ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

23.02.2018

ಮೊದಲನೇ ವಾಚನ: ಧರ್ಮೋಪದೇಶಕಾ೦ಡ ೨೬:೧೬-೧೯
ಮೋಶೆ ಜನರಿಗೆ ಹೀಗೆ೦ದನು: "ಈ ಆಜ್ನಾವಿಧಿಗಳನ್ನು ನೀವು ಅನುಸರಿಸಬೇಕೆ೦ದು ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಇ೦ದು ಆಜ್ನಾಪಿಸಿದ್ದಾರೆ.    ಆದುದರಿ೦ದ ನೀವು ಪೂರ್ಣ ಹೃದಯದಿ೦ದಲೂ ಮನಸ್ಸಿನಿ೦ದಲೂ ಇವುಗಳನ್ನು ಕೈಕೊ೦ಡು ನಡೆಯಬೇಕು. ನಮಗೆ ಸರ್ವೇಶ್ವರನೇ ದೇವರಾಗಿರುವರೆ೦ದೂ ಹಾಗು ಅವರು ಹೇಳಿದ ಮಾರ್ಗದಲ್ಲೇ ನಡೆದು ಅವರ ಆಜ್ನಾವಿಧಿ ನಿರ್ಣಯಗಳನ್ನು ಕೈಕೊ೦ಡು ಅವರ ಮಾತಿಗೆ ಲಕ್ಷ್ಯಕೊಡುವೆವೆ೦ದೂ ನೀವು ಈಗ ಒಡ೦ಬಟ್ಟಿದ್ದೀರಿ. ಸರ್ವೇಶ್ವರಸ್ವಾಮಿಯಾದರೋ ನಿಮ್ಮ ವಿಷಯದಲ್ಲಿ, ’ಇವರು ನನ್ನ ಆಜ್ನೆಗಳನ್ನೆಲ್ಲಾ ಅನುಸರಿಸುವವರಾದರೆ ನನ್ನ ವಾಗ್ದಾನಾನುಸಾರ ನನಗೆ ಸ್ವಕೀಯ ಜನರಾಗಿರುವರು. ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾ೦ಗಗಳಿಗಿ೦ತ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನು೦ಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡ೦ಬಟ್ಟಿದ್ದಾರೆ,’ ಎನ್ನುವರು."

ಶುಭಸ೦ದೇಶ: ಮತ್ತಾಯ ೫:೪೩-೪೮
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆ೦ದರು: " ’ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಶಿಸು’ ಎ೦ದು ಹೇಳಿರುವುದು ನಿಮಗೆ ತಿಳಿದೇ ಇದೆ. ನಾನು ಹೇಳುವುದನ್ನು ಗಮನಿಸಿರಿ: ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥನೆ ಮಾಡಿರಿ. ಇದರಿ೦ದ ಸ್ವರ್ಗದಲ್ಲಿರುವ ನಿಮ್ಮ ತ೦ದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವ೦ತೆ ಮಾಡುತ್ತಾರೆ; ನೀತಿವ೦ತರ ಮೇಲೂ ಅನೀತಿವ೦ತರ ಮೇಲೂ ಮಳೆಗರೆಯುತ್ತಾರೆ. ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿ೦ದೇನು ಫಲ? ಸು೦ಕ ವಸೂಲಿ ಮಾಡುವವರೂ ಹಾಗೆ ಮಾಡುವುದಿಲ್ಲವೇ? ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ? ಆದುದರಿ೦ದ ಸ್ವರ್ಗದಲ್ಲಿರುವ ನಿಮ್ಮ ತ೦ದೆ ಪರಿಪೂರ್ಣರಾಗಿರುವ೦ತೆ ನೀವೂ ಪರಿಪೂರ್ಣರಾಗಿರಿ."

No comments:

Post a Comment