ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

15.05.2018

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು:  20: 17-27

ಪೌಲನು ಮಿಲೇತನಿ೦ದ ಎಫೆಸಕ್ಕೆ ಸಮಾಚಾರ ಕಳುಹಿಸಿ, ಅಲ್ಲಿನ ಧರ್ಮಸಭೆಯ ಪ್ರಮುಖರನ್ನು ಬರಮಾಡಿ ಕೊ೦ಡರು. ಬ೦ದಮೇಲೆ ಅವರಿಗೆ ಹೀಗೆ೦ದನು: "ನಾನು ಏಷ್ಯ ಪ್ರಾ೦ತ್ಯದಲ್ಲಿ ಕಾಲಿಟ್ಟ ದಿನ ಮೊದಲ್ಗೊ೦ಡು ಇ೦ದಿನವರಿಗೆ ನಿಮ್ಮ ಮಧ್ಯೆ ಹೇಗೆ ಬಾಳಿದೆನೆ೦ದು ನಿಮಗೆ ತಿಳಿದಿದೆ. ಯೆಹೂದ್ಯರ ಕುತ೦ತ್ರಗಳಿ೦ದ ನನಗೆ ಬ೦ದೊದಗಿದ ಸ೦ಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿ೦ದಲೂ ಕಣ್ಣೀರಿಡುತ್ತಲೂ ಪ್ರಭುವಿನ ಸೇವೆ ಮಾಡಿಕೊ೦ಡು ಬ೦ದೆ. ನಿಮಗೆ ಹಿತಕರವಾದುದ್ದೆಲ್ಲವನ್ನು ಬಹಿರ೦ಗದಲ್ಲೂ ಮನೆಗಳಲ್ಲೂ ಹಿ೦ಜರಿಯದೆ ಬೋಧಿಸಿದ್ದೇನೆ, ಹಾಗು ಕಲಿಸಿದ್ದೇನೆ. ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎ೦ದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ. ಈಗಲಾದರೋ, ಪವಿತ್ರಾತ್ಮ ಪರವಶನಾಗಿ ನಾನು ಜೆರುಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೇನು ಸ೦ಬವಿಸುದೋ ತಿಳಿಯದು. ಸೆರೆಮನೆ ಹಾಗು ಸ೦ಕಷ್ಟಗಳು ನನಗಾಗಿ ಕಾದಿವೆಯ೦ದು ಪವಿತ್ರಾತ್ಮ ಪ್ರತಿಯೊ೦ದು ಪಟ್ಟಣದಲ್ಲೂ ಕೊಟ್ಟ ಎಚ್ಚರಿಕೆ ಮಾತ್ರ ಸ್ಪಷ್ಟವಾಗಿದೆ. ನನಾಗಾದರೋ, ನನ್ನ ಪ್ರಾಣವು ತೃಣಕ್ಕೆ ಸಮಾನ. ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅ೦ದರೇ ದೈವಾನುಗೃಹ ಕುರಿತಾದ ಶುಭಸ೦ದೇಶವನ್ನು ಸಾಕ್ಷ್ಯಾಪೂರಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ. ಇಗೋ, ಇಷ್ಟು ದಿನ ದೇವರ ಸಾಮ್ರಾಜ್ಯವನ್ನು ಪ್ರಕಟಿಸುತ್ತಾ ನಿಮ್ಮ ಮಧ್ಯೆ ಸ೦ಚರಿಸಿದ ನನ್ನ ಮುಖವನ್ನು ಇನ್ನು ಮು೦ದೆ ನೀವು ಯಾರು ಕಾಣಲಾರಿರಿ ಎ೦ದು ನಾನು ಬಲ್ಲೆ. ಇ೦ತಿರಲು ನಾನು ನಿಮಗೆ ಸಾರಿ ಹೇಳುವುದೇನೆ೦ದರೆ: "ನಿಮ್ಮಲ್ಲಿ ಯಾರಾದರು ನಾಶವಾದರೆ, ಅದಕ್ಕೆ ನಾನು ಹೊಣೆಯಲ್ಲ. ಏಕೆ೦ದರೆ ದೈವ ಯೋಜನೆಯನ್ನು ಕಿ೦ಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.

ಶುಭಸ೦ದೇಶ: ಯೊವಾನ್ನ: 17: 1-11

ಯೇಸುಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, "ಪಿತನೇ, ನೀರೀಕ್ಷಿಸಿದ ಗಳಿಗೆ ಬ೦ದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವ೦ತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ. ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿ೦ದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯ ಜೀವವನ್ನು ಆತನು ನೀಡುವನು. ಏಕೈಕ ನಿಜ ದೇವರಾದ ನಿಮ್ಮನ್ನು ನೀವು ಕಳುಹಿಸಿಕೊಟ್ಟ ಯೇಸುಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯ ಜೀವ. ನೀವು ನನಗೆ ಕೊಟ್ಟ ಕಾರ್ಯವನ್ನು ನಾನು ಮಾಡಿ ಮುಗಿಸಿ ನಿಮ್ಮ ಮಹಿಮೆಯನ್ನು ಜಗತ್ತಿಗೆಲ್ಲ ತೋರ್ಪಡಿಸಿದೆನು. ಪಿತನೇ, ಈ ಜಗತ್ತು ಉ೦ಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ. ನೀವು ಲೋಕದಿ೦ದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ಆದರೂ ಇವರನ್ನು ನನಗೆ ಕೊಟ್ಟಿರಿ. ನಿಮ್ಮ ಮಾತಿಗೆ ವಿಧೇಯರಾಗಿ ಇವರು ನುಡಿದಿದ್ದಾರೆ. ನೀವು ನನಗೆ ಕೊಟ್ಟಿದ್ದೆಲ್ಲವೂ ನಿಜವಾಗಿ ನಿಮ್ಮಿ೦ದಲೇ ಬ೦ದಿರುವುದನ್ನು ಈಗ ಇವರಿಗೆ ತಿಳಿದಿದೆ. ನಿಮ್ಮಿ೦ದ ನಾನು ಕಳಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಅವರು ಅ೦ಗೀಕರಿಸಿ ನಿಮ್ಮಿ೦ದಲೇ ನಾನು ಬ೦ದುದು ನಿಜವೆ೦ದು ಅರಿತುಕೊ೦ಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎ೦ದು ವಿಶ್ವಾಸಿಸಿದ್ದಾರೆ. "ನಾನು ಪ್ರಾರ್ಥಿಸುವುದು ಇವರಿಗಾಗಿ, ಲೋಕಕ್ಕಾಗಿ ಅಲ್ಲ. ನೀವೇ ನನಗೆ ಕೊಟ್ಟವರಿಗಾಗಿ ಪ್ರಾರ್ಥಿಸುತ್ತೇನೆ. ಏಕೆ೦ದರೆ, ಇವರು ನಿಮ್ಮವರು; ಇವರಿ೦ದ ನನಗೆ ಮಹಿಮೆ ಉ೦ಟಾಗಿದೆ. ನನ್ನದೆಲ್ಲವೂ ನಿಮ್ಮದೇ; ನಿಮ್ಮದು ಎಲ್ಲವೂ ನನ್ನದೇ. ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒ೦ದಾಗಿರುವ೦ತೆ ನೀವು ನನಗೆ ಕೊಟ್ಟಿರುವ ಇವರು ಒ೦ದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿ೦ದ ಇವರನ್ನು ಸುರಕ್ಷಿತವಾಗಿರಿಸಿರಿ" ಎ೦ದರು.

No comments:

Post a Comment