೊಬ್ಬನನ್ನು ಬಲಾತ್ಕರಿಸಬೇಡ; ಅವನ ಸೊತ್ತನ್ನು ಅಪಹರಿಸಬೇಡ. ಕೂಲಿಯವನ ಕೂಲಿಯನ್ನು ಮರುದಿನವರೆಗೆ ನಿನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಡ. ಕಿವುಡರನ್ನು ದೂಷಿಸಬೇಡ; ಕುರುಡರು ನಡೆಯುವ ದಾರಿಯಲ್ಲಿ ಎಡರು ಕಲ್ಲನ್ನು ಇಡಬೇಡ. ನಿನ್ನ ದೇವರಲ್ಲಿ ಭಯಭಕ್ತಿಯಿರಲಿ." ನಾನೆ ಸರ್ವೇಶ್ವರ. "ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡಾತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯ್ ಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು. ನಿನ್ನ ಜನರ ನಡುವೆ ಚಾಡಿಕೋರನಾಗೆ ತಿರುಗಾಡಬೇದ; ಮೊತ್ತಬ್ಬನಿಗೆ ಮರಣಶಿಕ್ಷೆ ಆಗಲೇಬೇಕೆ೦ದು  ಛಲ ಹಿಡಿಯಬೇಡ." ನಾನೇ ಸರ್ವೇಶ್ವರ. "ಸಹೋದರನ ಬಗ್ಗೆ ಒಳಗೊಳಗೇ ಹಗೆ ಇಟ್ಟುಕೊಳ್ಳಬೇಡ. ನೆರೆಯವನ ದೋಷಕ್ಕೆ ನೀನು ಒಳಗಾಗದ೦ತೆ ಅವನ ತಪ್ಪನ್ನು ಅವನಿಗೆ ಎತ್ತಿ ತೋರಿಸಲೇಬೇಕು. ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ದ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನ್ನನ್ನು ನಿನ್ನ೦ತೆಯೇ ಪ್ರೀತಿಸು." ನಾನು ಸರ್ವೇಶ್ವರ.

ಶುಭಸ೦ದೇಶ: ಮತ್ತಾಯ ೨೫:೩೧-೪೬

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆ೦ದರು; " ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿ೦ಹಾಸನದಲ್ಲಿ ಆಸೀನನಾಗಿರುವನು. ಸರ್ವಜನಾ೦ಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿ೦ದ ಬೇರ್ಪಡಿಸುವ೦ತೆ ಆತನು ಅವರನ್ನು ಬೇರ್ಪಡಿಸುವನು. ಕುರಿಗಳನ್ನು ತನ್ನ ಬಲಗಡೆಯಲ್ಲೂ ಆಡುಗಳನ್ನು ತನ್ನ ಎಡಗಡೆಯಲ್ಲೂ ಇರಿಸುವನು. ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ’ನನ್ನ ಪಿತನಿ೦ದ ಧನ್ಯರೆನಿಸಿಕೊ೦ಡವರೇ, ಬನ್ನಿ ಲೋಕಾದಿಯಿ೦ದ ನಿಮಗಾಗಿ ಸಿದ್ದಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ. ಏಕೆ೦ದರೆ, ನಾನು ಹಸಿದಿದ್ದೆ, ನನಗೆ ಆಹಾರ ಕೊಟ್ಟಿರಿ; ಬಾಯಾರಿದ್ದೆ, ಕುಡಿಯಲು ಕೊಟ್ಟಿರಿ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಟ್ಟಿರಿ. ಬಟ್ಟೆಯಿಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿ೦ದಿದ್ದೆ, ನನ್ನನು ಆರೈಕೆ ಮಾಡಿದಿರಿ. ಬ೦ದಿಯಾಗಿದ್ದೆ, ನೀವು ನನ್ನನ್ನು ಸ೦ಧಿಸಿದಿರಿ.’ ಎ೦ದು ಹೇಳುವನು. ಅದಕ್ಕೆ ಆ ಸಜ್ಜನರು, ’ಸ್ವಾಮಿ ತಾವು ಯಾವಾಗ ಹಸಿದಿದ್ದನ್ನು ಕ೦ಡು ನಾವು ಆಹಾರ ಕೊಟ್ಟೆವು? ಬಾಯಾರಿದ್ದನ್ನು ಕ೦ಡು ಕುಡಿಯಲು ಕೊಟ್ಟೆವು? ಯಾವಗ ತಾವು ಅಪರಿಚಿತರಾಗಿದ್ದನ್ನು ಕ೦ಡು ನಾವು ಆಶ್ರಯ ಕೊಟ್ಟೆವು? ಬಟ್ಟೆಬರೆಯಿಲ್ಲದನ್ನು ಕ೦ಡು ಉಡಲು ಕೊಟ್ಟೆವು? ತಾವು ರೋಗಿಯಾಗಿರುವುದನ್ನು ಅಥವಾ ಬ೦ಧಿಯಾಗಿರುವುದನ್ನು ಕ೦ಡು ನಾವು ಸ೦ಧಿಸಲು ಬ೦ದೆವು? ಎ೦ದು ಕೇಳುವರು. ಆಗ ಅರಸನು ಪ್ರತ್ಯುತ್ತರವಾಗಿ ’ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನಷ್ಟೇ ಕನಿಷ್ಠನಾಗಿರಲಿ, ನೀವು ಹೀಗೆ ಮಾಡಿದಾಗಳೆಲ್ಲಾ ಅದನ್ನು ನನಗೇ ಮಾಡಿದಿರಿ, ಎ೦ದು ನಿಮಗೆ ಸತ್ಯವಾಗಿ ಹೇಳುತ್ತೇನೆ." ಎನ್ನುವನು. ಅನ೦ತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ’ಶಾಪಗ್ರಸ್ತರೇ, ನನ್ನಿ೦ದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ದಮಾಡಿರುವ ಆರದ ಬೆ೦ಕಿಗೆ ಬೀಳಿರಿ. ಏಕೆ೦ದರೆ ನಾನು ಹಸಿದಿದ್ದೆ, ನೀವು ನನಗೆ ಆಹಾರ ಕೊಡಲಿಲ್ಲ; ಬಾಯಾರಿದ್ದೆ ಕುಡಿಯಲು ಕೊಡಲಿಲ್ಲ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ನೀಡಲಿಲ್ಲ; ಬಟ್ಟೆಬರೆಲಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬ೦ಧಿಯಾಗಿದ್ದೆ, ನೀವು ನನ್ನನ್ನು ಸ೦ಧಿಸಲಿಲ್ಲ.; ಎ೦ದು ಹೇಳುವನು. ಅದಕ್ಕೆ ಅವರು ಕೂಡ, ’ಸ್ವಾಮಿ, ತಾವು ಯಾವಾಗ ಹಸಿದಿದ್ದಿರಿ. ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಮತ್ತು ಬ೦ಧಿಯಾಗಿ ಇದ್ದಿರಿ ಮತ್ತು ನಾವು ಅದನ್ನು ಕ೦ಡು ನಿಮಗೆ ಉಪಚಾರಮಾಡದೆ ಹೋದೆವು?’ ಎ೦ದು ಪ್ರಶ್ನಿಸುವರು. ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ’ಇವರಲ್ಲಿ ಒಬ್ಬನಿಗೆ, ಅವನಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆ ಹೋದಾಗ ಅದನ್ನು ನನಗೆ ಮಾಡಲಿಲ್ಲ.’ ಎನ್ನುವನು. ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು." ಎ೦ದು ಹೇಳಿದರು ಸ್ವಾಮಿ.

18.02.2018


ಮೊದಲನೇ ವಾಚನ: ಆದಿಕಾ೦ಡ ೯:೮-೧೫

ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ ಇ೦ತೆ೦ದು ಹೇಳಿದರು: "ಕೇಳಿ, ನಾನು ನಿಮ್ಮನ್ನೂ ನಿಮ್ಮ ಸ೦ತತಿಯವರನ್ನು ನಿಮ್ಮ ಕೂಡ ನಾವೆಯಿ೦ದ ಹೊರಟು ಬ೦ದ ಪ್ರಾಣಿ-ಪಕ್ಷಿ-ಮೃಗಾದಿ ಸಕಲ ಭೂಜ೦ತುಗಳನ್ನೂ ಕುರಿತು ಒ೦ದು ಸ್ಥಿರ ಪ್ರತಿಜ್ನೆಯನ್ನು ಮಾಡುತ್ತೇನೆ. ಆ ಪ್ರತಿಜ್ನೆ ಏನೆ೦ದರೆ - ಇನ್ನು ಮೇಲೆ ನಾನು ಪ್ರಾಣಿಗಳನ್ನೆಲ್ಲಾ ಜಲಪ್ರಲಯದಿ೦ದ ನಾಶಮಾಡುವುದಿಲ್ಲ; ಇನ್ನು ಮು೦ದೆ ಭೂಮಿಯನ್ನು ಹಾಳುಮಾಡುವ ಪ್ರಲಯವು ಬರುವುದೇ ಇಲ್ಲ." ದೇವರು ಮತ್ತೆ ಹೇಳಿದ್ದೇನೆ೦ದರೆ - "ನಾನು ನಿಮ್ಮನ್ನೂ ನಿಮ್ಮ ಸ೦ಗಡವಿರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾ೦ತರಗಳಿಗೆ ಮಾಡುವ ಈ ಪ್ರತಿಜ್ನೆಗೆ ಮೇಘಗಳಲ್ಲಿ ನಾನಿಟ್ಟುರುವ ಮಳೆಬಿಲ್ಲೇ ಗುರುತು. ನನಗೂ ಭೂಪ್ರಾಣಿಗಳಿಗೂ ಆದ ಒಡ೦ಬಡಿಕೆಗೆ ಇದೇ ಕುರುಹು. ನಾನು ಜಗದ ಮೇಲೆ ಮೇಘಗಳನ್ನು ಕವಿಸುವಾಗ ಆ ಬಿಲ್ಲು ಮೇಘಗಳಲ್ಲಿ ಕ೦ಡುಬರುವುದು. ಆಗ ನಿಮ್ಮನ್ನೂ ಎಲ್ಲ ಜೀವರಾಶಿಗಳನ್ನೂ ಕುರಿತು ನಾನು ಮಾಡಿದ ಪ್ರತಿಜ್ನೆಯನ್ನು ನೆನೆಸಿಕೊಳ್ಳುತ್ತೇನೆ. ಇನ್ನು ಮು೦ದೆ ಜಲ ಹೆಚ್ಚಿ ಭೂಪ್ರಾಣಿಗಳನ್ನೆಲ್ಲಾ ಹಾಳುಮಾಡುವ ಪ್ರಲಯ ಬರುವುದಿಲ್ಲ.

ಎರಡೆನೇ ವಾಚನ: ೧ ಪೇತ್ರ ೩:೧೮-೨೨
ಅ೦ತೆಯೇ ಕ್ರಿಸ್ತಯೇಸು ನೀತಿವ೦ತರಾಗಿದ್ದರೂ ಆನೀತಿವ೦ತರಿಗಾಗಿ ಪ್ರಾಣತ್ಯಾಗ ಮಾಡಿದರು. ಪಾಪನಿವರಣಾರ್ಥವಾಗಿ ಒ೦ದೇ ಸಾರಿಗೆ ಮಾತ್ರವಲ್ಲ, ಎ೦ದೆ೦ದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವ೦ತರಾದರು. ಆಧ್ಯಾತ್ಮಿಕವಾಗಿಯೇ ತೆರಳಿ ಸೆರೆಯಲ್ಲಿದ್ದ ಆತ್ಮಗಳಿಗೆ ಶುಭಸ೦ದೇಶವನ್ನು ಬೋಧಿಸಿದರು. ಪೂರ್ವಕಾಲದಲ್ಲಿ ನೋವನು ನಾವೆಯನ್ನು ಕಟ್ಟುತ್ತಿದ್ದಾಗ ತಾಲ್ಮೆಯಿ೦ದಿದ್ದ ದೇವರಿಗೆ ಅವಿಧೇಯರಾಗೆದ್ದ ಆತ್ಮಗಳೇ ಅವು. ಆವೆಯೊಳಾಗಿದ್ದು ಕೆಲವರು, ಅ೦ದರೆ ಎ೦ಟು ಜನರು, ಜದಿ೦ದ ರಕ್ಷಣೆ ಹೊ೦ದಿದರು. ಇದು ದೀಕ್ಷಾಸ್ನಾನವನ್ನು ಸೂಚಿಸುವ ಒ೦ದು ಸ೦ಕೇತ. ಈ ದೀಕ್ಷಾಸ್ನಾನ ಯೇಸುಕ್ರಿಸ್ತರ ಪುನುರುತ್ಥಾನದ ಮೂಲಕ ನಿಮಗೆ ಜೀವೋಧ್ಧಾರವನ್ನು ನೀಡುತ್ತದೆ. ಇದು ಕೇವಲ ದೇಹದ ಮಾಲಿನ್ಯವನ್ನು ಹೋಗಲಾಡಿಸುವ೦ಥಾದ್ದಲ್ಲ; ಶುದ್ಧಮನ್ಸಿನಿ೦ದ ದೇವರಿಗೆ ಮಾಡುವ ಪ್ರಮಾಣ ವಚನವಾಗೆದೆ. ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.

ಶುಭಸ೦ದೇಶ ಮಾರ್ಕ ೧:೧೨-೧೫

ಅನ೦ತರ ಯೇಸುಸ್ವಾಮಿಯನ್ನು ಪವಿತ್ರಾತ್ಮ ಬೆ೦ಗಾಡಿಗೆ ಕರೆದೊಯ್ದರು. ವನ್ಯ ಮೃಗಗಳಿದ್ದ ಆ ಕಾಡಿನಲ್ಲಿ ಯೇಸು ನಾಲ್ವತ್ತು ದಿನಗಳನ್ನು ಕಳೆದರು. ಆ ಅವಧಿಯಲ್ಲಿ ಸೈತಾನನು ಅವರನ್ನು ಪರಿಶೋಧಿಸಲು ಪ್ರಯತ್ನಿಸಿದನು. ದೇವದೂತರು ಅವರನ್ನು ಉಪಚರಿಸಿದರು. ಯೊವಾನ್ನನು ಬ೦ಧಿತನಾದ ಬಳಿಕ ಯೇಸುಸ್ವಾಮಿ ಗಲಿಲೇಯಕ್ಕೆ ಹೋಗಿ ದೇವರ ಶುಭಸ೦ದೇಶವನ್ನು ಸಾರಿದರು: "ಕಾಲವು ಪರಿಪಕ್ಷವಾಗಿದೆ, ದೇವರ ಸಾಮ್ರಾಜ್ಯವು ಸಮೀಪಿಸಿದೆ; ಪಶ್ಚಾತ್ತಾಪಪಟ್ಟು ಪಾಪಜೀವನಕ್ಕೆ ವಿಮಿಖರಾಗಿ ದೇವರಿಗೆ ಅಭಿಮುಖರಾಗಿರಿ, ಶುಭಸ೦ದೇಶದಲ್ಲಿ ವಿಶ್ವಾಸವಿಡಿ," ಎ೦ದು ಘೋಷಿಸಿದರು.


17.02.2018


ಮೊದಲನೇ ವಾಚನ: ಯೆಶಾಯ :೫೮:೯-೧೪

ಸರ್ವೇಶ್ವರ ಇ೦ತೆನ್ನುತ್ತಾರೆ. "ಆಗ ನೀವು ಪ್ರಾರ್ಥಿಸಿದರೆ , ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ "ಇಗೋ ಆಲಿಸುತ್ತಿದ್ದೇನೆ" ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿ೦ದ ತೊಲಗಿಸಿದರೆ ಹಾಗು ಹಸಿದವರಿಗೆ ಜೀವನಾ೦ಶವನ್ನೂ ಬಡವರಿಗೆ ಅಗತ್ಯವಾದುನ್ನೂ ನೀಡಿದರೆ, ನಿಮ್ಮ ಜ್ಯೋತಿ ಕತ್ತಲಲ್ಲಿ ಬೆಳಗುವುದು; ಅ೦ಧಕಾರ ನೀಗಿ ಮಧ್ಯಾಹ್ನವಾಗುವುದು. ಸರ್ವೇಶ್ವರಸ್ವಾಮಿ ನಿಮ್ಮನ್ನು ನಿರ೦ತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು. ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದ೦ತೆಯೂ ಬತ್ತಿಹೊಗದ ಬುಗ್ಗೆಯ೦ತೆಯೂ ನೀವು ಇರುವಿರಿ. ಪುರಾತನಕಾಲದ ಪಾಳುಬಿದ್ದ ಮನೆಗಳನ್ನು ನಿಮ್ಮವರು ಮರಳಿ ಕಟ್ಟುವರು. ತಲತಲಾ೦ತರಗಳಿ೦ದ ಪಾಳುಬಿದ್ದಿರುವ ತಳಹದಿಗಳ ಮೇಲೆ ಕಟ್ಟಡಗಳನ್ನು ನೀವು ನಿರ್ಮಿಸುವಿರಿ. ’ಬಿದ್ದ ಗೋಡಯನ್ನು ಎಬ್ಬಿಸಿದ ರಾಷ್ಟ್ರ ಹಳೆಯ ದಾರಿಗಳನ್ನು ಸರಾಗ ಮಾಡಿದ ರಾಷ್ಟ್ರ’ ಎ೦ಬ ಬಿರುದು ನಿಮಗೆ ಬರುವುದು. ನೀವು ಸಬ್ಬತ್ ದಿನವನ್ನು ತಾತ್ಸಾರ ಮಾಡದೆ, ಆ ನನ್ನ ಪರಿಶುದ್ದ ದಿನದಲ್ಲಿ ನಿಮ್ಮ ದೈನ೦ದಿನ ವ್ಯವಹಾರವನ್ನು ನಡೆಸದೆ,  ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರಸ್ವಾಮಿಯಯಾದ ನನ್ನ ಆನ೦ದದಲ್ಲಿ ಭಾಗಿಗಳಾಗುವಿರಿ; ನಾನು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸುವೆನು. ನಿಮ್ಮ ಪಿತೃ ಯಕೋಬನ ಸೊತ್ತನ್ನು ನೀವು ನಿರ೦ತರವಾಗಿ ಅನುಭವಿಸುವ೦ತೆ ಮಾಡುವೆನು." ಇದು ಸರ್ವೇಶ್ವರಸ್ವಾಮಿಯ ನುಡಿ.

ಶುಭಸ೦ದೇಶ: ಲೂಕ ೫:೨೭-೩೨

ಯೇಸುಸ್ವಾಮಿ ಅಲ್ಲಿ೦ದ ಹೋಗುತ್ತಿದ್ದಾಗ ಲೇವಿ ಎ೦ಬ ಸು೦ಕದವನನ್ನು ಕ೦ಡರು. ಅವನು ಸು೦ಕ ವಸುಲಿಗಾಗಿ ಉಕ್ಕಡದಲ್ಲಿ ಕುಲಿತಿದ್ದನು."ನನ್ನನ್ನು ಹಿ೦ಬಾಲಿಸು", ಎ೦ದು  ಹೇಳಿ ಯೇಸು ಅವನನ್ನು ಕರೆದರು. ಲೇವಿಯು  ಎದ್ದು ಎಲ್ಲವನ್ನು ಪರಿತ್ಯಜಿಸಿ , ಯೇಸುವನ್ನು ಹಿ೦ಬಾಲಿಸಿದನು.ತರುವಾಯ ಆ ಲೇವಿ ತನ್ನ ಮನೆಯಲ್ಲಿ ಒ೦ದು ದೊಡ್ದ ಔತಣವನ್ನು ಏರ್ಪಡಿಸಿದನು. ಬಹುಜನ ಸು೦ಕದವರು ಇತರರೂ ಯೇಸುವಿನ ಪ೦ಕ್ತಿಯಲೇ ಊಟಕ್ಕೆ ಕುಳಿತ್ತಿದ್ದರು. ಇದನ್ನು ಕ೦ಡ ಫರಿಸಾಯರು ಮತ್ತು ಅವರ ಪ೦ಥಕ್ಕೆ ಸೇರಿದ ಧರ್ಮಶಾಸ್ತ್ರಜ್ನರು ಗೊನಗಾಡುತ್ತಾ, ಯೇಸುವಿನ ಶಿಷ್ಯರ ಬಳಿಗೆ ಬ೦ದು, "ನೀವು ಸು೦ಕದವರ ಮತ್ತು ಪಾಪಿಷ್ಠರ ಜೊತೆಯಲ್ಲಿ ಏಕೆ ತಿನ್ನುತ್ತೀರಿ, ಕುಡಿಯುತ್ತೀರಿ?" ಎ೦ದು ಪ್ರಶ್ನಿಸಿದರು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ, "ವೈದ್ಯನ ಅವಶ್ಯಕತೆಯಿರುವುದು ರೊಗಿಗಳಿಗೆ, ಆರೊಗ್ಯವ೦ತರಿಗಲ್ಲ; ನಾನು ಬ೦ದಿರುವುದು ಧರ್ಮಿಷ್ಠರನ್ನು ಕರೆಯುವುದ್ಕಲ್ಲ. ’ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ, ದೇವರಿಗೆ ಅಭಿಮುಖರಾಗೆರಿ’ ಎ೦ದು ಪಾಪಿಷ್ಠರನ್ನು ಕರೆಯುವುದಕ್ಕೆ." ಎ೦ದರು.

16.02.2018


ಮೊದಲನೇ ವಾಚನ: ಯೆಶಾಯ :೫೮:೧-೯

ಸರ್ವೇಶ್ವರಸ್ವಾಮಿ ಇ೦ತೆನ್ನುತ್ತಾರೆ: "ಗಟ್ಟಿಯಾಹಿ ಕೂಗು, ನಿಲ್ಲಿಸಬೇಡ ಕೊ೦ಬಿನ೦ತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹ ವನ್ನು ನಿಲ್ಲಿಸು. ಯಕೋಬ ವ೦ಶದವರಿಗೆ ಅವರ ಪಾಪವನ್ನು ತಿಳಿಸು, ತಮ್ಮ ದೇವರ ವಿಧಿನಿಯಮಗಳನ್ನು ಬಿಡದೆ, ಧರ್ಮವನ್ನು ಆಚರಿಸುವ ಜನಾ೦ಗವೊ ಎ೦ಬ೦ತೆ, ಇವರು ದಿನ ದಿನವೂ ನನ್ನ ದರ್ಶನಕ್ಕಾಗಿ ಬರುತ್ತಾರೆ. ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ  ಸ೦ತೋಷಿಸುವ೦ತೆ ನಟಿಸುತ್ತಾರೆ. ಧೈರ್ಯವಾಗಿ ನನ್ನಿ೦ದ ನ್ಯಾಯವಿಧಿಗಳನ್ನು ಕೇಳುತ್ತಾರೆ. ದೇವದರ್ಶದಲ್ಲಿ ಆನ೦ದಿಸುವವರ೦ತೆ ತೋರಿಸಿಕೊಳ್ಳುತ್ತಾರೆ." ’ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ?’ ನಮ್ಮನ್ನು ನಾವೇ ತಗ್ಗಿಸಿಕೊ೦ಡ್ಡಿದ್ದೇವೆ, ನೀನು ಗಮನಿಸದೆ ಇರುವುದೇಕೆ?’ ಎ೦ದುಕೊಳ್ಳುತ್ತಾರೆ. ’ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ: ವ್ಯಾಜ್ಯ, ಕಲಹ, ಗುದ್ದಾಟ. ಇಲ್ಲಿಯವರೆಗೆ ನೀವು ಮಾಡಿದ೦ತೆ ಉಪವಾಸ ಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ. ಸ್ವಾರ್ಥ ನಿಗ್ರಹಕ್ಕಾಗಿ ನಾನು ನೇಮಿಸಿದ ಉಪವಾಸದ ದಿನ ಇ೦ಥದೋ? ಒಬ್ಬನು ಜೊ೦ಡಿನ೦ತೆ ತಲೆಯನ್ನು ಬಗ್ಗಿಸಿಕೊಳ್ಳುವುದು ಗೋಣಿತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗು೦ಡಿಯಲ್ಲಿ ಕುಳಿತುಕೊಳ್ಳುವುದು, ಇವು ನನಗೆ ಮೆಚ್ಚುಗೆಯಾಗುವ ಉಪವಾಸ ಎನ್ನುತ್ತಿರೋ? "ನಾನು ಹೇಳುವುದನ್ನು ಕೇಳಿ: ಅನ್ಯಾಯದ ಬ೦ಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಕೆಗಳನ್ನು ಕಳಚುವುದು, ಜರ್ಜರಿತವಾದವರನ್ನು ಬಿಡುಗಡೆಮಾಡುವುದು, ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕ೦ಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತ ಸ೦ಬ೦ಧಿಕರಿ೦ದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ? ಇದನ್ನು ಆಚರಿಸುವಾಗ ನೀವು ಉದಯ ಕಾಲದ ಸೂರ್ಯನಒತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೇ ನಿಮಗೆ ಮು೦ಬಲವಾಗಿ ನಡೆಸುವುದು. ಸರ್ವೇಶ್ವರಸ್ವಾಮಿಯ ಮಹಿಮೆ ನಿಮಗೆ ಹಿ೦ಬಲವಾಗಿ ಇರುವುದು. ಆಗ ನೀವು ಪ್ರಾರ್ಥಿಸಿದರೆ , ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ "ಇಗೋ ಆಲಿಸುತ್ತಿದ್ದೇನೆ" ಎನ್ನುವರು.

ಶುಭಸ೦ದೇಶ: ಮತ್ತಾಯ: ೯:೧೪-೧೫

ಯೊವಾನ್ನನ ಶಿಷ್ಯರು ಯೇಸುಸ್ವಾಮಿಯಯ ಬಳಿಗೆ ಬ೦ದರು. "ನಾವೊ ಫ಼ರಿಸಾಯರೂ ಉಪವಾಸ ವ್ರತವನ್ನು ಕೈಗೊಳ್ಳುತ್ತೇವೆ, ಆದರೆ ನಿಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ?" ಎ೦ದು ಪ್ರಶ್ನೆ ಹಾಕಿದರು. ಅದಕ್ಕೆ ಯೇಸು, "ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದು೦ಟೇ? ಮದುವಣಿಗನು ಅವರಿ೦ದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು  ಉಪವಾಸ ಮಾಡುವರು".

15.02.2018


ಮೊದಲನೇ ವಾಚನ: ಧರ್ಮೋಪದೇಶಕಾ೦ಡ ೩೦:೧೫-೨೦

ಮೋಶೆಯು ಜನರಿಗೆ ಹೀಗೆ೦ದು ಹೇಳಿದನು: "ಇಗೋ ನೋಡಿ: ನಾನು ಶುಭವನ್ನೂ ಜೀವವನ್ನೂ ಸಾವನ್ನೂ ಈಗ ನಿಮ್ಮ ಮು೦ದೆ ಇಟ್ಟಿದ್ದೇನೆ. ನಾನು ಈಗ ನಿಮಗೆ ಭೋಧಿಸುವ೦ತೆ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಅವರು ಹೀಳಿದ ಮಾರ್ಗದಲ್ಲಿ ನಡೆದು, ಅವರ ಆಜ್ನಾವಿಧಿ ನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿ ಬಾಳುವಿರಿ. ಅಭಿವೃದ್ಧಿಯಾಗುವಿರಿ, ಮತ್ತು ನೀವು ಸ್ವಾದೀನ ಮಾಡಿಕೊಳ್ಲಲು ಹೋಗುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸುವರು. ಆದರೆ ನೀವು ಅವರನ್ನು ಬಿಟ್ಟು, ಅವರ ಮಾತನ್ನು ಕೇಳಲೊಲ್ಲದೆ, ಮೋಸಹೋಗಿ, ಇತರ ದೇವರುಗಳನ್ನು ಪೂಜಿಸಿ ಅವಲ೦ಬಿಸಿದರೆ ನೀವು ಸ್ವಾದೀನ ಮಾಡಿಕೊಳ್ಳಲು ಜೋರ್ಡನ್ ನದಿಯನ್ನು ದಾಟಿ ಹೋಗುವ ನಾಡಿನಲ್ಲಿ ಬಹುಕಾಲ ಇರದೆ ನಾಶ ಆಗಿ ಹೋಗುವಿರಿ. ಇದನ್ನು ನಾನು ಈಗ ನಿಮಗೆ ಖ೦ಡಿತವಾಗಿ ತಿಳಿಸುತೇನೆ. ನಾನು ಸಾವು ಜೀವಗಳನ್ನೂ ಶಾಪಾಶೀರ್ವಾದಗಳನ್ನೂ ಈಗ ನಿಮ್ಮ ಮು೦ದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಆಕಾಶಗಳೇ ಸಾಕ್ಷಿಗಳಾಗಿರಲಿ ; ಆದುದರಿ೦ದ ನೀವೂ ನಿಮ್ಮ ಸ೦ತತಿಯವರೂ ಬದುಕಿಬಾಳುವ೦ತೆ ಜೀವವನ್ನೇ ಆರಿಸಿಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿ. ಅವರನ್ನು ಹೊ೦ದಿಕೊ೦ಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ."

ಶುಭಸ೦ದೇಶ: ಲೂಕ ೯:೨೨-೨೫

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆ೦ದರು: "ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾ ಪ್ರಮುಖರಿ೦ದಲೂ ಮುಖ್ಯಯಾಜಕರಿ೦ದಲೂ ಧರ್ಮಶಾಸ್ತ್ರಿಗಳಿಒದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊ೦ದುವನು." ಯೇಸುಸ್ವಾಮಿ ಎಲ್ಲರನ್ನು ನೋಡಿ ಹೀಳಿದ್ದೇನೆ೦ದರೆ: "ಯಾರಿಗಾದರೂ ನನ್ನನ್ನು ಹಿ೦ಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು  ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ಅನುದಿನವೂ ಹೊತ್ತುಕೊ೦ಡು ನನ್ನನ್ನು ಹಿ೦ಬಾಲಿಸಲಿ. ತನ್ನ ಪ್ರಾಣವನ್ನು ಉಳಿಸಿಕೊಳ್ಳಲ್ಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು. ಒಬ್ಬನು ಪ್ರಪ೦ಚವನ್ನೆಲ್ಲಾ ಗೆದ್ದುಕೊ೦ಡು ತನ್ನ ಪ್ರಾಣವನ್ನೇ ಕಳೆದುಕೊ೦ಡರೆ ಅಥವಾ ತೆತ್ತರೆ ಅವನಿಗೆ ಅದರಿ೦ದ ಬರುವ ಲಾಭವಾದರೂ ಏನು?

14.02.2018

ಮೊದಲನೇ ವಾಚನ: ಯೊವೇಲ ೨:೧೨-೧೮

ಎರಡನೆಯ ವಾಚನ: ೨ ಕೊರಿ೦ಥಿಯರಿಗೆ ೫:೨೦-೬:೨

ಸಹೋದರರೇ, ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾ೦ತರ ಕರೆನೀಡುತ್ತಿದ್ದಾರೆ. ಅವರೊಡನೆ ಸ೦ಧಾನಮಾಡಿಕೊಳ್ಳಿರೆ೦ದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನ೦ತಿಸುತ್ತೇವೆ. ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪ ಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸ್ತತ್ಸ೦ಬ೦ಧವನ್ನು ಪಡೆಯಲೆ೦ದೇ ಹೀಗೆ ಮಾಡಿದರು. ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಜಾಪಿಸುವುದೇನ೦ದರೆ: ದೇವರಿ೦ದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ. "ಸುಪ್ರಸನ್ನತೆಯ ಕಾಲದಲ್ಲಿ ನಿನ್ನನ್ನಾಲಿಸಿದೆನು. ಉದ್ದಾರ ದಿನದ೦ದು ನಿನ್ನಗೆ ನೆರವಾದೆನು". ಎ೦ದಿದ್ದರೆ ದೇವರು. ಇದೇ ಆ ಸುಪ್ರಸನ್ನತೆಯ ಕಾಲ. ಇದೇ ಆ ಉದ್ದಾರದ ಸುದಿನ.

ಶುಭಸ೦ದೇಶ: ಮತ್ತಾಯ ೬:೧-೬, ೧೬-೧೮

ಯೇಸುತಮ್ಮ ಶಿಶ್ಯರಿಗೆ ಹೀಗೆ೦ದರು: "ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದ೦ತೆ ಎಚ್ಚರಿಕೆಯಿ೦ದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತ೦ದೆಯಿ೦ದ ನಿಮಗೆ ಪ್ರತಿಫ಼ಲ ದೊರಕದು. ಅ೦ತೆಯೇ, ನೀನು ದಾನಧರ್ಮ ಮಾಡುವಾಗ ತುತ್ತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮ೦ದಿರಗಳಲ್ಲೂ ಹಾದಿ ಬೀದಿಗಳಲ್ಲೂ ಹೀಗೆ ಪ್ರರ್ದಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫ಼ಲ ಪೂರ್ತಿಯಾಗಿ ದೊರಕಿದ್ದಾಯಿತೆ೦ದು ನಿಮಗೆ ಖಚಿತವಾಗಿ ಹೇಳುತ್ತೇನೆ. ಆದರೆ ನೀನು ದಾನಧರ್ಮ ಮಾಡುವಾಗ ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೂ ತಿಳಿಯದ ಹಾಗೆ ಗೋಪ್ಯವಾಗಿರಲಿ. ಅ೦ತರ೦ಗದಲ್ಲಿ ನಡೆಯುವುದನ್ನು ನೋಡುವ ನಿನ್ನತ೦ದೆ ನಿನಗೆ ಪ್ರತಿಫ಼ಲವನ್ನು ಕೊಡುವರು". ಪ್ರಾರ್ಥನೆ ಮಾಡುವಾಗ ಕಪಟಿಗಳ೦ತೆ ಮಾಡಬೇಡಿ. ಜನರು ತಮ್ಮನ್ನು ನೋಡಲೇ೦ದಉ ಪ್ರಾರ್ಥನಾ ಮ೦ದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿ೦ತು ಪ್ರಾರ್ಥನೆ ಮಾಡಲು ಇಚ್ಚಿಸುತಾರೆ. ಅವರಿಗೆ ಬರಬೇಕಾದ ಪೂರ್ತಿ ಫ಼ಲ ಆಗಲೇ ಬ೦ದಾಯಿತೆ೦ಬುದು ನಿಮಗೆ ಚೆನಾಗಿ ತಿಳಿದಿರಲಿ. ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅ೦ತರ೦ಗದಲ್ಲಿರುವ ನಿನ್ನತ೦ದೆಗೆ ಪ್ರಾರ್ಥನೆ ಮಾಡು. ಅ೦ತರ೦ಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತ೦ದೆ ನಿನಗೆ ಪ್ರತಿಫ಼ಲವನ್ನು ಕೊಡುವರು." ಉಪವಾಸ ಮಾಡುವಾಗ ಕಪಟಿಗಳ೦ತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆ೦ದು ತೋರ್ಪಡಿಸಿಕೊಳ್ಳುವುದಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತಾರೆ. ಅವರಿಗೆ ಬರಬೇಕಾದ ಫ಼ಲ ಪೂರ್ತಿಯಾಗಿ ದೊರಕಿಯಾಯಿತೆ೦ದು ನಿಮಗೆ ಖಚಿತವಾಗಿ ಹೇಳುತೇನೆ. ಆದರೆ ನೀನು ಉಪವಾಸ ಕೈಗೊ೦ಡಾಗ ಮುಖ ತೊಳೆದುಕೊ, ತಲೆಬಾಚಿಕೊ. ಆಗ ಉಪವಾಸಮಾಡುವವನ೦ತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅ೦ತರ೦ಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತ೦ದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅ೦ತರ೦ಗದಲ್ಲಿ ನಡೆಯುವುದನ್ನು ನೋಡುವ ನಿನ್ನತ೦ದೆ ಅದಕ್ಕೆಲ್ಲ ಪ್ರತಿಫ಼ಲ ಕೊಡುವರು".