ಮೊದಲನೇ: ವಾಚನ ಪ್ರೇಷಿತರ ಕಾರ್ಯಕಲಾಪಗಳು 16:22-34
ಜನರ ಗಂಪು ಅವರೊಡನೆ ಸೇರಿ ದೊಂಬಿಮಾಡಿತು. ನ್ಯಾಯಾಧಿಪತಿಗಳು ಪೌಲ ಮತ್ತು ಸೀಲರ ವಸ್ತ್ರಗಳನ್ನು ಕಿತ್ತುಹಾಕಿಸಿ ಛಡಿ ಏಟುಗಳನ್ನು ಕೊಡುವಂತೆ ಆಜ್ಞೆ ಮಾಡಿದರು. ಅವರನ್ನು ಚೆನ್ನಾಗಿ ಥಳಿಸಿದ ಮೇಲೆ ಸೆರೆಮನೆಯಲ್ಲಿ ಹಾಕಿ ಎಚ್ಚರಿಕೆಯಿಂದ ನೋಡಿಕೊಳ್ಳಬೇಕೆಂದು ಸೆರೆಮನೆಯ ಅಧಿಕಾರಿಗೆ ಅಪ್ಪಣೆ ವಿಧಿಸಲಾಯಿತು. ಅಂತೆಯೇ, ಆ ಅಧಿಕಾರಿ ಅವರನ್ನು ಸೆರೆಮನೆಯ ಒಳಕೋಣೆಗೆ ತಳ್ಳಿ ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು. ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು. ಇದ್ದಕಿದ್ದಂತೆ ಭೀಕರ ಭೂಕಂಪ ಉಂಟಾಯಿತು. ಸೆರೆಮನೆಯ ಅಸ್ತಿವಾರವೇ ಕದಲಿತು. ಆಕ್ಷಣವೇ ಕದಗಳೆಲ್ಲಾ ತೆರೆದವು. ಕೈದಿಗಳೆಲ್ಲರ ಬಂಧನಗಳು ಕಳಚಿಬಿದ್ದವು. ಎಚ್ಚೆತ್ತ ಅಧಿಕಾರಿ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದಿರುವುದನ್ನು ಕಂಡನು. ಕೈದಿಗಳೆಲ್ಲರು ತಪ್ಪಿಸಿಕೊಂಡಿರುವರೆಂದು ಭಾವಿಸಿ ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯ ಮಾಡಿಕೊಳ್ಳುವುದರಲ್ಲಿದ್ದನು. ಆಗ ಪೌಲ ಗಟ್ಟಿಯಾಗಿ ಕೂಗುತ್ತಾ, "ನೀನೆನು ಹಾನಿಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ," ಎಂದನು. ಸೆರೆಮನೆಯ ಅಧಿಕಾರಿ ದೀಪವನ್ನು ತರಿಸಿ, ಒಳಗೆ ಧಾವಿಸಿ ಬಂದು, ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಪಾದಕ್ಕೆ ಬಿದ್ದನು. ಆನಂತರ ಅವರನ್ನು ಹೊರಗೆ ಕರೆತಂದು, "ಸ್ವಾಮಿಗಳೇ, ಜೀವೋದ್ದಾರ ಪಡೆಯಲು ನಾನು ಮಾಡಬೇಕಾದುದು ಏನು?" ಎಂದು ವಿಚಾರಿಸಿದನು. "ಪ್ರಭು ಯೇಸುವಿನಲ್ಲಿ ವಿಶ್ವಾಸವಿಡು, ನೀನು ನಿನ್ನ ಮನೆಯವರೆಲ್ಲರೂ ಜೀವೂದ್ದಾರವನ್ನು ಹೊಂದುವಿರಿ," ಎಂದು ಅವರು ಉತ್ತರಕೊಟ್ಟರು. ಆನಂತರ ಪ್ರಭುವಿನ ಸಂದೇಶವನ್ನು ಅವನಿಗೂ ಅವನ ಮನಯಲ್ಲಿದ್ದ ಎಲ್ಲಾರಿಗೂ ಭೋಧಿಸಿದರು. ರಾತ್ರಿಯ ವೇಳೆಯಲ್ಲೇ ಸೆರೆಮನೆಯ ಅಧಿಕಾರಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು. ಆನಂತರ ಅವನೂ ಅವನ ಕುಟುಂಬದವರೂ ದೀಕಕ್ಷಾಸ್ನಾನವನ್ನು ಪಡೆದರು. ಬಳಿಕ ಪೌಲ ಮತ್ತು ಸೀಲರನ್ನುತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು.
ಜನರ ಗಂಪು ಅವರೊಡನೆ ಸೇರಿ ದೊಂಬಿಮಾಡಿತು. ನ್ಯಾಯಾಧಿಪತಿಗಳು ಪೌಲ ಮತ್ತು ಸೀಲರ ವಸ್ತ್ರಗಳನ್ನು ಕಿತ್ತುಹಾಕಿಸಿ ಛಡಿ ಏಟುಗಳನ್ನು ಕೊಡುವಂತೆ ಆಜ್ಞೆ ಮಾಡಿದರು. ಅವರನ್ನು ಚೆನ್ನಾಗಿ ಥಳಿಸಿದ ಮೇಲೆ ಸೆರೆಮನೆಯಲ್ಲಿ ಹಾಕಿ ಎಚ್ಚರಿಕೆಯಿಂದ ನೋಡಿಕೊಳ್ಳಬೇಕೆಂದು ಸೆರೆಮನೆಯ ಅಧಿಕಾರಿಗೆ ಅಪ್ಪಣೆ ವಿಧಿಸಲಾಯಿತು. ಅಂತೆಯೇ, ಆ ಅಧಿಕಾರಿ ಅವರನ್ನು ಸೆರೆಮನೆಯ ಒಳಕೋಣೆಗೆ ತಳ್ಳಿ ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು. ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು. ಇದ್ದಕಿದ್ದಂತೆ ಭೀಕರ ಭೂಕಂಪ ಉಂಟಾಯಿತು. ಸೆರೆಮನೆಯ ಅಸ್ತಿವಾರವೇ ಕದಲಿತು. ಆಕ್ಷಣವೇ ಕದಗಳೆಲ್ಲಾ ತೆರೆದವು. ಕೈದಿಗಳೆಲ್ಲರ ಬಂಧನಗಳು ಕಳಚಿಬಿದ್ದವು. ಎಚ್ಚೆತ್ತ ಅಧಿಕಾರಿ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದಿರುವುದನ್ನು ಕಂಡನು. ಕೈದಿಗಳೆಲ್ಲರು ತಪ್ಪಿಸಿಕೊಂಡಿರುವರೆಂದು ಭಾವಿಸಿ ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯ ಮಾಡಿಕೊಳ್ಳುವುದರಲ್ಲಿದ್ದನು. ಆಗ ಪೌಲ ಗಟ್ಟಿಯಾಗಿ ಕೂಗುತ್ತಾ, "ನೀನೆನು ಹಾನಿಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ," ಎಂದನು. ಸೆರೆಮನೆಯ ಅಧಿಕಾರಿ ದೀಪವನ್ನು ತರಿಸಿ, ಒಳಗೆ ಧಾವಿಸಿ ಬಂದು, ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಪಾದಕ್ಕೆ ಬಿದ್ದನು. ಆನಂತರ ಅವರನ್ನು ಹೊರಗೆ ಕರೆತಂದು, "ಸ್ವಾಮಿಗಳೇ, ಜೀವೋದ್ದಾರ ಪಡೆಯಲು ನಾನು ಮಾಡಬೇಕಾದುದು ಏನು?" ಎಂದು ವಿಚಾರಿಸಿದನು. "ಪ್ರಭು ಯೇಸುವಿನಲ್ಲಿ ವಿಶ್ವಾಸವಿಡು, ನೀನು ನಿನ್ನ ಮನೆಯವರೆಲ್ಲರೂ ಜೀವೂದ್ದಾರವನ್ನು ಹೊಂದುವಿರಿ," ಎಂದು ಅವರು ಉತ್ತರಕೊಟ್ಟರು. ಆನಂತರ ಪ್ರಭುವಿನ ಸಂದೇಶವನ್ನು ಅವನಿಗೂ ಅವನ ಮನಯಲ್ಲಿದ್ದ ಎಲ್ಲಾರಿಗೂ ಭೋಧಿಸಿದರು. ರಾತ್ರಿಯ ವೇಳೆಯಲ್ಲೇ ಸೆರೆಮನೆಯ ಅಧಿಕಾರಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು. ಆನಂತರ ಅವನೂ ಅವನ ಕುಟುಂಬದವರೂ ದೀಕಕ್ಷಾಸ್ನಾನವನ್ನು ಪಡೆದರು. ಬಳಿಕ ಪೌಲ ಮತ್ತು ಸೀಲರನ್ನುತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು.
ಕೀರ್ತನೆ: 138:1-2, 3,7-8
ಶ್ಲೋಕ ಇಕ್ಕಟ್ಟಿನಲ್ಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭೂ ಪ್ರಾಣವನು
ಶುಭಸಂದೇಶ: ಯೊವಾನ್ನ 16:5-11
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ನಾನು ನಿಮ್ಮ ಸಂಗಡ ಇದ್ದುದ್ದರಿಂದ ಇದನ್ನೆಲ್ಲಾ ಮೊದಲೇ ನಿಮಗೆ ತಿಳಿಸಲಿಲ್ಲ. ಈಗಲಾದರೋ ನನ್ನನ್ನು ಕಳುಹಿಸಿದಾತನಲ್ಲಿಗೆ ನಾನು ತೆರಳುತ್ತೇನೆ. ನಾನು ಹೋಗುವುದು ಎಲ್ಲಿಗೆ ಎಂದು ನೀವು ಯಾರೂ ಕೇಳುತ್ತಿಲ್ಲವಾದರೂ ಇದನ್ನೆಲ್ಲಾ ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ. ವಾಸ್ತವವಾಗಿ ಹೇಳುವುದಾದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ. ಆ ಪೋಷಕ ಬಂದು ಪಾಪ, ನ್ಯಾಯನೀತಿ ಮತ್ತು ಅಂತಿಮ ತೀರ್ಪು ಇವುಗಳನ್ನು ಕುರಿತು ಲೋಕದ ಜನತೆ ತಾಳಿದ್ದ ತಪ್ಪುಭಾವನೆಗಳನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ನಾನು ಪಿತನ ಬಳಿಗೆ ಹೋಗುತ್ತೇನೆ ಮತ್ತು ನೀವು ನನ್ನನ್ನು ಕಾಣಲಾರಿರಿ. ಅಂತಿಮ ತೀರ್ಪಿನ ವಿಷಯವಾಗಿ ಅವರ ತಪ್ಪು ಭಾವನೆಗಳನ್ನು ಮನವರಿಕೆಮಾಡಿಕೊಡುವರು. ಏಕೆಂದರೆ, ಇಹದ ಲೋಕಾಧಿಪತಿಗೆ ಈಗಾಗಲೇ ನ್ಯಾಯತೀರ್ಪನ್ನು ಕೊಡಲಾಗಿದೆ.
No comments:
Post a Comment