01.12.2018


ಸಾಧಾರಣ ಕಾಲದ 34ನೇ ಶನಿವಾರ

ಮೊದಲನೇ ವಾಚನ: ಪ್ರಕಟನೆ  22:1-7

ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ, ನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು ಆ ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತು. ಅದು ವರ್ಷದಲ್ಲಿ ಹನ್ನೆರಡು ಸಾರಿ ಫಲ ಕೊಡುವಂಥದ್ದು; ಪ್ರತೀ ತಿಂಗಳೂ ಫಸಲನ್ನೀಯುವಂಥದ್ದು. ಆ ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದು. ಶಾಪಗ್ರಸ್ತವಾದುದು ಯಾವುದು ಆ ನಗರದಲ್ಲಿ ಇರದು. ದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದು. ಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖದರ್ಶನವಾಗುವುದು. ಆ ಹೆಸರು ಆ ದಾಸರ ಹಣೆಗಳ ಮೇಲೆ ಲಿಖಿತವಾಗಿರುವುದು . ರಾತ್ರಿ ಎಂಬುದೇ ಇಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು. ಆನಂತರ ಆ ದೇವದೂತನು ನನಗೆ, "ಈ ಮಾತುಗಳು, ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮ ಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವುವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತರನ್ನೇ ಕಳಿಸಿದ್ದಾರೆ,  "ಯೇಸುಸ್ವಾಮಿ ನುಡಿಯುವುದನ್ನು ಕೇಳು: 'ಇಗೋ, ನಾನು ಬೇಗನೆ ಬರುತ್ತೇನೆ," ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ  ವಾಕ್ಯಗಳನ್ನು ಕೈಗೊಂಡು ನಡೆಯುವವನು ಧನ್ಯನು!" ಎಂದು ಹೇಳಿದನು.

ಕೀರ್ತನೆ: 95:1-2, 3-5, 6-7ab
ಶ್ಲೋಕ: ಪ್ರಭು ಯೇಸುವೇ, ಬನ್ನಿ.

ಶುಭಸಂದೇಶ: ಲೂಕ 21:34-36

"ಮಿತಿಮೀರಿದ ಭೋಜನದಿಂದಾಗಲೀ, ಕುಡಿತ ದಿಂದಾಗಲೀ, ಲೌಕಿಕ ಚಿಂತೆಗಳಿಂದಾಗಲೀ ಮಂದಮತಗಳಾಗಬೇಡಿ. ಆ ದಿನವು ಅನಿರಿಕ್ಷಿತ ಉರುಳಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ! ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ದರಾಗಿರಬೇಕು. ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮಂದೆ ನಿಲ್ಲಲ್ಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರಿಕೆಯಿಂದಿರಿ," ಎಂದರು ಯೇಸುಸ್ವಾಮಿ.

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...