ಸಾಧಾರಣ ಕಾಲದ ಇಪ್ಪತ್ತಮೂರನೆಯ ವಾರ - ಬುಧವಾರ
ಮೊದಲನೇ ವಾಚನ: 1 ಕೊರಿಂಥಿಯರಿಗೆ 7:25-31
ಅವಿವಾಹಿತರ ಬಗ್ಗೆ ಪ್ರಭುವಿನಿಂದ ಬಂದ ಕಟ್ಟಳೆ ಯಾವುದೂ ನನ್ನಲ್ಲಿಲ್ಲ. ಪ್ರಭುವಿನ ಕೃಪೆಯಿಂದ ನಂಬಿಕೆಗೆ ಅಹ೯ನಾದ ವ್ಯಕ್ತಿಯಂತೆ ನನ್ನ ಅಭಿಪ್ರಾಯಗಳನ್ನು ನಿಮ್ಮ ಮುಂದೆ ಇಡುತ್ತೇನೆ. ಇಂದಿನ ಸಂದಿಗ್ದ ಪರಿಸ್ಥಿತಿಯಲ್ಲಿ ಒಬ್ಬನು ತಾನು ಇದ್ದ ಸ್ಥಿತಿಯಲ್ಲೇ ಇರುವುದು ಉತ್ತಮವೆಂದು ಭಾವಿಸುತ್ತೇನೆ. ನಿನಗೆ ವಿವಾಹವಾಗಿದೆಯೋ ವಿವಾಹ ವಿಚ್ಛೇದನಕ್ಕೆ ಯತ್ನಿಸಬೇಡ. ನೀನು ಅವಿವಾಹಿತನೋ? ವಿವಾಹವಾಗಲು ಅವಸರಪಡಬೇಡ. ಹಾಗೇನಾದರೂ ನೀನು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಅಂತೆಯೇ, ಅವಿವಾಹಿತ ಸ್ತ್ರಿಯೊಬ್ಬಳು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಆದರೆ ದಂಪತಿಗಳಿಗೆ ತಾಪತ್ರಯಗಳು ಅನೇಕ. ಇವುಗಳು ನಿಮ್ಮನ್ನು ಬಾಧಿಸದಿರಲೆಂಬುದೇ ನನ್ನ ಹಾರೈಕೆ. ಪ್ರಿಯ ಸಹೋದರರೇ, ನನ್ನ ಅಭಿಪ್ರಾಯ ಇದು: ಉಳಿದಿರುವ ಕಾಲವು ಕೊಂಚಮಾತ್ರ. ಆದ್ದರಿಂದ ಮದುವೆಯಾದವರು ಮದುವೆಯಾಗದವರೋ ಎಂಬಂತೆ ನಡೆದುಕೊಳ್ಳಲಿ. ದುಃಖಿತರು ದುಃಖವಿಲ್ಲದವರಂತೆ, ಸಂತೋಷಭರಿತರು ಸಂತೋಷರಹಿತರಂತೆ ಹಾಗು ಕೊಂಡುಕೊಳ್ಳುವವರು ಕೊಂಡದ್ದು ತಮ್ಮದಲ್ಲವೋ ಎಂಬಂತೆ ನಡೆದುಕೊಳ್ಳಲಿ. ಲೋಕದ ವ್ಯವಹಾರದಲ್ಲಿ ಇರುವವರು ಅದರಲ್ಲಿಯೇ ತಲ್ಲಿನರಾಗದಿರಲಿ. ಏಕೆಂದರೆ, ಲೋಕದ ರೂಪರೇಷೆಗಳು ಗತಿಸಿ ಹೋಗುತ್ತವೆ.
ಕೀರ್ತನೆ: 45:11-12, 14-15, 16-17
ಶ್ಲೋಕ: ಎಲೇ ಕುವರಿಯೇ ಕೇಳು, ಎನ್ನ ಮೊರೆಗೆ ಕಿವಿಗೊಡು.
ಶುಭಸಂದೇಶ: ಲೂಕ 6:20-26
No comments:
Post a Comment