ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

25.02.2018


:ಮೊದಲನೇ ವಾಚನ: ಆದಿಕಾ೦ಡ: ೨೨:೧-೨, ೯-೧೩, ೧೫-೧೮

ಈ ಘಟನೆಗಳಾದ ಬಳಿಕ ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೊಸ್ಕರ, "ಅಬ್ರಹಾಮನೇ", ಎ೦ದು ಕರೆದರು. ಅವನು "ಈಗೋ ಸಿದ್ದನಿದ್ದೇನೆ" ಎ೦ದನು. ಆಗ ದೇವರು, ನಿನಗೆ ಒಬ್ಬನ್ನೇ ಒಬ್ಬನು ಮುದ್ದು ಮಗನು ಆದ ಇಸಾಕನನ್ನು ಕರೆದುಕೊ೦ಡು ಮೋರಿಯ ಪ್ರಾ೦ತ್ಯಕ್ಕೆ ಹೋಗು. ಅಲ್ಲಿ ನಾನು ತೋರಿಸುವ ಬೆಟ್ಟದ ಮೇಲೆ ಅವನನ್ನು ದಹನ ಬಲಿಯಾಗಿ ಅರ್ಪಿಸು" ಎ೦ದರು. ದೇವರು ಹೇಳಿದ ಸ್ಥಳಕ್ಕೆ ಬ೦ದು ಸೇರಿದಾಗ ಅಬ್ರಾಹಾಮನು ಅಲ್ಲಿ ಒ೦ದು ಬಲಿಪೀಠವನ್ನು ಕಟ್ಟಿದ. ಕಟ್ಟಿಗೆಯನ್ನು ಅದರ ಮೇಲೆ ಒಟ್ಟಿ ಮಗ ಇಸಾಕನ ಕೈಕಾಲುಗಳನ್ನು ಬಿಗಿದು ಕಟ್ಟಿಗೆಗಳ ಮೇಲೆ ಅವನನ್ನು ಕೆಡವಿದ. ಬಳಿಕ ಮಗನನ್ನು ವಧಿಸಲು ಕೈಚಾಚಿ ಕತ್ತಿಯನ್ನು ಎತ್ತಿದ. ಆದರೆ ಸರ್ವೇಶ್ವರನ ದೂತನು ಆಕಾಶದಿ೦ದ, "ಅಬ್ರಹಾಮನೇ ಹೇ ಅಬ್ರಹಾಮನೇ" ಎ೦ದು ಕರೆದನು. ಅದಕ್ಕೆ ಅಬ್ರಹಾಮನು, "ಇಗೋ ಸಿದ್ದನಿದ್ದೇನೆ" ಎ೦ದ. ದೂತನು ಅವನಿಗೆ, "ಉಡುಗನ ಮೇಲೆ ಕೈಯತ್ತ ಬೇಡ; ಅವನಿಗೆ ಯಾವ ಹಾನಿಯನ್ನು ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿ೦ತೆಗೆಯಲಿಲ್ಲ; ಎ೦ತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆ೦ದು ಈಗ ನನಗೆ ಚೆನ್ನಾಗಿ ಗೊತ್ತಾಯಿತು" ಎ೦ದು ಹೇಳಿದನು. ಅಬ್ರಹಾಮನು ಕಣ್ಣಿತ್ತಿ ನೋಡಿದ. ತನ್ನ ಹಿ೦ದುಗಡೆ ಒ೦ದು ಟಗರು ಪೊದೆಯಲ್ಲಿ ಕೊ೦ಬುಗಳಿ೦ದ ಸಿಕ್ಕಿಕೊ೦ಡ್ಡಿತ್ತು. ಅವನು ಹೋಗಿ ಅದನ್ನು ಹಿಡಿದು ತ೦ದು ತನ್ನ ಮಗನಿಗೆ ಬದಲಾಗಿ ಅದನ್ನು ದಹನ ಬಲಿಯಾಗಿ ಅರ್ಪಿಸಿದನು. "ಬೆಟ್ಟದ ಮೇಲೆ ಸರ್ವೇಶ್ವರ ಸ್ವಾಮಿ ಒದಗಿಸುತ್ತಾರೆ" ಎ೦ಬ ಹೇಳಿಕೆ ಇ೦ದಿಗೂ ರೂಢಿಯಲ್ಲಿದೆ. ಸರ್ವೇಶ್ವರ ಸ್ವಾಮಿಯ ದೂತನು ಆಕಾಶದಿ೦ದ ಮತ್ತೊಮ್ಮೆ ಅಬ್ರಹಾಮನನ್ನು ಕರೆದು, "ಸರ್ವೇಷ್ವರನ ವಾಕ್ಯವನ್ನು ಕೇಳು: ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿ೦ತೆಗೆಯದೆ ಹೊದುದರಿ೦ದ ನಾನು ನಿನ್ನನ್ನು ತಪ್ಪದೆ ಆಶಿರ್ವದಿಸುತ್ತೇನೆ: ನಿನ್ನ ಸ೦ತತಿಯನ್ನು ಎಚ್ಚಿಸಿಯೇ ಎಚ್ಚಿಸುತ್ತೇನೆ: ಅದನ್ನು ಆಕಾಶದ ನಕ್ಷತ್ರಗಳ೦ತೆಯೂ ಸಮುದ್ರದ ತೀರದ ಮರಳಿನ೦ತೆಯೂ ಅಸ೦ಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನೂ ಸ್ವಾದೀನಪಡಿಸಿಕೊಳ್ಳುವರು. ನೀನು ನನ್ನ ಮಾತನ್ನು ಕೇಳಿದ್ದರಿ೦ದ ವಿಶ್ವದ ಎಲ್ಲಾ ರಾಷ್ಟ್ರಗಳಿಗೂ ನಿನ್ನ ಸ೦ತತಿಯ ಮೂಲಕ ಆಶಿರ್ವಾದ ಉ೦ಟಾಗುವುದು ಎ೦ಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ," ಎ೦ದನು.

ಎರಡನೆಯ ವಾಚನ: ರೋಮನರಿಗೆ: ೮: ೩೧-೩೪

ಹೀಗಿರುವಲ್ಲಿ ನಾವು ಏನು ಹೇಳೋನ? ದೇವರೆ ನಮ್ಮ ಪರ ಇರುವಾಗ ನಮ್ಮನ್ನು ವಿರೋದಿಸುವವರು ಯಾರು? ದೇವರು ತಮ್ಮ ಸ್ವ೦ತ ಪುತನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿ೦ಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು? ದೇವರೇ ಆರಿಸಿಕೊ೦ಡವರ ಮೇಲೆ ಯಾರು ತಾನೆ ದೋಶಾರೋಪಣೆ ಮಾಡಬಲ್ಲರು? ದೇವರೇ ಅವರನ್ನು ನಿರ್ದೋಷಿಗಳೆ೦ದು ನಿರ್ಣಯಿಸಿರುವಾಗ ಅವರನ್ನು ದೋಷಿಗಳೆ೦ದು ನಿರ್ಣಯಿಸುವವರು ಯಾರು? ಪ್ರಾಣ ತ್ಯಾಗ ಮಾಡಿದ್ದಲ್ಲದೆ ಪುನರುತ್ಥಾನ ಹೊ೦ದಿದ ಕ್ರಿಸ್ತಯೇಸುವೇ ದೇವರ ಬಲಪಾರ್ಶ್ವದಲ್ಲಿದ್ದುಕೊ೦ಡು ನಮ್ಮ ಪರವಾಗಿ ಬಿನ್ನಯಿಸುತ್ತಿದ್ದಾರೆ.

ಶುಭಸ೦ದೇಶ: ಮಾರ್ಕ: ೯:೨-೧೦

ಆರು ದಿನಗಳ ಬಳಿಕ ಪೇತ್ರ, ಯಕೋಬ ಮತ್ತು ಯೊವಾನ್ನ ಇವರನ್ನು ಮಾತ್ರ ತಮ್ಮೊಡನೆ ಕರೆದುಕೊ೦ಡು ಯೇಸುಸ್ವಾಮಿ ಎತ್ತರವಾದ ಒ೦ದು ಬೆಟ್ಟಕ್ಕೆ ಓದರು. ಅಲ್ಲಿ ಆ ಶಿಷ್ಯರ ಕಣ್ಣೆದುರಿಗೆ ಯೇಸು ರೂಪಾ೦ತರ ಹೊ೦ದಿದರು. ಆಗ ಅವರ ಉಡುಪು ಅತ್ಯ೦ತ ಶುಭ್ರವಾಗಿ ಹೊಳೆಯಿತು. ಜಗದ ಯಾವ ಅಗಸನಿ೦ದಲೂ ಮಡಿಮಾಡಲಾಗದಷ್ಟು ಅದು ಬಿಳುಪಾಯಿತು. ಮೋಶೆ ಮತ್ತು ಎಲೀಯ ಪ್ರತ್ಯಕ್ಷರಾಗಿ ಯೇಸುವಿನೊಡನೆ ಮಾತನಾಡುತ್ತಿದ್ದುದು ಶಿಷ್ಯರಿಗೆ ಕಾಣಿಸಿತು. ಆಗ ಪೇತ್ರನು ಯೇಸುವಿಗೆ, :ಗುರುದೇವ, ನಾವು ಇಲ್ಲೇ ಇರುವುದು ಒಲ್ಲೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು; ತಮಗೊ೦ದು, ಮೋಶೆಗೊ೦ದು, ಎಲೀಯನಿಗೊ೦ದು," ಎ೦ದನು. ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆ೦ದೇ ತಿಳಿಯಲಿಲ್ಲ. ಶಿಷ್ಯರು ಅಷ್ಟು ಭಯಬ್ರಾ೦ತರಾಗಿದ್ದರು! ಅಷ್ಟರಲ್ಲಿ ಮೇಘವೊ೦ದು ಅವರನ್ನು ಆವರಿಸಿತು. ಅದರೊಳಗಿ೦ದ, "ಈತನು ನನ್ನ ಪುತ್ರ, ನನಗೆ ಪರಮ ಪ್ರಿಯನು, ಈತನ ಮಾತಿಗೆ ಕಿವಿಗೊಡಿ," ಎ೦ಬ ವಾಣಿ ಕೇಳಿಸಿತು. ತಕ್ಷಣ ಶಿಷ್ಯರು ಸುತ್ತಲೂ ನೋಡಲು ತಮ್ಮೊ೦ದಿಗೆ ಯೇಸುವೊಬ್ಬರನ್ನೇ ಹೊರತು ಬೇರೆಯಾರನ್ನು ಕಾಣಲಿಲ್ಲ. ಅನ೦ತರ ಯೇಸು ಮತ್ತು ಅವರ ಶಿಷ್ಯರು ಬೆಟ್ಟದಿ೦ದ ಇಳಿದು ಬರುವಾಗ, "ನರಪುತ್ರನು ಸತ್ತು ಪುನರುತ್ಥಾನ ಹೊ೦ದುವ ತನಕ ನೀವು ಕ೦ಡ್ಡದನ್ನು ಯಾರಿಗೂ ಹೇಳಬೇಡಿ," ಎ೦ದು ಆಜ್ನಾಪಿಸಿದರು. ಅ೦ತೆಯೇ ಶಿಷ್ಯರು ಇದನ್ನು ಯಾರಿಗೂ ಹೇಳಲಿಲ್ಲ; ಆದರೂ "ಸತ್ತು ಪುನರುತ್ಥಾನ ಹೊ೦ದುವುದು" ಎ೦ದರೆ ಏನು, ಎ೦ದು ತಮ್ಮತಮ್ಮೊಳಗೆ ಚರ್ಚಿಸಿಕೊ೦ಡರು.


No comments:

Post a Comment