25.07.2018

ಸಂತ ಯಕೋಬ ಹಬ್ಬ

ಪೌಲನು ಕೊರಿಂಥಿಯರಿಗೆ ಬರೆದ ಎರಡನೆಯ ಪತ್ರದಿಂದ ವಾಚನ 4: 7-15

ಸಹೋದರರೇನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆಹೀಗೆಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆನಾವು ಇಕ್ಕಟ್ಟು ಬಿಕ್ಕಟ್ಟುಗಳಿಗೆ ಒಳಗಾಗಿದ್ದರೂ ನುಜ್ಜುಗುಜ್ಜಾಗಲಿಲ್ಲಸಂಶಯ ಸಂದೇಹಗಳಿಗೊಳಗಾದರೂ ನಿರಾಶೆಗೊಳ್ಳಲಿಲ್ಲಶತ್ರುಗಳು ಅನೇಕರಿದ್ದರೂ ಮಿತ್ರನೊಬ್ಬನು ಇಲ್ಲದಿರಲಿಲ್ಲಪ್ರಾಣ ಹಿಂಸೆಗಳಿಗೀಡಾಗಿದ್ದರೂ ಪ್ರಾಣ ನಷ್ಟವನ್ನು ಅನುಭವಿಸಲಿಲ್ಲಯೇಸುವಿನ ದಿವ್ಯ ಜೀವವು ನಮ್ಮ ದೇಹದಲ್ಲಿ ಗೋಚರವಾಗುವಂತೆ ಅವರ ಮರಣಯಾತನೆಯನ್ನು ನಿರಂತರವಾಗಿ ಅನುಭವಿಸುತ್ತಾ ಬಾಳುತ್ತಿದ್ದೇವೆಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಅವರ ಮರಣಯಾತನೆಯನ್ನು ನಿರಂತರವಾಗಿ ಅನುಭವಿಸುತ್ತಾ ಬಾಳುತ್ತಿದ್ದೇವೆಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಬದುಕಿರುವಾಗಲೇ ನಾವು ಯೇಸುವಿಗೋಸ್ಕರ ಸತತ ಸಾವಿಗೆ ಈಡಾಗಿದ್ದೇವೆಹೀಗೆ ನಮ್ಮಲ್ಲಿ ಸಾವು ಕಾರ್ಯಗತವಾಗುತ್ತಿದ್ದರೆ ನಿಮ್ಮಲ್ಲಿ ಜೀವ ಕಾರ್ಯಗತವಾಗುತ್ತಿದೆನಾನು ವಿಶ್ವಾಸವಿಟ್ಟೆನುಆದ್ದರಿಂದ ಮಾತನಾಡಿದೆನು,’’ ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆಇದೇ ಮನೋಭಾವನೆಯಿಂದ ಕೂಡಿರುವ ನಾವು ಮಾತನಾಡಲೇ ಬೇಕುಏಕೆಂದರೆ ನಮಗೆ ವಿಶ್ವಾಸವಿದೆಪ್ರಭು ಯೇಸುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನು ಯೇಸುಕ್ರಿಸ್ತರೊಡನೆ ಪುನರುತ್ಥಾನಗೊಳಿಸಿ ತಮ್ಮ ಸಾನಿಧ್ಯಕ್ಕೆ ಬರಮಾಡಿಕೊಳ್ಳುವರು ಎಂಬುದನ್ನು ನಾವು ಬಲ್ಲೆವುಅಂತೆಯೇ ನಿಮ್ಮನ್ನೂ ಬರಮಾಡಿಕೊಳ್ಳುವರುಇದೆಲ್ಲವೂ ನಿಮ್ಮ ಒಳಿತಿಗಾಗಿಯೇಹೀಗೆ ಅನೇಕರಲ್ಲಿ ದೇವರ ವರಪ್ರಸಾದವು ಉಕ್ಕಿ ಹರಿಯುವುದುಅವರಲ್ಲಿ ಕೃತಜ್ಞತಾ ಭಾವನೆಯನ್ನು ಹೆಚ್ಚಿಸುವುದುಇದರಿಂದಾಗಿ ದೇವರ ಮಹಿಮೆ ಬೆಳಗುವುದು.

ಕೀರ್ತನೆ 126 :1-6
ಶ್ಲೋಕ ಅಳುತಳುತಾ ಬಿತ್ತುವವರು ನಲಿನಲಿಯುತಾ ಕೊಯ್ಯುವರು|

ಸಂತ ಮತ್ತಾಯನು ಬರೆದ ಶುಭಸಂದೇಶದಿಂದ ವಾಚನ  20:20-28

ಜೆಬೆದಾಯನ ಮಕ್ಕಳ ತಾಯಿ ತನ್ನ ಪುತ್ರರ ಸಮೇತ ಯೇಸುಸ್ವಾಮಿಯ ಬಳಿಗೆ ಬಂದಳುತಮ್ಮಿಂದ ನನಗೊಂದು ಉಪಕಾರ ಆಗಬೇಕುಎಂದು ಸ್ವಾಮಿಯ ಪಾದಕ್ಕೆರಗಿದಳುನಿನ್ನ ಕೋರಿಕೆ ಏನು?" ಎಂದರು ಯೇಸುಅದಕ್ಕೆ ಅವಳುತಮ್ಮ ಸಾಮ್ರಾಜ್ಯದಲ್ಲಿನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು," ಎಂದು ಕೋರಿದಳುಅದಕ್ಕೆ ಪ್ರತ್ಯತ್ತರವಾಗಿ ಯೇಸುನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದುನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೇ?" ಎಂದು ಪ್ರಶ್ನಿಸಿದರುಹೌದು ಆಗುತ್ತದೆಎಂದು ಅವರು ಮರು ನುಡಿದರುಆಗ ಯೇಸುನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು,’’ ಎಂದು ನುಡಿದರುಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾದ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರುಯೇಸುವಾದರೋಶಿಷ್ಯರೆಲ್ಲರನ್ನು ತಮ್ಮ ಬಳಿಗೆ ಕರೆದುಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿಂದ ದೊರೆತನ ಮಾಡುತ್ತಾರೆಜನನಾಯಕರು ಎನ್ನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನ ಮಾಡುತ್ತಾರೆಇದು ನಿಮಗೆ ಗೊತ್ತುನೀವು ಹಾಗಿರಬಾರದು

ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮಗೆ ಸೇವಕನಾಗಿರಲಿಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿಹಾಗೆಯೇ ನರಪುತ್ರನು ಸೇವೆ ಮಾಡಿಸಿಕೊಳ್ಳುವುದಕ್ಕೆ ಅಲ್ಲಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,’’ ಎಂದು ಹೇಳಿದರು






No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...