08.07.2018 - ಸಾಧಾರಣ ಕಾಲದ ಹದಿನಾಲ್ಕನೆಯ ಭಾನುವಾರ




ಮೊದಲನೇ ವಾಚನ: ಯೆಜೆಕಿಯೇಲ 2:2-5

ಅವರು ಈ ಮಾತನ್ನು ಹೇಳಿದ ಕೂಡಲೇ ದೇವರಾತ್ಮ ನನ್ನೊಳಗೆ ಸೇರಿ ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತಾಡಿದಾತನ ನುಡಿಯನ್ನು ಚೆನ್ನಾಗಿ ಕೇಳಿದೆ. ಆತ ನನಗೆ ಹೀಗೆ ಹೇಳಿದನು. "ನರಪುತ್ರನೇ, ನನಗೆ ವಿಮುಖರಾಗಿ ದ್ರೋಹಮಾಡಿದ ಜನಾಂಗದವರಾದ ಇಸ್ರಯೇಲರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನ್ನನ್ನು ಪ್ರತಿಭಟಿಸುತ್ತಲೇ ಬಂದಿದ್ದಾರೆ. ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ ಹಠಗಾರರೂ ಆಗಿದ್ದಾರೆ; ನೀನು ಅವರಿಗೆ "ಸರ್ವೇಶ್ವರನಾದ ದೇವರೇ ಇಂತೆನ್ನುತ್ತಾರೆ,"ಎಂದು ನುಡಿ. ಅವರು ದ್ರೋಹಿ ವಂಶದವರು, ಒಂದು ವೇಳೆ ಕೇಳದೆ ಹೋಗಬಹುದು. ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿ ತಮ್ಮ ಮಧ್ಯೆ ಕಾಣಿಸಿಕೊಂಡಿದ್ದಾನೆಂದು ತಿಳಿದುಕೊಳ್ಳುವರು. 

ಕೀರ್ತನೆ: 123:1-2, 2, 3-4
ಶ್ಲೋಕ: ನನ್ನ ಕಣ್ಣುಗಳನು ನಿನ್ನ ಕಡೆಗೆ ಎತ್ತಿರುವೆ ಪ್ರಭೂ

ಎರಡನೇ ವಾಚನ: 2 ಕೊರಿಂಥಿಯರಿಗೆ 12:7-10

 ನನಗೆ ತಿಳಿಸಲಾದ ಗಹನ ಸತ್ಯಗಳಿಂದ ನಾನು ಉಬ್ಬಿಹೋಗದ ಹಾಗೆ ನನ್ನ ದೇಹದಲ್ಲಿ ಶೂಲದಂತೆ ನಾಟಿರುವ ಬೇನೆಯೊಂದನ್ನು ನನಗೆ ಕೊಡಲಾಯಿತು. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು. ಈ ಪೀಡೆ ನನ್ನನ್ನು ಬಿಟ್ಟು ತೊಲಗಲೆಂದು ನಾನು ಮೂರು ಸಾರಿ ಪ್ರಭುವಿನಲ್ಲಿ ಬೇಡಿಕೊಂಡೆ. ಅದಕ್ಕವರು, "ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ," ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ. ದುರ್ಲಬತೆಗಳಲ್ಲೂ ದುರವಸ್ಥೆಗಳಲ್ಲೂ ಮಾನನಷ್ಟದಲ್ಲೂ ಕಷ್ಟ ಹಿಂಸೆಗಳಲ್ಲೂ. ಆಪತ್ತುವಿಪತ್ತುಗಳಲ್ಲೂ ನಾನು ಕ್ರಿಸ್ತ ಯೇಸುವಿನ ನಿಮಿತ್ತ ಸಂತುಷ್ಪನಾಗಿದ್ದೇನೆ. ನಾನ ಬಲಿಶಾಲಿಯಾಗಿರುವುದು ಬಲಹೀನನಾಗಿರುವಾಗಲೇ.

ಶುಭಸಂದೇಶ: ಮಾರ್ಕ 6:1-6

ಯೇಸುಸ್ವಾಮಿ ಅಲ್ಲಿಂದ ಹೊರಟು ತಮ್ಮ ಸ್ವಂತ ಊರಿಗೆ ಹೋದರು. ಶಿಷ್ಯರು ಅವರನ್ನು ಹಿಂಬಾಲಿಸಿದರು. ಸಬ್ಬತ್ ದಿನ ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಉಪದೇಶ ಮಾಡತೊಡಗಿದರು. ಕಿಕ್ಕಿರಿದು ನೆರೆದಿದ್ದ ಜನರು ಯೇಸುವಿನ ಭೋಧನೆಯನ್ನು ಕೇಳಿ ಬೆರಗಾದರು. "ಇದೆಲ್ಲಾ ಇವನಿಗೆ ಎಲ್ಲಿಂದ ಬಂದಿತು? ಇವನು ಪಡೆದಿರುವ ಜ್ಞಾನವಾದರೂ ಎಂಥದ್ದು? ಇವನಿಂದ ಮಹತ್ಕಾರ್ಯಗಳು ಆಗುವುದಾದರೂ ಹೇಗೆ? ಇವನು ಆ ಬಡಗಿಯಲ್ಲವೇ? ಮರಿಯಳ ಮಗನಲ್ಲವೇ? ಯಾಕೋಬ, ಯೋಸೆ, ಯೂದ ಮತ್ತು ಸಿಮೋನ ಇವರ ಸಹೋದರರಲ್ಲವೇ ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೇ?" ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು. ಆಗ ಯೇಸು, "ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು. ಆದರೆ ಸ್ವಗ್ರಾಮದಲ್ಲಿ, ಸ್ವಗ್ರಹದಲ್ಲಿ ಗೌರವ ದೊರಕದು." ಎಂದರು. ಕೆಲವು ರೋಗಿಗಳ ಮೇಲೆ ಕೈಗಳನ್ನಿರಿಸಿ ಅವರನ್ನು ಗುಣಪಡಿಸಿದ್ದನ್ನು ಬಿಟ್ಟರೆ ಇನ್ನಾವ ಮಹತ್ತಾದ ಕಾರ್ಯಗಳನ್ನೂ ಅವರು ಅಲ್ಲಿ ಮಾಡಲಿಲ್ಲ. ಆ ಜನರ ಅವಿಶ್ವಾಸವನ್ನು ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು.

ಸಂತ ಹಿಸ್ಪೇರಿಯಸ್

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...