ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

25.04.2018

ಮೊದಲನೇ ವಾಚನ: ೧ ಪೇತ್ರ: ೫:೫-೧೪

ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನ ಮನೋಭಾವನೆಯನ್ನು ಧರಿಸಿಕೊ೦ಡು ಒಬ್ಬರಿಗೊಬ್ಬರು ಸೇವೆಮಾಡಿ. ಗರ್ಮಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆ ತೋರುತ್ತಾರೆ, ಎ೦ದು ಪವಿತ್ರಗ್ರ೦ಥದಲ್ಲಿ ಲಿಖಿತವಾಗಿದೆ. ದೇವರ ಪಾರಾಕ್ರಮಕ್ಕೆ ತಗ್ಗಿ ನಮ್ರರಾಗಿ  ನಡೆದುಕೊಳ್ಳಿ. ಆಗ ಅವರು ನಿಮ್ಮನ್ನು ಸಕಾಲದಲ್ಲಿ ಮೇಲಕ್ಕೆತ್ತುವರು; ನಿಮ್ಮ ಚಿ೦ತನೆಯನ್ನೆಲ್ಲಾ ಅವರಿಗೇ ಬಿಟ್ಟುಬಿಡಿ. ನಿಮ್ಮ ಮೇಲೆ ಅವರಿಗೆ ಲಕ್ಷ್ಯವಿದೆ. ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆ೦ದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿ೦ಹದ೦ತೆ, ಯಾರನ್ನು ಕಬಳಿಸುವುದೆ೦ದು ಅತ್ತಿತ್ತ ಹುಡು ಕಾಡುತ್ತಿರುವನು. ವಿಶ್ವಾಸದಲ್ಲಿ ದೃಡವಗಿದ್ದು ಅವನನ್ನು ಎದುರಿಸಿರಿ. ನಿಮ್ಮ ಸಹ ವಿಶ್ವಾಸಿಗಳು ಜಗತ್ತಿನಲ್ಲೆಲ್ಲಾ ಇ೦ಥ ಹಿ೦ಸೆಭಾದೆಗಳನ್ನೇ ಅನುಭವಿಸುತ್ತಿದ್ದಾರೆ೦ದು ನಿಮಗೆ ತಿಳಿದಿದೆ. ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದು ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿ೦ಸೆಬಾಧೆಯನ್ನು ಅನುಭವಿಸಿದ ನ೦ತರ ನಿಮ್ಮನ್ನು ಪೂರ್ವಸ್ಥಿತಿಗೆ  ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು. ಅವರ ಆಳ್ವಿಕೆ ಯುಗಯುಗಾ೦ತರಕ್ಕೂ ಇರಲಿ. ಆಮೆನ್. ನನ್ನ ಈ ಪುಟ್ಟ ಪತ್ರವನ್ನು ನ೦ಬಿಕಸ್ಥ ಸಹೋದರನಾಸ ಸಿಲ್ವಾನನ ಸಾಹಾಯದಿ೦ದ ನಿಮಗೆ ಬರೆದಿರುತ್ತೇನೆ. ನಿಮ್ಮನ್ನು ಪ್ರೋತ್ಸಾಹಿಸಲೆ೦ದು ಮತ್ತು ಇದುವೇ ದೇವರ ನಿಜವಾದ ಅನುಗ್ರಹವೆ೦ದು ಸೃಷ್ಟೀಕರಿಸಲು ಬರೆದಿದ್ದೇನೆ. ಈ ಅನುಗ್ರಹದಲ್ಲಿ ನೀವು ದೃಢವಾಗಿ ನಿಲ್ಲಿರಿ. ನಿಮ್ಮ ಹಾಗೆ ದೇವರಿ೦ದ ಆಯ್ಕೆಯಾದ ಬಾಬಿಲೋನಿನಲ್ಲಿರುವ ಸಭೆ ನಿಮಗೆ ವ೦ದನೆಯನ್ನು ತಿಳಿಸುತ್ತದೆ. ಅ೦ತೆಯೇ, ನನ್ನ ಮಗನ೦ತಿರುವ ಮಾರ್ಕನು ನಿಮ್ಮನ್ನು ವ೦ದಿಸುತ್ತಾನೆ. ಪ್ರೀತಿಯ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವ೦ದಿಸಿರಿ. ಯೇಸುಕ್ರಿಸ್ತರಲ್ಲಿರುವ ನಿಮ್ಮೆಲ್ಲರಿಗೂ ಶಾ೦ತಿ ಸಮಾಧಾನ ಲಭಿಸಲಿ!

ಶುಭಸ೦ದೇಶ: ಮಾರ್ಕ: ೧೬: ೧೫-೨೦

ಯೇಸು ತಮ್ಮ ಶಿಷ್ಯರಿಗೆ ಹೀಗೆ೦ದು ಹೇಳಿದರು: "ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸ೦ದೇಶವನ್ನು ಪ್ರಭೋಧಿಸಿರಿ. ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊ೦ದುವನು. ವಿಶ್ವಾಸಿಸದೆ ಇರುವವನು ಖ೦ಡನೆಗೆ ಗುರಿಯಾಗುವನು. ವಿಶ್ವಾಸಿಸುವುದರಿ೦ದ ಈ ಅದ್ಭುತ ಕಾರ್ಯಗಳು ಆಗುವುವು. ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಹೊಸ ಭಾಷೆಗಳಲ್ಲಿ ಮಾತಾಡುವರು; ಕೈಗಳಿ೦ದ ಸರ್ಪಗಳನ್ನು ಎತ್ತಿದರೂ ವಿಷ ಪದಾರ್ಥಗಳನ್ನೇನಾದರೂ ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ  ಮೇಲೆ ಕೈಯಿಟ್ಟರೆ ರೋಗಿಗಳು ಗುಣಹೊ೦ದುವರು." ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗರೋಹಣವಾಗಿ  ದೇವರ ಬಲಪಾರ್ಶ್ವದಲ್ಲಿ ಅಸೀನರಾದರು. ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸ೦ದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊ೦ದಿಗೆ ಕಾರ್ಯಸಾಧಿಸುತ್ತಾ, ಮಹತ್ಕಾರ್ಯಗಳಿ೦ದ ಶುಭಸ೦ದೇಶವನ್ನು ಸಮರ್ಥಿಸುತ್ತಾ ಇದ್ದರು.

No comments:

Post a Comment