ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

05.07.2018

ಮೊದಲನೇ ವಾಚನ: ಆಮೋಸ 7:10-17 


ತರುವಾಯ ಬೇತೇಲಿನ ಯಾಜಕನಾದ ಆಮಚ್ಯನು ಇಸ್ರಯೇಲಿನ ಅರಸ ಯಾರೊಬ್ದಾಮನಿಗೆ ಹೀಗೆಂದು ಹೇಳಿಕಳುಹಿಸಿದನು: "ಆಮೋಸನು ನಿನಗೆ ವಿರುದ್ದವಾಗಿ ಇಸ್ರಯೇಲರಲ್ಲಿ ಒಳಸಂಚು ಹೂಡಿದ್ದಾನೆ. ಅವನ ಮಾತುಗಳನ್ನು ನಾಡು ಸಹಿಸಲಾರದು. ಏಕೆಂದರೆ, "ಯಾರೊಬ್ಬಾಮನು ಖಡ್ಗದಿಂದ ಹತನಾಗುವನು. ಇಸ್ರಯೇಲ್ ಸ್ವಂತ ನಾಡಿನಿಂದ ಪರದೇಶಕ್ಕೆ ಒಯ್ಯಲ್ಪಡುವುದು ಖಂಡಿತ ಎಂದು ಅವನು ನುಡಿದಿದ್ದಾನೆ." ಆ ಬಳಿಕ ಆಮಚ್ಯನು ಆಮೋಸನಿಗೆ, "ಕಣಿ ಹೇಳುವವನೇ, ತೊಲಗು, ಜುದೇಯ ನಾಡಿಗೆ ಓಡಿಹೋಗು; ಅಲ್ಲಿ ಪ್ರವಾದನೆಮಾಡಿ ಹೊಟ್ಟೆ ಹೊರೆದುಕೊ. ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜನ ಗರ್ಭಗುಡಿ, ರಾಜ್ಯದ ಪವಿತ್ರಾಲಯ," ಎಂದನು. ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: "ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಹತ್ತಿಹಣ್ಣನ್ನು ಕೀಳುವವನು. ಮಂದೆಕಾಯುವುದರಿಂದ ಸರ್ವೇಶ್ವರ ನನ್ನನ್ನು ಬಿಡಿಸಿದರು. ನೀನು ಹೋಗಿ ನನ್ನ ಜನರಾದ ಇಸ್ರಯೇಲರಿಗೆ ಪ್ರವಾದನೆಮಾಡು" ಎಂದು ಹೇಳಿಕಳುಹಿಸಿದರು. "ಆದ್ದರಿಂದ ಆ ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಗಮನಿಸು; "ಇಸ್ರಯೇಲಗೆ ವಿರುದ್ದ ಪ್ರವಾದನೆ ಮಾಡಬೇಡ; ಇಸಾಕನ ಮನೆತನದ ವಿರುದ್ಧ ಮಾತೆತ್ತಬೇಡ; ಎಂದ ನೀನು ಹೇಳುತ್ತಿಯಲ್ಲವೇ? ನೀನು ಹೀಗೆ ಹೇಳಿದ್ದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: "ನಿನ್ನ ಹೆಂಡತಿ ಈ ಪಟ್ಟಣದಲ್ಲಿ  ವೇಶ್ಯೆಯಾಗುವಳು. ನಿನ್ನ ಪುತ್ರ ಪುತ್ರಿಯರ ಕತ್ತಿಗೆ ತುತ್ತಾಗುವರು. ನಿನ್ನ ನಾಡನ್ನು ಶತ್ರುಗಳು ವಶಪಡಿಸಿಕೊಂಡು ಹಂಚಿಕೊಳ್ಳುವರು. ನೀನು ಸಹ ಅಪವಿತ್ರವಾದ ನಾಡಿನಲ್ಲಿ ಸಾಯುವೆ. ಇಸ್ರಯೇಲರು ಖಂಡಿತವಾಗಿ ಸ್ವಂತ ನಾಡಿನಿಂದ ಪರದೇಶಕ್ಕೆ ಸೆರೆಯಾಗಿ ಹೋಗುವವರು", ಎಂದು ಹೇಳಿದನು.


ಕೀರ್ತನೆ: 19:8, 9, 10, 11 

ಶ್ಲೋಕ: ಪ್ರಭುವಿನ ತೀರ್ಪು ಯಥಾರ್ಥ, ನ್ಯಾಯಯುತ. 

ಶುಭಸಂದೇಶ: ಮತ್ತಾಯ 9:1-8 

ಯೇಸುಸ್ವಾಮಿ ದೋಣಿ ಹತ್ತಿ ಮರಳಿ ಸರೋವರವನ್ನು ದಾಟಿ ಸ್ವಂತ ಊರಿಗೆ ಬಂದರು. ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನುಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೇಚ್ಚಿ, ಆ ಪಾರ್ಶ್ವವಾಯು ರೋಗಿಗೆ. "ಮಗು ದೈರ್ಯದಿಂದಿರು. ನಿನ್ನ ಪಾಪಗಳು ಕ್ಷಮಿಸಲಾಗಿದೆ," ಎಂದರು. ಆಗ ಅಲ್ಲಿದ್ದ ಧರ್ಮಶಾಸ್ತ್ರಗಳಲ್ಲಿ ಕೆಲವರು, "ಇವನು ದೇವದೂಷಣೆ ಮಾಡುತ್ತಿದ್ದಾನೆ," ಎಂದುಕೊಂಡರು. ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, "ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ? "ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ" ಎನ್ನುವುದು ಸುಲಭವೋ ಅಥವ "ಎದ್ದು ನಡೆ" ಎನ್ನುವುದು ಸುಲಭವೋ? ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು," ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, "ಎದ್ದೇಳು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು" ಎಂದರು. ಅದರಂತೆಯೇ, ಆರೋಗಿ ಎದ್ದು ಮನೆಗೆ ಹೊರಟುಹೋದನು. ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.

No comments:

Post a Comment