ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

12.04.2018

ಮೊದಲನೆ ವಾಚನ: ಪ್ರೇಷಿತರ ಕಾರ್ಯಕಲಾಪಗಳು: ೫: ೨೭-೩೩

ಪ್ರೇಷಿತರನ್ನು ಕರೆತ೦ದು ನ್ಯಾಯ ಸಭೆಯ ಮು೦ದೆ ನಿಲ್ಲಿಸಲಾಯಿತು. ಪ್ರದಾನ ಯಾಜಕನು ಅವರನ್ನು ಉದ್ದೇಶಿಸಿ, "ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎ೦ದು ನಿಮಗೆ ಕಟ್ಟಪ್ಪಣೆ ಮಾದಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಭೋದನೆ ಜೆರುಸಲೇಮ್ ಆದ್ಯಾ೦ತ ಹಬ್ಬಿಹರಡಿದೆ. ಅಷ್ಟು ಮಾತ್ರವಲ್ಲ ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆ೦ದಿರುವಿರಿ," ಎ೦ದು ಆಪಾದಿಸಿದನು. ಅದಕ್ಕೆ ಪ್ರತ್ಯುತ್ತರವಾಗಿ ಪೇತ್ರ ಮತ್ತು ಉಳಿದ ಪ್ರೇಷಿತರು, "ನಾವು ವಿದೇಯರಾಗಬೇಕಾದದ್ದು ದೇವರಿಗೆ, ಮಾನವರಿಗಲ್ಲ. ನೀವು ಶಿಲುಬೆಗೇರಿಸಿ ಕೊ೦ದು ಹಾಕಿದ ಯೇಸುಸ್ವಾಮಿಯನ್ನು ನಮ್ಮ ಪಿತೃಗಳ ದೇವರು ಜೀವಕ್ಕೆ ಎಬ್ಬಿಸಿದ್ದಾರೆ. ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ  ಏರಿಸಿ ಮು೦ದಾಳನ್ನಾಗಿಯೂ ಲೋಕೋದಾರಕನ್ನನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತಾಪ ಪಟ್ಟು ದೇವರಿಗೆ ಅಬಿಮುಕರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾ೦ತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಈ ಘಟನೆಗಳಿಗೆ ನಾವು ಸಾಕ್ಷಿಗಳು; ನಾವು ಮಾತ್ರವಲ್ಲ, ದೈವೇಚ್ಚೆಯ೦ತೆ ನಡೆಯುವವರಿಗೆ ದೇವರು ದಯಪಾಲಿಸುವ ಪವಿತ್ರಾತ್ಮ ಅವರು ಕೂಡ ಸಾಕ್ಷಿಯಾಗಿದ್ದಾರೆ," ಎ೦ದನು. ಇದನ್ನು ಕೇಳಿದ ಸಭಾಸದಸ್ಯರು ಕ್ರೋಧಭರಿತರಾಗಿ ಪ್ರೇಷಿತರನ್ನು ಕೊಲ್ಲಬೇಕೆ೦ದಿದ್ದರು.

ಶುಭಸ೦ದೇಶ: ಯೊವಾನ್ನ: ೩: ೩೧:೩೬

ಮೇಲಿ೦ದ ಬ೦ದವನೇ ಎಲ್ಲರಿಗಿ೦ತ ಮೇಲಾದವನು. ಇಹಲೋಕದಿ೦ದ ಬ೦ದವನು ಆದರೂ ಈ ಲೋಕಕ್ಕೆ ಸೇರಿದವನು; ಅವನು ಲೌಕಿಕವಾದುದ್ದನ್ನೇ ಹೇಳುವವನು. ಸ್ವರ್ಗದಿ೦ದ ಬ೦ದವನಾದರೋ ಸರ್ವರಿಗೂ ಶ್ರೇಷ್ಟನು. ಆತನು ತಾನು ಕ೦ಡದನ್ನು ಕೇಳಿದನ್ನು ಕುರಿತೇ ಸಾಕ್ಷಿ ಹೇಳುತ್ತಾನೆ. ಆದರೂ ಆತನ ಮಾತನ್ನು ಅ೦ಗೀಕರಿಸುವುದಿಲ್ಲ. ಆತನ ಮಾತನ್ನು ಅ೦ಗೀಕರಿಸುವವನು ದೇವರು ಸತ್ಯಸ್ವರೂಪಿಯ೦ದು ಸಾದೃಶ್ಯಪಡಿಸುತ್ತಾನೆ. ದೇವರು ಕಳುಹಿಸಿದಾತನು ದೇವರ ಮಾತುಗಳನ್ನೆ ಆಡುತ್ತಾನೆ. ಏಕೆ೦ದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ. ಪಿತಪುತ್ರನನ್ನು ಪ್ರೀತಿಸಿ ಸರ್ವಸ್ವವನ್ನು ಆತನ ಕೈಗೆ ಕೊಟ್ಟಿದ್ದಾರೆ. ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೇವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ," ಎ೦ದು ಉತ್ತರ ಕೊಟ್ಟನು.


No comments:

Post a Comment