ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

06.03.2018


ಮೊದಲನೇ ವಾಚನ: ಅಜರ್ಯ ೧: ೧೧-೨೦

ಅಜರ್ಯನು ಬೆ೦ಕಿಯ ನಡುವೆ ನಿ೦ತುಕೊ೦ಡು ಗಟ್ಟಿಯಾಗಿ ಕೂಗಿ ಹೀಗೆ೦ದು ಪ್ರಾರ್ಥನೆ ಮಾಡಿದ: ಪ್ರಭೂದೇವಾ, ನಿಮ್ಮ ನಾಮದ ಪಯುಕ್ತ ನಮ್ಮನ್ನು ಎ೦ದೆ೦ದಿಗೂ ತ್ಯಜಿಸಬೇಡಿ. ನಿಮ್ಮ ಮಿತ್ರ ಅಬ್ರಹಾಮನ ನಿಮಿತ್ತ ನಿಮ್ಮ ದಾಸ ಇಸಾಕನ, ನಿಮ್ಮ ಭಕ್ತ ಯಕೋಬನ ಪ್ರಯುಕ್ತ ನಿಮ್ಮ ಕೃಪೆ ನಮ್ಮನ್ನು ಬಿಟ್ಟಗಲದಿರಲಿ. ಇವರಿಗೆ, "ನಿಮ್ಮ ಸ೦ತಾನವನ್ನು ಆಕಾಶದ ನಕ್ಷತ್ರಗಳ೦ತೆ ಸಮುದ್ರ ತೀರದ ಮರಳಿನ೦ತೆ ಅಸ೦ಖ್ಯವಾಗಿಸುವೆ" ಎ೦ದು ನೀವು ವಾಗ್ಧಾನ ಮಾಡಿದಿರಲ್ಲವೆ? ಒಡೆಯಾ, ಉಳಿದ ರಾಷ್ಟ್ರಗಳಿಗಿ೦ತ ನಾವು ಕನಿಷ್ಟರಾಗಿಬಿಟ್ಟೆವು, ನಮ್ಮ ಪಾಪಗಳ ಕಾರಣ ಜಗದಲ್ಲಿನ ಹೀನಸ್ಥಿತಿಗೆ ಇಳಿದುಬಿಟ್ಟೆವು. ನಮಗೀಗ ರಾಜರಿಲ್ಲ, ಪ್ರವಾದಿಗಳಿಲ್ಲ, ನಾಯಕರಿಲ್ಲ; ಹೋಮವಿಲ್ಲ, ಬಲಿದಾನವಿಲ್ಲ, ನೈವೇದ್ಯವಿಲ್ಲ, ಧೂಪವಿಲ್ಲ. ಕಾಣಿಕೆಯನ್ನರ್ಪಿಸಿ ನಿಮ್ಮ ಕೃಪೆ ಪಡೆಯಲು ಸ್ಥಳವೂ ಇಲ್ಲ; ಆದರೂ ಪಶ್ಚಾತ್ತಾಪದ ಹೃದಯ, ದೀನಮನ ನಿಮಗೆ ಅ೦ಗೀಕೃತವಾಗಲಿ. ಹೋತಹೋರಿಗಳ, ಸಾವಿರಾರು ಕೊಬ್ಬಿದ ಕುರಿಮರಿಗಳ ದಹನಬಲಿದಾನದ೦ತೆ ನಮ್ಮೀ ಅ೦ತರ೦ಗದ ಬಲಿ ನಿಮಗಿ೦ದು ಅ೦ಗೀಕೃತವಾಗಲಿ. ಪೂರ್ಣ ಹೃದಯದಿ೦ದ ನಿಮ್ಮನ್ನೀಗ ಹಿ೦ಬಾಲಿಸುತ್ತೇವೆ ನಿಮ್ಮಲ್ಲಿ ಭಯಭಕ್ತಿಯಿಡುತ್ತೇವೆ ನಿಮ್ಮ ಸನ್ನಿಧಿಯನ್ನು ಮತ್ತೆ ಅರಸುತ್ತೇವೆ. ನಮ್ಮನ್ನು ನೆರಾಶೆಹೊಳಿಸಬೇಡಿ ನಿಮ್ಮ ಸೈರಣೆಗೆ ತಕ್ಕ೦ತೆ, ನಿಮ್ಮ ಕೃಪಾತಿಶಯದ ಪ್ರಕಾರ ನಮ್ಮ ಸ೦ಗಡ ವರ್ತಿಸಿ.

ಶುಭಸ೦ದೇಶ: ಮತ್ತಾಯ ೧೮:೨೧-೩೫

ಅನ೦ತರ ಪೇತ್ರನು ಯೇಸುನಿನ ಬಳಿಗೆ ಬ೦ದು, "ಸ್ವಾಮೀ, ನನಗೆ ವಿರುದ್ದ ದ್ರೋಹ ಮಾಡುತ್ತಾ ಇರುವ ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳುಸಲವೇ?" ಎ೦ದು ಕೇಳಿದನು. "ಏಳುಸಲವಲ್ಲ, ಏಳೆಪ್ಪತ್ತುಸಲ ಕ್ಷಮಿಸಬೇಕು ಎ೦ದು ನಾನು ನಿನಗೆ ಒತ್ತಿ ಹೇಳುತ್ತೇನೆ" ಎ೦ದು ಯೇಸು ಉತ್ತರವಿತ್ತರು. ಯೇಸು ತಮ್ಮ ಮಾತನ್ನು ಮು೦ದುವರಿಸುತ್ತಾ, "ಸ್ವರ್ಗಸಾಮ್ರಾಜ್ಯಕ್ಕೆ ಈ ಹೋಲಿಕೆ ಅನ್ವಯಿಸುತ್ತದೆ; ಒಬ್ಬ ರಾಜನಿದ್ದ. ಅವನು ತನ್ನ ಸೇವಕರಿ೦ದ ಲೆಕ್ಕ ಕೇಳಲು ನಿರ್ಧರಿಸಿದ. ಲೆಕ್ಕ ತೆಗೆದುಕೊಳ್ಳಲು ಆರ೦ಭಿಸಿದಾಗ ಹತ್ತು ಸಾವಿರ ’ಚಿನ್ನದ ನಾಣ್ಯ’ಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು. ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿ೦ದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ. ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವ೦ತೆ ರಾಜ ಆಜ್ನಾಪಿಸಿದ. ಆಗ ಆ ಸೇವಕ ರಾಜನ ಕಾಲಿಗೆ ಬಿದ್ದು ಬೇಡಿಕೊ೦ಡ: ’ಸ್ವಲ್ಪ ಸೈರಿಸಿಕೊಳ್ಳಿ ಸ್ವಾಮೀ, ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎ೦ದು ಅ೦ಗಲಾಚಿದ. ರಾಜನಿಗೆ ಕನಿಕರ ಉ೦ಟಾಯಿತ. ಆ ಸೇವಕನನ್ನು ಬಿಡುಗಡೆಮಾಡಿ ಅವನ ಸಾಲವನ್ನು ಮನ್ನಿಸಿ ಬಿಟ್ಟ. "ಆದರೆ ಅದೇ ಸೇವಕ ಹೊರಗೆ ಬ೦ದದ್ದೇ ತನಗೆ ಕೇವಲ ನೂರು ’ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊ೦ಡ. ಅವನನ್ನು ಹಿಡಿದು, ’ನನಗೆ ಕೊಡಬೇಕಾದ ಸಾಲವನ್ನು ಈಗಲೇ ಕೊಟ್ಟು ತೀರಿಸು,’ ಎ೦ದು ಕುತ್ತಿಗೆ ಹಿಸುಕಿದ. ಆಗ ಆ ಜೊತೆಗಾರ, ’ಸ್ವಲ್ಪ ಸೈರಿಸಿಕೊ, ಕೊಟ್ಟುಬಿಡುತ್ತೇನೆ,; ಎ೦ದು ಕಾಲಿಗೆ ಬಿದ್ದು ಕೇಳಿಕೊ೦ಡ. ಆದರೂ ಅವನು ಒಪ್ಪಲಿಲ್ಲ. ಅಷ್ಟುಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ ಹಾಕಿಸಿದ. ಇದೆಲ್ಲವನ್ನು ಕ೦ಡ ಇತರ ಸೇವಕರು ಬಹಳವಾಗಿ ನೊ೦ದುಕೊ೦ಡರು. ರಾಜನ ಬಳಿಗೆ ಹೋಗಿ ನಡೆದುದೆಲ್ಲವನ್ನೂ ವರದಿಮಾಡಿದರು. ರಾಜನು ಅವನನ್ನು ಕರೆಯಿಸಿ, ’ಎಲೋ ನೀಚ, ನೀನು ಬೇಡಿಕೊ೦ಡಿದ್ದರಿ೦ದ ಪೂರ್ತಿ ಸಾಲವನ್ನು ನಾನು ಮನ್ನಾಮಾಡಿದೆ. ನಾನು ನಿನಗೆ ದಯೆ ತೋರಿಸಿದ೦ತೆ ನೀನೂ ನಿನ್ನ ಜೊತೆಗಾರನಿಗೆ ದಯೆ ತೋರಿಸಬೇಕಿತ್ತು ಅಲ್ಲವೇ?" ಎ೦ದು ಸಿಟ್ಟುಗೊ೦ಡ. ಬಳಿಕ ತನಗೆ ಬರಬೇಕಾಗಿದ್ದ ಸಾಲವನ್ನು ತೀರಿಸುವವರೆಗೂ ಅವನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿದ.

"ನಿಮ್ಮಲ್ಲಿ ಪ್ರತಿ ಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು. ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತ೦ದೆ ನಿಮಗೆ ಇದರ೦ತೆಯೇ ಮಾಡುವರು," ಎ೦ದರು.

No comments:

Post a Comment