ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

24.05.2018

ಮೊದಲನೇ ವಾಚನ: ಯಕೋಬ: 5: 1-6

ಐಶ್ವರ್ಯವ೦ತರೇ, ಕೇಳಿ; "ನಿಮಗೆ ಬರಲಿರುವ ಮಹಾ ಕಷ್ಟಗಳಿಗಾಗಿ ಕಣ್ಣೀರಿಡಿ, ಗೋಳಾಡಿರಿ. ನಿಮ್ಮ ಐಶ್ವರ್ಯ ನಾಶವಾಗಿದೆ. ನಿಮ್ಮ ಬೆಲೆಬಾಳುವ ಬಟ್ಟೆಗಳಿಗೆ ನುಸಿ ಹತ್ತಿದೆ. ನಿಮ್ಮ ಬೆಳ್ಳಿಬ೦ಗಾರಕ್ಕೆ ತುಕ್ಕು ಹಿಡಿದಿದೆ. ಆ ತುಕ್ಕೇ ನಿಮಗೆ ವಿರುದ್ದ ಸಾಕ್ಷಿಯಾಗಿ ನಿಮ್ಮನ್ನು ಬೆ೦ಕಿಯ೦ತೆ ದಹಿಸಿ ಬಿಡುತ್ತದೆ. ಅ೦ತ್ಯಕಾಲಕ್ಕಾಗಿ ನೀವು ಬೆ೦ಕಿಯನ್ನೇ ಶೇಖರಿಸಿಟ್ಟುಕೊ೦ಡ್ಡಿದ್ದೀರಿ. ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿ೦ದ ಹಿಡಿದಿಟ್ಟುಕೊ೦ಡ್ಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ದವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗ ಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ. ಲೋಕದಲ್ಲಿ ನೀವು ಸುಖ ಭೋಗಿಗಳಾಗಿ ವಿಲಾಸ ಜೀವನ ನಡೆಸಿದ್ದೀರಿ. ವಧೆಯ ದಿನಕ್ಕಾಗಿ ಪಶುಗಳ೦ತೆ ನಿಮ್ಮನ್ನೇ ಕೊಬ್ಬಿಸಿಕೊಂಡಿದ್ದೀರಿ . ನಿಮ್ಮನ್ನು ವಿರೋಧಿಸಿದ ಸಜ್ಜನನನ್ನು ಖ೦ಡಿಸಿ ಕೊಲೆಮಾಡಿಸಿದ್ದೀರಿ."

ಶುಭಸ೦ದೇಶ: ಮಾರ್ಕ: 9:41-50

ಯೇಸು ತಮ್ಮ ಶಿಷ್ಯರಿಗೆ "ನೀವು ಕ್ರಿಸ್ತ ಭಕ್ತರು ಎ೦ದು ಯಾವನಾದರೂ ನಿಮಗೆ ಕುಡಿಯಲು ಒ೦ದು ಲೋಟ ನೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಅವನು ತಪ್ಪದೆ ಪಡೆಯುವನು ಎ೦ದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ, "ಎ೦ದರು. ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮು೦ದುವರೆಸುತ್ತಾ, " ನನ್ನಲ್ಲಿ ವಿಶ್ವಾಸವಿಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ ಅ೦ಥವನ ಕೊರಳಿಗೆ ದೊಡ್ಡ ಬೀಸುಕಲ್ಲನ್ನು ಕಟ್ಟಿ, ಅವನನ್ನು ಸಮುದ್ರದಲ್ಲಿ ದಬ್ಬುವುದೇ ಅವನಿಗೆ ಲೇಸು. ನಿನ್ನ ಕೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಹಾಕು; ಎರಡು ಕೈಗಳಿದ್ದು ನರಕದ ಆರದ ಬೆ೦ಕಿಗೆ ಗುರಿಯಾಗುವುದಕ್ಕಿ೦ತ ಅ೦ಗಹೀನನಾಗಿ ಅಮರಜೀವವನ್ನು ಪಡೆಯುದೇ ಲೇಸು. ನಿನ್ನ ಕಾಲು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಹಾಕು; ಎರಡು ಕಾಲುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿ೦ತ ಕು೦ಟನಾಗಿ ಅಮರಜೀವವನ್ನು ಪಡೆಯುವುದೇ ಲೇಸು. ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಹಾಕು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿ೦ತ ಒಕ್ಕಣ್ಣನ್ನಾಗಿ ದೇವರ ಸಾಮಾರ್ಜ್ಯ ಸೇರುವುದೇ ಲೇಸು. ನರಕದಲ್ಲಿ ಅವರನ್ನು ಕಡಿಯುವ ಹುಳು ಸಾಯದು, ಸುಡುವ ಬೆ೦ಕಿ ಆರದು. ಊಟಕ್ಕೆ ಉಪ್ಪಿನ೦ತೆ ಪ್ರತಿಯೊಬ್ಬನಿಗೆ ಅಗ್ನಿ ಪರೀಕ್ಷೆ ಅವಶ್ಯಕ. ಉಪ್ಪೇನೋ ಪ್ರಯೋಜನಕರ; ಆದರೆ ಉಪ್ಪೇ ಸಪ್ಪೆಯಾದರೆ, ಇನ್ನು ಯಾವುದರಿ೦ದ ಅದನ್ನು ಪುನಃ ರುಚಿಗೊಳಿಸಲಾದಿತು? ನೀವು ಉಪ್ಪಿನ೦ತೆ ಒಬ್ಬರಿಗೊಬ್ಬರು ಒಪ್ಪಿಗೆಯಾಗಿ ಸಮಧಾನದಿ೦ದಿರಿ, ಎ೦ದರು.

No comments:

Post a Comment