ಮೊದಲನೇ ವಾಚನ: 1 ಕೊರಿಂಥಿಯರಿಗೆ 15:1-8
(ಪ್ರೇಷಿತರ ಕಾರ್ಯಕಲಾಪಗಳು 15:7-21)
ಪ್ರಿಯ ಸಹೋದರರೇ, ನಾನು ನಿಮಗೆ ಭೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ. ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಡವಾಗಿ ವಿಶ್ವಾಸಿಸಿದರೆ ನೀವು ಜೀವೋದ್ದಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು. ನಾನು ಪಡೆದುಕೊಂಡಿದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಗ ಮಾಡಿದರು. ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ದಾನ ಹೊಂದಿದರು. ಆನಂತರ ಕೇಫನಿಗೂ ಹನ್ನೆರಡು ಮಂದಿಗೂ ಕಾಣಿಸಿಕೊಂಡರು. ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೋದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತುಹೋಗಿದ್ದರು ಬಹು ಮಂದಿ ಇದಿಂಗೂ ಬದುಕಿದ್ದಾರೆ. ಅದಾದ ಮೇಲೆ ಯಕೋಬನಿಗೂ ಆನಂತರ ಪ್ರೇಷಿತರೆಲ್ಲರಿಗೂ ಕಾಣಿಸಿಕೊಂಡರು. ಕಟ್ಟಕಡೆಗೆ ದಿನ ತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು.
ಕೀರ್ತನೆ: 19:2-3,4-5
ಶ್ಲೋಕ: ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ
ಶುಭಸಂದೇಶ: ಯೊವಾನ್ನ 14:6-14
ಯೇಸು ತಮ್ಮ ಶಿಷ್ಯರಿಗೆ ಇಂತೆಂದರು: "ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು. ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ. ಈಗಿನಿಂದ ಅವರನ್ನು ನೀವು ಅರಿತವರಾಗಿದ್ದೀರಿ ಹಾಗು ಕಂಡೂ ಇದ್ದೀರಿ," ಎಂದು ನುಡಿದರು. ಆಗ ಫಿಲಿಪ್ಪನು, "ಪ್ರಭೂ, ನಮಗೆ ಪಿತನನ್ನು ತೋರಿಸಿ: ಅಷ್ಟೆ ಸಾಕು,"ಎಂದನು. ಅದಕ್ಕೆ ಉತ್ತರವಾಗಿ ಯೇಸು, "ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೇ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, "ನಮಗೆ ಪಿತನನ್ನು ತೋರಿಸಿ" ಎಂದು ಹೇಗೆ ಕೇಳುತ್ತೀ? ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ," ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ವಿಶ್ವಾಸಿಸಿರಿ; ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತದಿಂದಾದರು ವಿಶ್ವಾಸಿಸಿರಿ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿ ವಿಶ್ವಾಸವುಳ್ಳವನು ನಾನು ಸಾಧಿಸುದ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೆ ಏಕೆ, ಅವುಗಳಿಗಿಂತಲೂ ಮಹತ್ತಾದವುಗಳನ್ನು ಸಾಧಿಸುವನು. ಏಕಂದರೆನಾನು ಪಿತನ ಬಳಿಗೆ ಹೋಗುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು. ಹೌದು, ನನ್ನ ಹೆಸರಿನಲ್ಲಿ ನೀವು ಏನನ್ನು ಕೇಳದರೂ ನಾನು ಅದನ್ನು ಮಾಡಿಯೇ ತ್ತೀರುವೆನು," ಎಂದರು.
No comments:
Post a Comment