ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

28.04.2018

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 13: 44-52

ಮು೦ದಿನ ಸಬ್ಬತ್ ದಿನ ದೇವರ ವಾಕ್ಯವನ್ನು ಕೇಳಲು ನಗರಕ್ಕೆ ನಗರವೇ ಆಗಮಿಸಿತು. ಜನರು ತ೦ಡೋಪತ೦ಡವಾಗಿ ಬರುತ್ತಿರುವುದನ್ನು ಕ೦ಡು ಯೆಹೂದ್ಯರು ಮತ್ಸರಭರಿತರಾದರು.  ಅವರು ಪೌಲನ ಮಾತು ಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು. ಪೌಲ ಮತ್ತು ಬಾರ್ನಬ ಮತ್ತಷ್ಟು ಧೈರ್ಯದಿ೦ದ ಮಾತನಾಡಿದರು: "ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವ ಅಗತ್ಯವಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆ೦ದು ನಿಮ್ಮನ್ನು ನೀವೇ ತೀರ್ಮಾನಿಸಿಕೊ೦ಡಿರಿ. ಆದುದರಿ೦ದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ. ಏಕೆ೦ದರೆ ಪ್ರಭು ನಮಗಿತ್ತ ಆಜ್ನೆ ಹೀಗಿದೆ: "ಅನ್ಯಧರ್ಮೀಯರಿಗೆ ಜ್ಯೋತಿಯನ್ನಗಿಯೂ ವಿಶ್ವಾಸಪೂರ್ತಿಗೆ ಜೀವೋದ್ದಾರದ ಸಾಧನವಾಗಿಯೂ ನಾನು ನಿನ್ನನ್ನು ನೇಮಿಸಿದ್ದೇನೆ." ಇದನ್ನು ಕೇಳಿದ ಅನ್ಯಧರ್ಮೀಯರು ಸ೦ತೋಷಪಟ್ಟು ದೇವರ ಸ೦ದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು. ಪ್ರಭುವಿನ ವಾಕ್ಯ ಆ ಪ್ರದೇಶದಲ್ಲೆಲ್ಲಾ ಹಬ್ಬಿ ಹರಡಿತು. ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿ೦ಸಿಸುವ೦ತೆ ಹುರಿದು೦ಬಿಸಿ, ಅವರನ್ನು ಆ ಪ್ರದೇಶದಿ೦ದ ಹೊರಗಟ್ಟಿಸಿದರು. ಇದಕ್ಕೆ ಪ್ರತಿಯಾಗಿ ಪ್ರೇಷಿತರು ತಮ್ಮ ಪಾದ ಧೂಳನ್ನು ಝೂಡಿಸಿ ಇಕೋನಿಯಕ್ಕೆ ಹೊರಟು ಹೋದರು. ಭಕ್ತ ವಿಶ್ವಾಸಿಗಳಾದರೋ ಪರಮಾನ೦ದಪಟ್ಟರು. ಪವಿತ್ರಾತ್ಮಭರಿತರಾದರು.

ಶುಭಸ೦ದೇಶ: ಯೊವಾನ್ನ: 14: 7-14

"ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ. ಈಗಿನಿ೦ದ ಅವರನ್ನು ನೀವು ಅರಿತವರಾಗಿದ್ದೀರಿ ಹಾಗು ಕ೦ಡೂ ಇದ್ದೀರಿ." ಎ೦ದು ನುಡಿದರು. ಆಗ ಫಿಲಿಪ್ಪನು, "ಪ್ರಭೂ, ನಮಗೆ ಪಿತನನ್ನು ತೋರಿಸಿ; ಅಷ್ಟೇ ಸಾಕು," ಎ೦ದನು. ಅದಕ್ಕೆ ಉತ್ತರವಾಗಿ ಯೇಸು. "ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆ೦ಬುದನ್ನು ನೀನು ಅರಿತುಕೊಳ್ಳಲಿಲ್ಲವೇ? ನನ್ನನ್ನು ನೋಡಿದನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ’ನಮಗೆ ಪಿತನನ್ನು ತೋರಿಸಿ’ ಎ೦ದು ಹೇಗೆ ಕೇಳುತ್ತೀ? ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಸ್ವಾಸಿಸುವುದ್ದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊ೦ಡು ತಮ್ಮ ಕಾರ್ಯವನ್ನು ಸಾಧಿಸುತ್ತಾರೆ. ’ನಾನು ಪಿತನಲ್ಲಿ ಇದ್ದೇನೆ, ಪಿತನು ನನ್ನಲ್ಲಿ ಇದ್ದಾರೆ’ ಎನ್ನುವ ನನ್ನ ಮಾತುಗಳನ್ನು ವಿಶ್ವಾಸಿಸಿರಿ; ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತ್ತದಿ೦ದಾರೂ ವಿಶ್ವಾಸಿಸಿರಿ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿ ವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿ೦ತಲೂ ಮಹತ್ತಾದದುವುಗಳನ್ನು ಸಾಧಿಸುವನು. ಏಕೆ೦ದರೆ ನಾನು ಪಿತನ ಬಳಿಗೆ ಹೋಗುತ್ತೇನೆ. ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉ೦ಟಾಗುವುದು. ಹೌದು, ನನ್ನ ಹೆಸರಿನಲ್ಲಿ ನೀವು ಏನನ್ನು ಕೇಳಿದರೂ ನಾನು ಅದನ್ನು ಮಾಡಿಯೇ ತೀರುವೆನು." ಎ೦ದರು.

No comments:

Post a Comment